ಬ್ರೇಕಿಂಗ್ ನ್ಯೂಸ್
29-09-21 11:06 pm Mangaluru Correspondent ಕರಾವಳಿ
ಮಂಗಳೂರು, ಸೆ.29: ರೌಡಿಗಳು, ಪುಂಡು ಪೋಕರಿಗಳ ಅಟ್ಟಹಾಸದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗೌರವಕ್ಕೆ ಧಕ್ಕೆಯಾಗಿದೆ. ಪೊಲೀಸರ ಭಯವಿಲ್ಲದೆ ರೌಡಿಗಳು ಮೆರೆದಾಡುತ್ತಿದ್ದು ಆಡಳಿತ ಪಕ್ಷದ ರಾಜಕೀಯ ಒತ್ತಡದಿಂದ ಪೊಲೀಸ್ ಇಲಾಖೆ ನಿಸ್ಸಹಾಯಕವಾಗಿದೆ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಪೊಲೀಸರು ರಾಜಕೀಯ ವ್ಯಕ್ತಿಗಳಿಗೆ ಗೌರವ ಕೊಡಬೇಕು. ಹಾಗೆಂದು ಕಾನೂನು ಪಾಲನೆಯಲ್ಲಿ ಲೋಪ ಆಗಬಾರದು. ಸಮಾಜದಲ್ಲಿ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದಲ್ಲಿ ಕಠಿಣ ಶಿಕ್ಷೆ ವಿಧಿಸುವುದು ಪೊಲೀಸ್ ಇಲಾಖೆ, ಜಿಲ್ಲಾಡಳಿತದ ಜವಾಬ್ದಾರಿ. ಪೊಲೀಸ್ ಇಲಾಖೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಅರಾಜಕತೆ ಸೃಷ್ಟಿಯಾಗಲಿದೆ ಎಂದರು.
ಇತ್ತೀಚೆಗೆ ಜಿಲ್ಲೆಯ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳಿದ್ದ ವಾಹನದ ಮೇಲೆ ದಾಳಿ ನಡೆಸಿ ಪೊಲೀಸರ ಮುಂದೆಯೇ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಇದರಿಂದಾಗಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಎತ್ತ ಕಡೆ ಹೋಗುತ್ತಿದೆ ಎಂದು ಕೇಳಬೇಕಾಗುತ್ತದೆ. ಪೊಲೀಸ್ ಇಲಾಖೆ ತಮ್ಮ ಲಾಠಿಯನ್ನು ಒಳಗಿಟ್ಟುಕೊಂಡರೆ, ಪ್ರತಿಯೊಬ್ಬರೂ ಲಾಠಿ ಹಿಡಿದೇ ತಿರುಗಾಡಬೇಕಾದ ಸ್ಥಿತಿ ಬರುತ್ತದೆ. ಹಿಂದೆ ಈ ರೀತಿಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಾಗ ಸುಮೋಟೊ ಕೇಸ್ ದಾಖಲಿಸುವ ಸ್ಥಿತಿ ಜಿಲ್ಲೆಯಲ್ಲಿತ್ತು. ಆದರೆ, ಮೊನ್ನೆ ಯಾಕೆ ಈ ಕೆಲಸ ಆಗಿಲ್ಲ? ಯಾರ ಒತ್ತಡ ಇತ್ತು? ಎಂದು ಪ್ರಶ್ನಿಸಿದರು.

ಈ ರೀತಿ ದಾಳಿ ಮಾಡುವವರು ಸಮಾಜಘಾತುಕ ಶಕ್ತಿಗಳು. ನಿಜವಾದ ದೇಶದ್ರೋಹಿಗಳು ಅಂದರೆ, ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡುವವರು. ಪೊಲೀಸ್ ಇಲಾಖೆ ರಾಜಕೀಯ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಅಸಹಾಯಕತೆ ತೋರಿದರೆ ದ.ಕ. ಜಿಲ್ಲೆಯ ಅಭಿವೃದ್ಧಿ ಕುಠಿತವಾಗಲಿದೆ. ಕಾನೂನು ಸುವ್ಯವಸ್ಥೆ ಬಲಗೊಳಿಸಲು ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡಲಿದೆ. ಈ ಬಗ್ಗೆ ಸಿಎಂ ಹಾಗೂ ರಾಜ್ಯ ಗೃಹ ಸಚಿವರ ಗಮನಕ್ಕೂ ತರಲಾಗುತ್ತದೆ ಎಂದು ಖಾದರ್ ಹೇಳಿದರು.
ಹಾನಗಲ್- ಸಿಂದಗಿ ಎರಡೂ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ
ಹಾನಗಲ್ ಹಾಗೂ ಸಿಂದಗಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ. ಬಿಜೆಪಿ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಭಾವನಾತ್ಮಕವಾಗಿ ಜನರನ್ನು ಮೂರ್ಖರನ್ನಾಗಿ ಮಾಡಲು ಈ ರಾಜ್ಯದಲ್ಲಿ ಸಾಧ್ಯವಿಲ್ಲ ಎಂದು ಅಲ್ಲಿನ ಮತದಾರರು ತೋರಿಸಲಿದ್ದಾರೆ. ಇದು ಹಾನಗಲ್ ಹಾಗೂ ಸಿಂದಗಿ ಕ್ಷೇತ್ರದ ಸ್ವಾಭಿಮಾನದ, ಗೌರವದ ಚುನಾವಣೆ ಆಗಲಿದೆ ಎಂದು ಶಾಸಕ ಖಾದರ್ ಹೇಳಿದರು.
Mangalore UT Khader slams Bjp govt over moral policing in Surathkal says police have no power.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am