ಬ್ರೇಕಿಂಗ್ ನ್ಯೂಸ್
06-10-21 10:32 pm Mangaluru Correspondent ಕರಾವಳಿ
ಮಂಗಳೂರು, ಅ.6: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೂರು ದಿನಗಳ ಕರ್ನಾಟಕ ಪ್ರವಾಸಕ್ಕೆ ಆಗಮಿಸಿದ್ದಾರೆ. ಇಂದು ಸಂಜೆ ವಾಯುಪಡೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿರುವ ಕೋವಿಂದ್ ನಾಳೆ (ಅ.7) ಮೈಸೂರಿಗೆ ತೆರಳಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಮೈಸೂರಿನಲ್ಲಿ ಬಿಳಿಗಿರಿ ರಂಗನಸ್ವಾಮಿ ದೇವಸ್ಥಾನಕ್ಕೆ ತೆರಳಿ, ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆಬಳಿಕ ಚಾಮರಾಜನಗರಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಲಿದ್ದು 3.30 ಕ್ಕೆ 450 ಬೆಡ್ ಸಾಮರ್ಥ್ಯದ ಸರಕಾರಿ ಆಸ್ಪತ್ರೆ ಕಟ್ಟಡವನ್ನು ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ.

ಸಂಜೆ 5.15 ಕ್ಕೆ ವಾಯುಪಡೆ ವಿಮಾನದಲ್ಲಿ ಮೈಸೂರಿನಿಂದ ಮಂಗಳೂರಿಗೆ ಆಗಮಿಸಲಿದ್ದು 6.30 ಕ್ಕೆ ಮಂಗಳೂರು ನಗರ ತಲುಪಲಿದ್ದಾರೆ. ಕದ್ರಿಯ ಸರ್ಕಿಟ್ ಹೌಸ್ ಅಥವಾ ಓಶ್ಯನ್ ಪರ್ಲ್ ಹೊಟೇಲ್ ನಲ್ಲಿ ವಾಸ್ತವ್ಯ ನಡೆಸುವುದಕ್ಕೆ ಎರಡೂ ಕಡೆಗಳಲ್ಲಿ ಬಂದೋಬಸ್ತ್ ನಡೆಸಲಾಗಿದೆ. ರಾತ್ರಿ ವೇಳೆ ಯಾವುದೇ ಕಾರ್ಯಕ್ರಮ ಇರುವುದಿಲ್ಲ.
ಅ.8ರಂದು ಬೆಳಗ್ಗೆ 10.30 ಕ್ಕೆ ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಮಂಗಳೂರು ವಿಮಾನ ನಿಲ್ದಾಣದಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತೆರಳಲಿದ್ದಾರೆ. 12 ಗಂಟೆಗೆ ಶೃಂಗೇರಿಗೆ ತಲುಪಲಿದ್ದು ಅಲ್ಲಿ ಶೃಂಗೇರಿ ಶಾರದಾ ಪೀಠ ಮತ್ತು ಶಂಕರ ಅದ್ವೈತ ಶೋಧ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ದೇವರ ದರ್ಶನ ನಡೆಸಿ, ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ, ಶೃಂಗೇರಿ ಶಾರದಾ ಪೀಠದ ಭಾರತೀ ತೀರ್ಥ ಸ್ವಾಮೀಜಿ ಅವರನ್ನು ರಾಷ್ಟ್ರಪತಿ ಭೇಟಿಯಾಗಲಿದ್ದಾರೆ.
ಸಂಜೆ ನಾಲ್ಕು ಗಂಟೆಗೆ ಶೃಂಗೇರಿಯಿಂದ ಹೆಲಿಕಾಪ್ಟರ್ ಮೂಲಕ ಮರಳಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು 5.10ಕ್ಕೆ ವಾಯುಪಡೆ ವಿಶೇಷ ವಿಮಾನದಲ್ಲಿ ರಾಜಧಾನಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಮೊದಲು 7 ಮತ್ತು 8 ರಂದು ರಾಷ್ಟ್ರಪತಿ ಮಂಗಳೂರು ನಗರದಲ್ಲಿ ಉಳಿಯಲಿದ್ದಾರೆಂದು ಹೇಳಲಾಗಿತ್ತು. ಆದರೆ ಕೊನೆಕ್ಷಣದಲ್ಲಿ 8 ರಂದು ಮಂಗಳೂರು ನಗರದಲ್ಲಿ ಉಳಿಯುವುದನ್ನು ರದ್ದುಪಡಿಸಿ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ.
ಅಂದಹಾಗೆ, ರಾಮನಾಥ ಕೋವಿಂದ್ ಅತ್ಯುನ್ನತ ಹುದ್ದೆಗೇರಿದ ಬಳಿಕ ಮೊದಲ ಬಾರಿಗೆ ಮೈಸೂರು ಮತ್ತು ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಶೃಂಗೇರಿ ಭೇಟಿ ನೀಡುವ ಕಾರಣಕ್ಕೆ ಮಂಗಳೂರು ಭೇಟಿ ನೀಡುತ್ತಿದ್ದಾರೆ. ವಿಶೇಷ ಅಂದ್ರೆ, ಪರಿಶಿಷ್ಟ ವರ್ಗಕ್ಕೆ ಸೇರಿದ ಉನ್ನತ ಹುದ್ದೆಯ ವ್ಯಕ್ತಿಯೊಬ್ಬರು ಮೊದಲ ಬಾರಿಗೆ ಶೃಂಗೇರಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ.

ಮಂಗಳೂರಿನಲ್ಲಿ ಫುಲ್ ಅಲರ್ಟ್
ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಪೊಲೀಸ್ ಮತ್ತು ಭದ್ರತಾ ಪಡೆಗಳನ್ನು ಫುಲ್ ಅಲರ್ಟ್ ಮಾಡಲಾಗಿದೆ. ಕದ್ರಿ ಸರ್ಕಿಟ್ ಹೌಸ್ ಆವರಣಕ್ಕೆ ಯಾವುದೇ ವ್ಯಕ್ತಿಯನ್ನು ಒಳಬಿಡದೆ ತಪಾಸಣೆ ಬಿಗಿಗೊಳಿಸಲಾಗಿದೆ. ಅತ್ಯುನ್ನತ ಹುದ್ದೆಯ ವ್ಯಕ್ತಿ ಭೇಟಿ ಹಿನ್ನೆಲೆ 15 ದಿನಗಳ ಮೊದಲೇ ದೆಹಲಿಯ ಎಸ್ ಪಿಜಿ ತಂಡ ಮಂಗಳೂರಿಗೆ ಬಂದು ಭದ್ರತೆಯನ್ನು ಅವಲೋಕಿಸಿದೆ. ಇತ್ತೀಚೆಗೆ ಸ್ಯಾಟಲೈಟ್ ಫೋನ್ ಸಂಪರ್ಕ ಪತ್ತೆ ಇನ್ನಿತರ ಉಗ್ರ ಚಟುವಟಿಕೆ ಕಾರಣದಿಂದಲೂ ಕರಾವಳಿ ನಗರಿಗೆ ರಾಷ್ಟ್ರಪತಿ ಭೇಟಿ ನೀಡುವುದು ಭಾರೀ ಮಹತ್ವ ಪಡೆದಿದೆ.
President Ram Nath Kovind arrived on a 3-day visit to Karnataka at the HAL airport on Wednesday. The President was received at the HAL airport by Governor Thaawar Chand Ghehlot and Chief Minister Basavaraj Bommai. Kovind will be inaugurating the 450-bed hospital in the Chamarajanagara district in the presence of Bommai on Thursday.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm