ಬ್ರೇಕಿಂಗ್ ನ್ಯೂಸ್
13-10-21 10:58 pm Mangaluru Correspondent ಕರಾವಳಿ
ಮಂಗಳೂರು, ಅ.13: ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆದರಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇದೇ ಅ.16ರ ಶನಿವಾರ ಸುಳ್ಯ ತಾಲೂಕಿನ ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮಕ್ಕೆ ಭೇಟಿ ನೀಡಿ, ಅಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿಗಳು ಪ್ರತೀ ಮನೆಯ ಸರ್ವೇ ಮಾಡಿ, ಅಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿ ಅರ್ಜಿಗಳನ್ನು ಸ್ವೀಕರಿಸುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ.
ಆದಾಗ್ಯೂ ಸಾರ್ವಜನಿಕರು ನೇರವಾಗಿ ಆಹವಾಲುಗಳನ್ನು ನೀಡಲು ಇಚ್ಛಿಸಿದ್ದಲ್ಲಿ, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕುಕ್ಕುಜಡ್ಕದಲ್ಲಿ ಅರ್ಜಿ ನೀಡಬಹುದಾಗಿದೆ.
ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ಅಂದು ಜಿಲ್ಲಾಧಿಕಾರಿಗಳ ಜೊತೆಗಿದ್ದು, ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು, ಯಾವುದೇ ಸಮಸ್ಯೆ ಸ್ಥಳದಲ್ಲೇ ಬಗೆಹರಿಯದ್ದಿದ್ದಲ್ಲಿ, ಮುಂದಿನ ಸೂಕ್ತವಾದ ದಿನವನ್ನು ನಿರ್ಧರಿಸಿ ಆ ಗ್ರಾಮದಲ್ಲಿಯೇ ಮತ್ತೊಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುವುದು.
ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಸಮಚಿತ ವರ್ತನಗಳನ್ನು ಪಾಲನೆ ಮಾಡುವಂತೆ ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ, ಹೆಚ್ಚಿನ ಮಾಹಿತಿಯನ್ನು ಸುಳ್ಯ ತಾಲೂಕು ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.
Mangalore DC Rajendra to visit Sullia to give government awareness.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm