ಬ್ರೇಕಿಂಗ್ ನ್ಯೂಸ್
20-10-21 10:10 pm Mangaluru Correspondent ಕರಾವಳಿ
ಮಂಗಳೂರು, ಅ.20: ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಬಳಿ ತಪಾಸಣೆ ನಿರತ ಪೊಲೀಸರ ಮೇಲೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಹಾಯಿಸಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಸಹ್ಯಾದ್ರಿ ಬಳಿಯ ನೇತ್ರಾವತಿ ನದಿಯ ಮರಳು ದಕ್ಕೆಯಿಂದ ಹೊರ ತೆರಳುತ್ತಿದ್ದ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚಿಸಿದಾಗ, ಟಿಪ್ಪರ್ ಲಾರಿ ಚಾಲಕ ಪೊಲೀಸರ ಮೇಲೆ ಹಾಯಿಸಲು ಯತ್ನಿಸಿ, ಬ್ಯಾರಿಕೇಡಿಗೆ ಡಿಕ್ಕಿಯಾಗಿ ಮುಂದಕ್ಕೆ ಸಾಗಿದ್ದಾನೆ.

ಆನಂತರ, ಅದರ ಬೆಂಗಾವಲಾಗಿ ಬಂದಿದ್ದ ಆಲ್ಟೋ ಕಾರನ್ನು ಕೂಡ ನಿಲ್ಲಿಸಲು ಸೂಚಿಸಿದಾಗ, ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಕಾರಿನ ಚಾಲಕನ ಬಳಿ ಕುಳಿತಿದ್ದ ವ್ಯಕ್ತಿ ಪೊಲೀಸರನ್ನು ಉದ್ದೇಶಿಸಿ, ನಿಮಗೆಷ್ಟು ಧೈರ್ಯ. ನಮ್ಮ ಲಾರಿಯನ್ನು ನಿಲ್ಲಿಸುತ್ತೀರಾ.. ಲೋಫರ್ಸ್ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾರು ನಿಲ್ಲಿಸದೇ ಪರಂಗಿಪೇಟೆ ಕಡೆಗೆ ಪರಾರಿಯಾಗಿದ್ದರು. ಕಾರಿನ ನಂಬರ್ ಕೆಎ 19 ಎಂಸಿ 2269 ಆಗಿರುತ್ತದೆ. ಈ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಟಿಪ್ಪರ್ ಲಾರಿ ಚಾಲಕ ಅಬ್ದುಲ್ ಇಸಾಕ್ ಮತ್ತು ಕಾರು ಚಾಲಕ ಮೊಯಿದ್ದೀನ್ ಅಪ್ಸರ್ ನನ್ನು ಸಂಜೆ ವೇಳೆಗೆ ಮಂಗಳೂರು ಪೊಲೀಸರು ಬಂಧಿಸಿದ್ದು ಪರಾರಿಯಾಗಿದ್ದ ಟಿಪ್ಪರ್ ಮತ್ತು ಕಾರನ್ನೂ ವಶಕ್ಕೆ ಪಡೆದಿದ್ದಾರೆ. ಇನ್ನಿತರ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಅಡ್ಯಾರ್ ನಲ್ಲಿ ಅಕ್ರಮ ಮರಳು ವಹಿವಾಟು ಎಗ್ಗಿಲ್ಲದೆ ನಡೆಯುತ್ತಿದ್ದು, ಹೆದ್ದಾರಿಯಲ್ಲಿ ತಪಾಸಣೆಗೆ ಮುಂದಾದ ಪೊಲೀಸರ ಮೇಲೆಯೇ ಹಾಯಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.
Mangalore Illegal sand mining Truck driver tries to run over cops who tried to stop, and two arrested for using foul language against the cops who tried to stop the truck.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm