ಬ್ರೇಕಿಂಗ್ ನ್ಯೂಸ್
13-10-21 11:32 am Mangalore Reporter ಕರಾವಳಿ
ಉಳ್ಳಾಲ, ಅ.13 : ಎಡೆ ಬಿಡದೆ ಸುರಿಯುತ್ತಿರುವ ಮಳೆಗೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾನಗರ ಲೇ ಔಟ್ ನಲ್ಲಿ ನಿನ್ನೆ ರಾತ್ರಿ ವಿದ್ಯುತ್ ಕಂಬವೊಂದು ರಸ್ತೆಗುರುಳಿದ್ದು ಮೆಸ್ಕಾಂ ನಿರ್ಲಕ್ಷ್ಯದ ನಡುವೆಯೂ ಭಾರೀ ಅನಾಹುತ ತಪ್ಪಿದೆ.
ಅಂಬಿಕಾ ನಗರದ ಲೇ ಔಟ್ ನ ಬೃಹತ್ ಮೋರಿಯ ಬದಿಯಲ್ಲಿ ಇದ್ದ ವಿದ್ಯುತ್ ಕಂಬವು ನಿನ್ನೆ ರಾತ್ರಿ 11.30 ವೇಳೆಗೆ ರಸ್ತೆಗುರುಳಿ ಬಿದ್ದಿದೆ. ನಿರಂತರ ಮಳೆಯಿಂದಾಗಿ ಮಣ್ಣು ಸಡಿಲಗೊಂಡು ವಿದ್ಯುತ್ ಕಂಬವು ರಸ್ತೆಗುರುಳಿ ಬಿದ್ದಿದೆ. ರಸ್ತೆಯಲ್ಲಿ ವಿದ್ಯುತ್ ಹೈಟೆನ್ಷನ್ ತಂತಿಗಳು ಬಿದ್ದಿದ್ದರೂ ವಿದ್ಯುತ್ ಕಡಿತ ಆಗಿರಲಿಲ್ಲ. ಈ ವೇಳೆ ಸಮಯ ಪ್ರಜ್ಞೆ ಮೆರೆದ ಸ್ಥಳೀಯರು ಮೆಸ್ಕಾಂನವರನ್ನ ಕಾಯದೆ ಪಕ್ಕದ ನಿವಾಸಿ ಲೈನ್ ಮ್ಯಾನ್ ಓರ್ವರನ್ನು ಕರೆಸಿ ವಿದ್ಯುತ್ ಕಡಿತಗೊಳಿಸಿದ್ದಾರೆ. ಘಟನೆಯಿಂದ ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ರಸ್ತೆಗೆ ಬಿದ್ದಿರುವ ವಿದ್ಯುತ್ ಕಂಬವನ್ನ ಸರಿಪಡಿಸುವ ಕಾರ್ಯ ನಡೆಯುತ್ತಿದೆ.



ಫೋನ್ ಕರೆ ಸ್ವೀಕರಿಸದ ಮೆಸ್ಕಾಂ ಸಿಬಂದಿ
ವಿದ್ಯುತ್ ಕಂಬ ರಸ್ತೆಗೆ ಬಿದ್ದ ಸಂದರ್ಭದಲ್ಲಿ ಅದೇ ದಾರಿಯಲ್ಲಿ ಬೈಕ್ ಸವಾರ ಬಂದಿದ್ದು ಸ್ಥಳೀಯ ಮಹಿಳೆಯೊಬ್ಬರು ಬೊಬ್ಬೆ ಹೊಡೆದು ತಡೆದಿದ್ದಾರೆ. ಪವರ್ ಸಪ್ಲೈ ನಿಲ್ಲಿಸಲು ಲೇ ಔಟ್ ನಿವಾಸಿ ಚರಣ್ ಪೂಜಾರಿಯವರು ಚೆಂಬುಗುಡ್ಡೆ ಮೆಸ್ಕಾಂನ ಸ್ಥಿರ ದೂರವಾಣಿಗೆ ಕರೆ ಮಾಡಿದರೂ ಯಾರೂ ಕರೆಯನ್ನ ಸ್ವೀಕರಿಸದ ಕಾರಣ ಮೆಸ್ಕಾಂನ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾರೆ. ಸ್ಥಳೀಯರು ಬಳಿಕ ಮೆಸ್ಕಾಂ ಸಿಬ್ಬಂದಿಗಳು ಬರುವವರೆಗೂ ಕಾಯದೆ ಪಕ್ಕದ ನಿವಾಸಿ ಮೆಸ್ಕಾಂನ ಸಿಬ್ಬಂದಿಯೋರ್ವನನ್ನ ಕರೆಸಿ ಪವರ್ ಸಪ್ಲೈ ಸ್ಥಗಿತಗೊಳಿಸಿದ್ದಾರೆ. ಸಂದಿಗ್ಧ ಪರಿಸ್ಥಿತಿಯಲ್ಲಿ ಫೋನ್ ಕರೆಯನ್ನು ಸ್ವೀಕರಿಸದ ಚೆಂಬುಗುಡ್ಡೆ ಮೆಸ್ಕಾಂ ನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಸಂಚಾರದ ಲೇ ಔಟ್ ರಸ್ತೆಯಲ್ಲಿ ಹಗಲು ಹೊತ್ತಲ್ಲಿ ಈ ಅವಘಡ ನಡೆದಲ್ಲಿ ಭಾರೀ ಅನಾಹುತವಾಗುವ ಸಂಭವವಿತ್ತು.
Heavy rains in Mangalore electric poles tumble in Someshwara huge danger averted. Residents allege negligence of Mescom.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm