ಬ್ರೇಕಿಂಗ್ ನ್ಯೂಸ್
10-09-20 06:17 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 10: ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ವಿಟ್ಲ ಪಿಂಡಿ ಉತ್ಸವ ಅತ್ಯಂತ ಸರಳವಾಗಿ ನಡೆದಿದೆ.
ಪರ್ಯಾಯ ಸ್ವಾಮೀಜಿ ಈಶಪ್ರೀಯ ಶ್ರೀಪಾದರು ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆ ಮಾಡಿದರು. ಅಲ್ಲದೆ, ವಿಟ್ಲ ಪಿಂಡಿ ಪ್ರಯುಕ್ತ ಶ್ರೀಕೃಷ್ಣನಿಗೆ ಇಂದು ಬಾಲಕೃಷ್ಣನ ಅಲಂಕಾರ ಮಾಡಲಾಗಿತ್ತು. ಕೃಷ್ಣನ ಮೂರ್ತಿಯ ಮುಂದೆ ಚಿನ್ನದ ತೊಟ್ಟಿಲಿಟ್ಟು ಸ್ವಾಮೀಜಿ ಕೃಷ್ಣನನ್ನು ವಿಶೇಷವಾಗಿ ಅಲಂಕರಿಸಿದರು. ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಶ್ರೀಗಳು ವಿಶೇಷ ಅಲಂಕಾರವನ್ನು ಮಾಡಿದ್ದಾರೆ.



ಅದಮಾರು ಮಠದ ಸ್ವಾಮೀಜಿ ಅಷ್ಟಮಿಯ ವಿಟ್ಲ ಪಿಂಡಿ ಪ್ರಯುಕ್ತ ಮಹಾಪೂಜೆ ನೆರವೇರಿಸಿದರು. ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಉತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು. ಕೃಷ್ಣಮಠದ ಸಿಬಂದಿ, ಅರ್ಚಕರು, ಸ್ವಾಮೀಜಿಗಳ ವಿನಾ ಬೇರೆ ಯಾರಿಗೂ ವಿಟ್ಲ ಪಿಂಡಿ ಉತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ಇರಲಿಲ್ಲ. ಹೊರಭಾಗದಲ್ಲಿ ಹೊರಗಿನ ಜನರು ಬರದಂತೆ ಪೊಲೀಸರು ಭದ್ರತೆ ಏರ್ಪಡಿಸಿದ್ದರು.
ಕೃಷ್ಣಾಷ್ಟಮಿ ಪ್ರಯುಕ್ತ ಸೆ.11ರಂದು ಮಧ್ಯಾಹ್ನ 3ರಿಂದ ಶ್ರೀಕೃಷ್ಣ ಲೀಲೋತ್ಸವ ನಡೆಯಲಿದ್ದು, ಜನದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ಮಧ್ಯಾಹ್ನ 12.30ರಿಂದ ಸಾಯಂಕಾಲ 5.30ರವರೆಗೆ ರಥಬೀದಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾಗಿ ಕೃಷ್ಣ ಮಠದ ಪ್ರಕಟಣೆ ತಿಳಿಸಿದೆ. ಇನ್ನೊಂದೆಡೆ, ಪರ್ಯಾಯ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಆಶಯದಂತೆ ಕೃಷ್ಣ ಪ್ರಸಾದ ವಿತರಣೆಗಾಗಿ ಮಠದಲ್ಲಿ ಒಂದು ಲಕ್ಷ ಉಂಡೆ ಹಾಗೂ ಒಂದು ಲಕ್ಷ ಚಕ್ಕುಲಿ ತಯಾರಿಸಲಾಗುತ್ತಿದೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm