ಬ್ರೇಕಿಂಗ್ ನ್ಯೂಸ್
09-10-21 03:51 pm Mangalore Reporter ಕರಾವಳಿ
ಉಳ್ಳಾಲ, ಅ.9 : ಕಾಶ್ಮೀರದಲ್ಲಿ ಹಿಂದುಗಳ ಹತ್ಯೆ ಮತ್ತು ಹಿಂಸಾಚಾರವನ್ನ ಖಂಡಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡದ ವತಿಯಿಂದ ತೊಕ್ಕೊಟ್ಟಿನಲ್ಲಿ ಜಿಹಾದಿ ಪ್ರತಿಕೃತಿಯನ್ನ ದಹಿಸಿ ಪ್ರತಿಭಟನೆ ನಡೆಸಲಾಯಿತು.
ಹಿಂದು ಸಂಘಟನೆ ಮುಖಂಡ ಆಶಿಕ್ ಮಾಡೂರು ಮಾತನಾಡಿ, ಕಾಶ್ಮೀರದಲ್ಲಿ ಆರ್ಟಿಕಲ್ 370 ಕಾಯ್ದೆಯನ್ನ ರದ್ದು ಮಾಡಿದ ಪರಿಣಾಮ ಪಾಕಿಸ್ಥಾನಿ ಜಿಹಾದಿಗಳು, ಕಾಶ್ಮೀರದ ಮುಸ್ಲಿಂ ಮೂಲಭೂತವಾದಿಗಳಲ್ಲಿ ನಡುಕ ಹುಟ್ಟಿದೆ. ಅದಕ್ಕಾಗಿ ಈಗ ಅಲ್ಲಿನ ಹಿಂದುಗಳನ್ನ ಹುಡುಕಿ ಹತ್ಯೆ ಮಾಡುತ್ತಿದ್ದಾರೆ. ಕಾಶ್ಮೀರಿ ಪಂಡಿತರಿಗೆ ವಿಶ್ವ ಹಿಂದು ಪರಿಷತ್ ಬಜರಂಗದಳ ಸದಾ ನೈತಿಕ ಬೆಂಬಲ ನೀಡುತ್ತದೆ. ಎಂಬತ್ತು ಶೇಕಡ ಹಿಂದೂಗಳು ಜಾತಿ ಭೇದ ಮರೆತು ಒಂದಾಗಿ ಜಿಹಾದಿಗಳ ವಿರುದ್ಧ ಸೆಟೆದು ನಿಂತರೆ ಭಾರತದಲ್ಲಿ ನೆಲೆಸುವ ಪ್ರತಿಯೊಬ್ಬರೂ ವಂದೇ ಮಾತರಂ, ಜೈ ಶ್ರೀರಾಂ ಹೇಳಲೇಬೇಕಾದ ಕಾಲ ಬರುತ್ತದೆ ಎಂದರು.

ಭಾರತ ಸ್ವಾತಂತ್ರ್ಯಗೊಂಡ ಸಂದರ್ಭದಲ್ಲಿ ಪಾಕಿಸ್ಥಾನ, ಭಾರತ ಎಂದು ದೇಶವನ್ನ ವಿಂಗಡಿಸಲಾಯಿತು. ಆದರೂ ಇಂದಿಗೂ ಮೂವತ್ತು ಶೇಕಡ ಕಾಶ್ಮೀರ ನಮ್ಮ ಕೈ ತಪ್ಪಲು ಯಾರು ಕಾರಣರೆಂದು ದೇಶದ ಜನರಿಗೆ ತಿಳಿದಿದೆ ಎಂದರು.

ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮಾತನಾಡಿ ಕಾಶ್ಮೀರಿ ಪಂಡಿತರನ್ನ ಅಲ್ಲಿನ ಮೂಲ ನಿವಾಸಿಗಳೆಂದು ಪರಿಗಣಿಸಿದರೂ ಸಹ ಅಲ್ಲಿನ ಮುಸ್ಲಿಂ ಮೂಲಭೂತವಾದಿಗಳು, ಜಿಹಾದಿಗಳು ಹಿಂದೂಗಳ ಹತ್ಯೆ ನಡೆಸುತ್ತಿದ್ದಾರೆ. ಕಾಶ್ಮೀರದಲ್ಲಿ ಅರಾಜಕತೆ ಸೃಷ್ಟಿಸಿದ ಕ್ರಿಮಿಗಳಿಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ತಕ್ಕ ಉತ್ತರ ನೀಡಲಿದೆ ಎಂದು ಎಚ್ಚರಿಸಿದರು.

ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷ ನಾರಾಯಣ ಕುಂಪಲ, ಗೌರವಾಧ್ಯಕ್ಷರಾದ ಹರಿದಾಸ್ ಮಾಡೂರು, ಪ್ರಮುಖರಾದ ಪದ್ಮನಾಭ ಮರ್ಕೆದು, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್, ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಪ್ರಮುಖರಾದ ಪುರುಷೋತ್ತಮ ಕಲ್ಲಾಪು, ಸತೀಶ್ ಶೆಟ್ಟಿ ಮೊದಲಾದವರು ಪ್ರತಿಭಟನೆಯಲ್ಲಿದ್ದರು.
Bajrang Dal had given a nation wide call to hold protests against the assassination of Hindus and atrocities heaped on them in Kashmir.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am