ಬ್ರೇಕಿಂಗ್ ನ್ಯೂಸ್
10-09-20 10:51 pm Puttur Correspondent ಕರಾವಳಿ
ಮಂಗಳೂರು, ಸಪ್ಟೆಂಬರ್ 10: ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು ಇದರ ಆಶ್ರಯದಲ್ಲಿ 14 ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಗೋಪಾಲಕೃಷ್ಣ ಅಡಿಗ ನೇತೃತ್ವದಲ್ಲಿ ಧಾರ್ಮಿಕ ವಿಧಿ ನೆರವೇರಿತು.
ಪೂಜೆಯ ಬಳಿಕ ಶ್ರೀ ಕೃಷ್ಣ ವೇಷ ಪೋಟೋ ಸ್ಪರ್ಧೆ 2020 ರ ಬಹುಮಾನ ವಿತರಣೆ ಕಾರ್ಯಕ್ರಮವು ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕರಾದ ಹೇಮನಾಥ ಶೆಟ್ಟಿ ಕಾವು ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ದಿವ್ಯನಾಥ್ ಶೆಟ್ಟಿ ಕಾವು, ಸದಾಶಿವ ರೈ ಸೂರಂಬೈಲು, ಶ್ರೀ ರವೀಂದ್ರ ಭಂಡಾರಿ ಬೈಕ್ರೋಡ್, ಮಾಜಿ ಸೈನಿಕರಾದ ಪುಷ್ಪರಾಜ್ ಶೆಟ್ಟಿ ಕೋಟೆ, ಉಪೇಂದ್ರ ಬಲ್ಯಾಯ, ಬಾಬು ರೈ ಕೋಟೆ ಯಾದವ ಸಭಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ವಿಜಯ ಮಣಿಯಾಣಿ ಭರಣ್ಯ ಉಪಸ್ಥಿತರಿದ್ದರು.

ಶ್ರೀಕೃಷ್ಣ ವೇಷ ಪೋಟೋ ಸ್ಪರ್ಧೆಯಲ್ಲಿ ಪಾಣಾಜೆ ಹಾಗೂ ಬೆಟ್ಟಂಪಾಡಿ ವ್ಯಾಪ್ತಿಯ 68 ಮಕ್ಕಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮಾ.ಅಕ್ಷಜ್.ಪಿ.ಶೆಟ್ಟಿ, ದ್ವಿತೀಯ ಸ್ಥಾನ ಮಾ.ಮಯಾಂಕ್ ಜೆ.ಕೆ ರೈ, ತೃತೀಯ ಸ್ಥಾನ ಗೃತಿಕಾ ಎಂ.ಎಸ್ ಪಡೆದುಕೊಂಡರು. ತೀರ್ಪುಗಾರರಾಗಿ ಕೊಯ್ಯೂರು ಪದವಿಪೂರ್ವ ಕಾಲೇಜಿನ ಉಪನ್ಯಾಸಕಾರಾದ ಬಾಲಕೃಷ್ಣ ಬೇರಿಕೆ, ಚಿತ್ರಕಲಾವಿದರಾದ ಯೊಗೀಶ್ ಕಡಂದೇಲು ಹಾಗೂ ಶಿಲ್ಪಿಯಾದ ಡಾ. ಮೋಹನ್ ಜಿ.ಎಸ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ಮೇಶಾ ಪ್ರಿಂಟರ್ಸ್ ನ ಮಾಲಕರಾದ ಗಂಗಾಧರ್ ಇವರನ್ನು ಸನ್ಮಾನಿಸಲಾಯಿತು.
ಪುತ್ತೂರು ಯಾದವ ಸಭಾ ಯುವ ವೇದಿಕೆ ಅಧ್ಯಕ್ಷರಾದ ಶ್ರೀಹರಿ ಪಾಣಾಜೆ ಸ್ವಾಗತಿಸಿ ಪ್ರಕಾಶ್ ಕುಲಾಲ್ ವಂದಿಸಿದರು. ಶ್ರೀ ಪ್ರಸಾದ್ ಪಾಣಾಜೆ ಕಾರ್ಯಕ್ರಮ ನಿರೂಪಿಸಿದರು.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm