ಬ್ರೇಕಿಂಗ್ ನ್ಯೂಸ್
03-10-21 09:15 pm Mangaluru correspondent ಕರಾವಳಿ
ಮಂಗಳೂರು, ಅ.3: ನಗರ ಹೊರವಲಯದ ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಹಿಂದು ಹುಡುಗಿಯರ ಜೊತೆ ಅನ್ಯಕೋಮಿನ ಯುವಕರು ಸಂಶಯಾಸ್ಪದ ನೆಲೆಯಲ್ಲಿ ಕಂಡುಬಂದಿದ್ದಾರೆಂದು ಬಜರಂಗದಳ ಕಾರ್ಯಕರ್ತರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರ ಬೆನ್ನಲ್ಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ನಾಲ್ವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಯುವಕ- ಯುವತಿಯರ ತಂಡ ಸುತ್ತಾಡಲು ಚಿಲಿಂಬಿ ಗುಡ್ಡೆಗೆ ಬಂದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಬಂದಿರುವುದನ್ನು ಗಮನಿಸಿದ್ದು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಯುವತಿಯರಿಬ್ಬರ ಮನೆಯವರಿಗೂ ಪೊಲೀಸರು ಮಾಹಿತಿ ರವಾನಿಸಿದ್ದಾರೆ.

ಇಬ್ಬರು ಯುವತಿಯರಲ್ಲಿ ಒಬ್ಬಾಕೆ 16 ವರ್ಷದ ಅಪ್ರಾಪ್ತ ಹುಡುಗಿಯಾಗಿದ್ದು ಆಕೆಯ ಪೋಷಕರು ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ. 16 ವರ್ಷದ ಹುಡುಗಿಯನ್ನು ಬಲವಂತದಿಂದ ಕರೆದೊಯ್ದಿದ್ದಾರೆ ಎಂದು ಆಕೆಯ ತಾಯಿ ಯುವಕರ ವಿರುದ್ಧ ದೂರು ನೀಡಿದ್ದು ಅದರಂತೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಇದಲ್ಲದೆ, ಇಬ್ಬರು ಯುವಕರು ಮಾದಕ ದ್ರವ್ಯ ಸೇವಿಸಿದ್ದು ಕಂಡುಬಂದಿದೆ. ಈ ಬಗ್ಗೆ ವೈದ್ಯಕೀಯ ತಪಾಸಣೆಯಲ್ಲಿ ಗಾಂಜಾ ಸೇವನೆ ಮಾಡಿದ್ದು ದೃಢಪಟ್ಟಿದೆ. ಹೀಗಾಗಿ ಎನ್ ಡಿಪಿಎಸ್ ಏಕ್ಟಿನಡಿ ಕೇಸು ದಾಖಲಿಸಿದ್ದಾರೆ.

ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದು ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ. ಬೋಂದೆಲ್ ನಿವಾಸಿ ಧೀರಜ್ ಮತ್ತು ಪಂಜಿಮೊಗರಿನ ಶಾಕೀರ್ ಬಂಧಿತರು. ಇವರಿಬ್ಬರು ಸ್ನೇಹಿತರಾಗಿದ್ದು ಶಾಕಿರ್ ಕಾರಿನಲ್ಲಿ ಚಿಲಿಂಬಿ ಗುಡ್ಡೆಗೆ ತೆರಳಿದ್ದರು. ಅಲ್ಲಿಗೆ ಧೀರಜ್ ಲವರ್ ಎನ್ನಲಾದ ಒಬ್ಬಳು ಹುಡುಗಿಯನ್ನೂ ಕರೆದಿದ್ದು ಆಕೆ ತನ್ನ ಸ್ನೇಹಿತೆಯನ್ನೂ ಕರೆತಂದಿದ್ದಾಳೆ. ಗುಡ್ಡಕ್ಕೆ ತೆರಳುವುದನ್ನು ಗಮನಿಸಿದ್ದ ಬಜರಂಗದಳ ಕಾರ್ಯಕರ್ತರು ಪೊಲೀಸರ ಗಮನಕ್ಕೆ ತಂದಿದ್ದಾರೆ.
Mangalore Muslim youth found inside car with Hindu girls at Gurupura, Bajpe have been arrested for consuming drugs and Pocso case have been registered as 16 year old Hindu girl was found inside the car. The incident came to light after VHP members informed the Cops.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm