ಬ್ರೇಕಿಂಗ್ ನ್ಯೂಸ್
11-09-20 12:21 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್ 11: ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಮಂಗಳೂರಿನ ಹಲವೆಡೆ ಕೃತಕ ನೆರೆ ಸೃಷ್ಟಿಯಾಗಿದೆ. ಜಪ್ಪಿನಮೊಗರು, ಕುಡುಪಾಡಿ ಪ್ರದೇಶದಲ್ಲಿ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು ಅಲ್ಲಿದ್ದ ನಿವಾಸಿಗಳನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ.

ಆರು ಮನೆಗಳ ನಿವಾಸಿಗಳು ನಿನ್ನೆ ರಾತ್ರಿಯೇ ಮನೆ ಬಿಟ್ಟು ಬೇರೆಡೆ ತೆರಳಿದ್ದರು. ಇಂದು ಬೆಳಗ್ಗೆ ಮತ್ತಷ್ಟು ಮನೆಗಳಿಗೆ ನೀರು ನುಗ್ಗಿದ್ದು ಅರ್ಧಕ್ಕೂ ಹೆಚ್ಚು ಮಟ್ಟದಲ್ಲಿ ಮನೆಗಳು ಮುಳುಗಡೆಯಾಗಿದೆ. ಪ್ರತಿ ಬಾರಿ ಜಪ್ಪಿನಮೊಗರಿನ ಕಂರ್ಭಿಸ್ಥಾನ ಏರಿಯಾದಲ್ಲಿ ಮಳೆನೀರು ಮನೆಗಳಿಗೆ ನುಗ್ಗುವುದು ಸಾಮಾನ್ಯವಾಗಿತ್ತು. ಈ ಬಾರಿ ಹೆದ್ದಾರಿಯ ಬಲಭಾಗದಲ್ಲಿ ಮಳೆನೀರು ಹರಿಯಲು ಸಾಧ್ಯವಾಗದೆ ಆ ಭಾಗದ ಮನೆಗಳಿಗೆ ನುಗ್ಗಿದೆ. ಗದ್ದೆ ಇದ್ದ ಜಾಗಕ್ಕೆ ಮಣ್ಣು ತುಂಬಿದ್ದರಿಂದ ನೀರು ಹರಿದು ಹೋಗಲು ಜಾಗ ಇಲ್ಲದೆ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಅಕ್ಕಪಕ್ಕದ ಮನೆಗಳು ಮುಳುಗಡೆಯಾಗುವ ಭೀತಿ ಎದುರಾಗಿದೆ. ಕೆಲವರು ಮನೆ ಬಿಟ್ಟು ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಮನೆಯ ಸಾಮಗ್ರಿಗಳನ್ನು ಉಳಿಸಿ ಬೇರೆಡೆ ಹೋದರೆ ಹೇಗೆ ಎನ್ನುವ ಪ್ರಶ್ನೆ ಮುಂದಿಡುತ್ತಿದ್ದಾರೆ. ಮಹಾನಗರ ಪಾಲಿಕೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಂಥ ಅವಸ್ಥೆ ಆಗಿದೆ ಎನ್ನುತ್ತಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳು ಅಲ್ಲಿನ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡುತ್ತಿದ್ದಾರೆ.

ಇನ್ನು ಮಂಗಳೂರಿನ ಕೊಟ್ಟಾರ ಚೌಕಿಯಲ್ಲೂ ಕೃತಕ ನೆರೆ ಸೃಷ್ಟಿಯಾಗಿದ್ದು ರಾಷ್ಟ್ರೀಯ ಹೆದ್ದಾರಿ ಮುಳುಗಡೆಯಾಗಿದೆ. ನಿನ್ನೆ ಸಂಜೆಯಿಂದಲೇ ನಿರಂತರ ಮಳೆಯಿಂದಾಗಿ ಕೊಟ್ಟಾರ ಹೆದ್ದಾರಿಯಲ್ಲಿ ನೀರು ನುಗ್ಗಿದ್ದು ವಾಹನ ಸಂಚಾರ ತೊಂದರೆಗೀಡಾಗಿತ್ತು. ಅವ್ಯವಸ್ಥೆ ಇಂದು ಕೂಡ ಮುಂದುವರಿದಿದೆ.
ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಇಡೀ ನಿರಂತರ ಮಳೆಯಾಗಿದ್ದು ಆತಂಕ ಸೃಷ್ಟಿಯಾಗಿದೆ. ಹವಾಮಾನ ಇಲಾಖೆ ಪ್ರಕಾರ, ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ.
Join our WhatsApp group for latest news updates
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am