ಬ್ರೇಕಿಂಗ್ ನ್ಯೂಸ್
06-10-21 10:57 am Mangaluru Correspondent ಕರಾವಳಿ
ಮಂಗಳೂರು, ಅ.6: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನಗರದ ಕಾಲೇಜು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ (21) ಮೃತ ವಿದ್ಯಾರ್ಥಿನಿ. ಕೊಲಾಸೋ ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದ ನೀನಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು. ಮಂಗಳವಾರ ಸಂಜೆ ಹಾಸ್ಟೆಲ್ ಕೊಠಡಿಯ ಬಾತ್ ರೂಮಿನಲ್ಲಿ ಈಕೆ ನೇಣು ಬಿಗಿದುಕೊಂಡಿದ್ದಾಳೆ. ನೇಣು ಹಾಕಿದ್ದನ್ನು ನೋಡಿದ ಜೊತೆಗಿದ್ದ ಇನ್ನೊಬ್ಬ ಹುಡುಗಿ ಆಘಾತಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಅಲ್ಲಿನ ಸಿಬಂದಿ ನೇಣು ಕುಣಿಕೆಯಿಂದ ತೆಗೆದು ನೀನಾ ಮತ್ತು ಪ್ರಜ್ಞೆ ಕಳಕೊಂಡಿದ್ದ ಇನ್ನೊಬ್ಬ ಹುಡುಗಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ನೀನಾ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆತ್ಮಹತ್ಯೆಗೆ ಹಾಸ್ಟೆಲ್ ನಲ್ಲಿ ನೀಡುತ್ತಿದ್ದ ಮಾನಸಿಕ ಕಿರುಕುಳವೇ ಕಾರಣ ಎಂದು ಇತರ ವಿದ್ಯಾರ್ಥಿಗಳು ದೂರಿದ್ದಾರೆ. ಮನೆಯವರ ಜೊತೆ ಮಾತನಾಡುವುದಕ್ಕೆ, ಮೊಬೈಲ್ ಬಳಕೆ ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಾಲೇಜು ಆಡಳಿತಕ್ಕೆ ಕೇರಳದಿಂದ ವಿದ್ಯಾರ್ಥಿಗಳನ್ನು ಪೂರೈಸುವ ಏಜಂಟ್ ಒಬ್ಬ ಹಾಸ್ಟೆಲ್ ನಡೆಸುತ್ತಿದ್ದ ಎನ್ನಲಾಗುತ್ತಿದೆ. ಆತ ಕೂಡ ಕೇರಳ ಮೂಲದ ವ್ಯಕ್ತಿಯೇ ಆಗಿದ್ದು ವಿದ್ಯಾರ್ಥಿಗಳಿಗೆ ನಿರ್ಬಂಧ ನೆಪದಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ದೂರಿದ್ದಾರೆ.
ವಿದ್ಯಾರ್ಥಿನಿ ನೀನಾ ಡೈರಿ ಬರೆಯುವ ಅಭ್ಯಾಸ ಹೊಂದಿದ್ದು ಈ ಬಗ್ಗೆ ಡೈರಿಯಲ್ಲಿ ಬರೆದುಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆ ಬಗ್ಗೆ ಡೆತ್ ನೋಟ್ ರೂಪದಲ್ಲಿ ಅದರಲ್ಲಿ ಬರೆದಿದ್ದಾಳೆಯೇ ಎಂಬುದು ತಿಳಿದುಬಂದಿಲ್ಲ.
Mangalore Colaco nursing college student commits suicide in hostel Mental torture by officials suspected. The deceased has been identified as Neena (21) resident of Kannur.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm