ಬ್ರೇಕಿಂಗ್ ನ್ಯೂಸ್
06-10-21 10:57 am Mangaluru Correspondent ಕರಾವಳಿ
ಮಂಗಳೂರು, ಅ.6: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನಗರದ ಕಾಲೇಜು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ (21) ಮೃತ ವಿದ್ಯಾರ್ಥಿನಿ. ಕೊಲಾಸೋ ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದ ನೀನಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು. ಮಂಗಳವಾರ ಸಂಜೆ ಹಾಸ್ಟೆಲ್ ಕೊಠಡಿಯ ಬಾತ್ ರೂಮಿನಲ್ಲಿ ಈಕೆ ನೇಣು ಬಿಗಿದುಕೊಂಡಿದ್ದಾಳೆ. ನೇಣು ಹಾಕಿದ್ದನ್ನು ನೋಡಿದ ಜೊತೆಗಿದ್ದ ಇನ್ನೊಬ್ಬ ಹುಡುಗಿ ಆಘಾತಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಅಲ್ಲಿನ ಸಿಬಂದಿ ನೇಣು ಕುಣಿಕೆಯಿಂದ ತೆಗೆದು ನೀನಾ ಮತ್ತು ಪ್ರಜ್ಞೆ ಕಳಕೊಂಡಿದ್ದ ಇನ್ನೊಬ್ಬ ಹುಡುಗಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ನೀನಾ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆತ್ಮಹತ್ಯೆಗೆ ಹಾಸ್ಟೆಲ್ ನಲ್ಲಿ ನೀಡುತ್ತಿದ್ದ ಮಾನಸಿಕ ಕಿರುಕುಳವೇ ಕಾರಣ ಎಂದು ಇತರ ವಿದ್ಯಾರ್ಥಿಗಳು ದೂರಿದ್ದಾರೆ. ಮನೆಯವರ ಜೊತೆ ಮಾತನಾಡುವುದಕ್ಕೆ, ಮೊಬೈಲ್ ಬಳಕೆ ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಾಲೇಜು ಆಡಳಿತಕ್ಕೆ ಕೇರಳದಿಂದ ವಿದ್ಯಾರ್ಥಿಗಳನ್ನು ಪೂರೈಸುವ ಏಜಂಟ್ ಒಬ್ಬ ಹಾಸ್ಟೆಲ್ ನಡೆಸುತ್ತಿದ್ದ ಎನ್ನಲಾಗುತ್ತಿದೆ. ಆತ ಕೂಡ ಕೇರಳ ಮೂಲದ ವ್ಯಕ್ತಿಯೇ ಆಗಿದ್ದು ವಿದ್ಯಾರ್ಥಿಗಳಿಗೆ ನಿರ್ಬಂಧ ನೆಪದಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ದೂರಿದ್ದಾರೆ.
ವಿದ್ಯಾರ್ಥಿನಿ ನೀನಾ ಡೈರಿ ಬರೆಯುವ ಅಭ್ಯಾಸ ಹೊಂದಿದ್ದು ಈ ಬಗ್ಗೆ ಡೈರಿಯಲ್ಲಿ ಬರೆದುಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆ ಬಗ್ಗೆ ಡೆತ್ ನೋಟ್ ರೂಪದಲ್ಲಿ ಅದರಲ್ಲಿ ಬರೆದಿದ್ದಾಳೆಯೇ ಎಂಬುದು ತಿಳಿದುಬಂದಿಲ್ಲ.
Mangalore Colaco nursing college student commits suicide in hostel Mental torture by officials suspected. The deceased has been identified as Neena (21) resident of Kannur.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm