ಬ್ರೇಕಿಂಗ್ ನ್ಯೂಸ್
04-10-21 03:51 pm Mangaluru Correspondent ಕರಾವಳಿ
ಸುಳ್ಯ, ಅ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೊನೆಗೂ ವಾರಂಟ್ ಪ್ರಕರಣದಲ್ಲಿ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ. ಅ.5ರಂದು ಬೆಳಗ್ಗೆ 11.30ಕ್ಕೆ ಸುಳ್ಯ ನ್ಯಾಯಾಲಯಕ್ಕೆ ಸ್ವತಃ ಡಿಕೆಶಿ ಹಾಜರಾಗಲಿದ್ದು, ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲಿದ್ದಾರೆ.
ಸಾಯಿ ಗಿರಿಧರ್ ರೈ ಎಂಬವರು ಸುಳ್ಯದಲ್ಲಿ ವಿದ್ಯುತ್ ಕೈಕೊಡುತ್ತಿದ್ದ ಬಗ್ಗೆ ಆರು ವರ್ಷಗಳ ಹಿಂದೆ ಆಗಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಗೆ ಫೋನ್ ಮಾಡಿ ಬೈದಿದ್ದರು. ಆನಂತರ, ಸಚಿವ ಡಿಕೆಶಿ ಸುಳ್ಯ ಎಇ ಮೂಲಕ ಗಿರಿಧರ್ ರೈ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದರು. ಪ್ರಕರಣ ಈಗ ಸುಳ್ಯ ನ್ಯಾಯಾಲಯದಲ್ಲಿದ್ದು, ನ್ಯಾಯಾಧೀಶರು ಸಾಕ್ಷಿದಾರ ಡಿಕೆಶಿಗೆ ಕೋರ್ಟಿಗೆ ಹಾಜರಾಗಿ ಹೇಳಿಕೆ ನೀಡುವಂತೆ ವಾರಂಟ್ ನೀಡಿದ್ದರು. ಮೂರು ಬಾರಿ ವಾರಂಟ್ ನೀಡಿದರೂ, ಕೋರ್ಟಿಗೆ ಹಾಜರಾಗದೆ ತಪ್ಪಿಸಿಕೊಂಡಿದ್ದರಿಂದ ನ್ಯಾಯಾಧೀಶರು ಗರಂ ಆಗಿದ್ದರು.
ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಲೇ ಎಚ್ಚೆತ್ತ ಡಿಕೆಶಿ, ಅ.5ರಂದು ಸುಳ್ಯ ನ್ಯಾಯಾಲಯಕ್ಕ ಹಾಜರಾಗಲು ನಿರ್ಧರಿಸಿದ್ದಾರೆ. ಇದರ ಜೊತೆಗೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹೋಗಲು ಪ್ಲಾನ್ ಹಾಕಿದ್ದಾರೆ. ಬೆಂಗಳೂರಿನಿಂದ ಬೆಳಗ್ಗೆ ಎಂಟುಪ ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿರುವ ಡಿಕೆಶಿ, ಅಲ್ಲಿಂದ ರಸ್ತೆ ಮೂಲಕ ಸುಳ್ಯಕ್ಕೆ ತೆರಳಲಿದ್ದಾರೆ. ಆನಂತರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿದ್ದು ಮಧ್ಯಾಹ್ನ ಪೂಜೆ ಬಳಿಕ ಮೂರು ಗಂಟೆಗೆ ಅಲ್ಲಿಂದ ನಿರ್ಗಮಿಸಿ ಸಂಜೆ 5 ಗಂಟೆಗೆ ಮಂಗಳೂರು ತಲುಪಲಿದ್ದಾರೆ. ರಾತ್ರಿ ಎಂಟು ಗಂಟೆ ವಿಮಾನದಲ್ಲಿ ಮರಳಿ ಬೆಂಗಳೂರಿಗೆ ತೆರಳಲಿದ್ದಾರೆ.
Karnataka Pradesh Congress Committee (KPCC) president D K Shivakumar will attend a court hearing at 11.30 am on October 5 as a witness with regards to a telephonic conversation case that was held between him and Sai Giridhar, a resident of Bellare six years ago.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm