ಬ್ರೇಕಿಂಗ್ ನ್ಯೂಸ್
14-10-21 10:35 pm Mangaluru Correspondent ಕರಾವಳಿ
ಮಂಗಳೂರು, ಅ.14: ಹಿಂದು ಸಂಘಟನೆ ಕಾರ್ಯಕರ್ತರ ನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪರ - ವಿರೋಧ ನಡುವೆ, ಮತ್ತೊಂದೆಡೆ ಮುಖ್ಯಮಂತ್ರಿ ಬೊಮ್ಮಾಯಿ ಸಮರ್ಥನೆ, ಅದಕ್ಕೆ ಕೇಳಿ ಬರುತ್ತಿರುವ ಆಕ್ರೋಶ, ಇದರ ಬೆನ್ನಲ್ಲೇ ವಿಶ್ವ ಹಿಂದು ಪರಿಷತ್, ಬಜರಂಗದಳದ ನಾಯಕರು ಮಂಗಳೂರಿನಲ್ಲಿ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೆಪದಲ್ಲಿ ಶಸ್ತ್ರಗಳನ್ನು ಹಂಚಿದ್ದು ವಿವಾದಕ್ಕೆ ಕಾರಣವಾಗಿದೆ.
ಆಯುಧ ಪೂಜೆ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೀಡಿ, ಶಸ್ತ್ರಗಳಿಗೆ ಪೂಜೆ ನೆರವೇರಿಸಿದ್ದಾರೆ. ಬಜರಂಗದಳ ಮುಖಂಡ ರಘು ಸಕಲೇಶಪುರ ಮತ್ತು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ನೇತೃತ್ವದಲ್ಲಿ 150 ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕದ್ರಿಯ ವಿಹಿಂಪ ಕಚೇರಿಯಲ್ಲಿ ತ್ರಿಶೂಲ ನೆಪದಲ್ಲಿ ಹರಿತ ಕತ್ತಿಯನ್ನು ನೀಡಿದ್ದಾರೆ. ಅಲ್ಲದೆ, ಶಸ್ತ್ರ ಹಿಡಿಯಲು ಪ್ರೇರಣೆ ನೀಡುವ ರೀತಿ ಪ್ರತಿಜ್ಞೆ ಉಪದೇಶ ಮಾಡಿದ್ದಾರೆ. ಇದರ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಿಎಂ ಸಮರ್ಥನೆ ಬೆನ್ನಲ್ಲೇ ಹಿಂದು ಸಂಘಟನೆ ನಾಯಕರು, ತಮ್ಮ ಕಾರ್ಯಕರ್ತರಿಗೆ ಶಸ್ತ್ರ ಹಂಚಿದ್ದಾರೆಂದು ಟೀಕಿಸಲಾಗಿದೆ.



ಒಂದು ಕಡೆ ಮತಾಂತರ ವಿರುದ್ಧ ಜಾಗೃತಿ, ಹೋರಾಟ ಕೈಗೆತ್ತಿಕೊಂಡಿರುವ ಹಿಂದು ಸಂಘಟನೆಗಳು ಇದೀಗ ಕಾರ್ಯಕರ್ತರ ಕೈಗೆ ಬಹಿರಂಗವಾಗಿಯೇ ಶಸ್ತ್ರಗಳನ್ನು ಕೊಟ್ಟು ಯಾವ ಸಂದೇಶ ನೀಡಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಆತ್ಮರಕ್ಷಣೆ ಮತ್ತು ಸ್ವರಕ್ಷಣೆಗಾಗಿ ಶಸ್ತ್ರ ಅಗತ್ಯ ಎನ್ನುವ ಸಮರ್ಥನೆ ನೀಡುತ್ತಿದ್ದರೂ, ಈಗಿನ ಸನ್ನಿವೇಶ ಮಾತ್ರ ಶಸ್ತ್ರಗಳ ಹಂಚಿಕೆಗೆ ಬೇರೆಯದೇ ಅರ್ಥವನ್ನು ನೀಡಿದೆ. ಹೀಗಾಗಿ ಹಿಂದು ಸಂಘಟನೆಗಳ ಈ ರೀತಿಯ ನಡೆ ಟೀಕೆಗೆ ಗುರಿಯಾಗಿದ್ದು ಬಿಜೆಪಿ ಸರಕಾರದ ಆಡಳಿತದಲ್ಲಿ ವಿವಾದಕ್ಕೆ ಕಾರಣವಾಗಿದೆ.
Mangalore Vhp and Bajarang dal members with Trishul goes viral after CM Bommai Statement on Moral Policing creating controversy.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 03:39 pm
HK News Staffer
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am