ಬ್ರೇಕಿಂಗ್ ನ್ಯೂಸ್
12-10-21 01:27 pm Mangalore Reporter ಕರಾವಳಿ
ಪುತ್ತೂರು, ಅ.12 : ಕೆಎಸ್ ಆರ್ ಟಿಸಿ ಬಸ್ ಚಾಲಕನ ಧಾವಂತಕ್ಕೆ ತಾಯಿ, ಮಗು ಪ್ರಾಣ ಕಳಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ತಾಯಿ ತನ್ನ ಒಂದು ವರ್ಷದ ಮಗುವಿನ ಜೊತೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕೆಎಸ್ಸಾರ್ಟಿಸಿ ಬಸ್, ಅವರ ಮೇಲಿನಿಂದ ಹರಿದು ದುರಂತ ಸಂಭವಿಸಿದೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಆಕೆಯ ಒಂದು ವರ್ಷದ ಪುತ್ರ ಶಾಹೀಲ್ ಮೃತ ದುರ್ದೈವಿಗಳು. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಇಂದು ಬೆಳಗ್ಗೆ ವೈದ್ಯರ ಬಳಿಗೆಂದು ಪುತ್ತೂರಿಗೆ ಮಗುವಿನ ಜೊತೆ ಹೊರಟಿದ್ದರು.
ಬಸ್ ಬಂತೆಂದು ತಿಳಿದು ಬಸ್ ನಿಲ್ದಾಣಕ್ಕೆ ತಿರುಗುವಲ್ಲೇ ಇರುವ ನಂದಿನಿ ಹಾಲಿನ ಬೂತಿನ ಎದುರಿನಿಂದ ಮತ್ತೊಂದು ಕಡೆಗೆ ಶಾಹಿದಾ ಮಗುವಿನೊಂದಿಗೆ ರಸ್ತೆ ದಾಟಿದ್ದರು. ಇದೇ ವೇಳೆ ಯಮದೂತನಂತೆ ನುಗ್ಗಿದ ಬಸ್, ತಾಯಿ ಮಗುವಿನ ಮೇಲೆ ಹರಿದಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಕ್ಷಣಕಾಲದಲ್ಲಿ ನಡೆದು ಹೋಗಿದ್ದ ಘಟನೆಯಿಂದಾಗಿ ತಾಯಿ, ಮಗುವಿನ ಪ್ರಾಣ ಹೋಗಿದೆ. ಘಟನೆಯ ಬೆನ್ನಲ್ಲೇ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಸೇರಿದ್ದು ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಲ್ಲೆ ನಡೆಸುವಷ್ಟರ ಮಟ್ಟಿಗೆ ಹೋಗಿದ್ದು ಬಳಿಕ ಪೊಲೀಸರು ಬಂದು ಜನರನ್ನು ಚದುರಿಸಿದ್ದಾರೆ.
In an unfortunate incident, a woman and her one-and-half-year-old son were killed in a road accident on Tuesday October 12. The deceased are identified as Shahida (25), wife of Siddiq, a resident of Shirlal in Beltangady taluk and her son Shaheel.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am