ಬ್ರೇಕಿಂಗ್ ನ್ಯೂಸ್
20-10-21 10:10 pm Mangaluru Correspondent ಕರಾವಳಿ
ಮಂಗಳೂರು, ಅ.20: ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಬಳಿ ತಪಾಸಣೆ ನಿರತ ಪೊಲೀಸರ ಮೇಲೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಹಾಯಿಸಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಸಹ್ಯಾದ್ರಿ ಬಳಿಯ ನೇತ್ರಾವತಿ ನದಿಯ ಮರಳು ದಕ್ಕೆಯಿಂದ ಹೊರ ತೆರಳುತ್ತಿದ್ದ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚಿಸಿದಾಗ, ಟಿಪ್ಪರ್ ಲಾರಿ ಚಾಲಕ ಪೊಲೀಸರ ಮೇಲೆ ಹಾಯಿಸಲು ಯತ್ನಿಸಿ, ಬ್ಯಾರಿಕೇಡಿಗೆ ಡಿಕ್ಕಿಯಾಗಿ ಮುಂದಕ್ಕೆ ಸಾಗಿದ್ದಾನೆ.
ಆನಂತರ, ಅದರ ಬೆಂಗಾವಲಾಗಿ ಬಂದಿದ್ದ ಆಲ್ಟೋ ಕಾರನ್ನು ಕೂಡ ನಿಲ್ಲಿಸಲು ಸೂಚಿಸಿದಾಗ, ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಕಾರಿನ ಚಾಲಕನ ಬಳಿ ಕುಳಿತಿದ್ದ ವ್ಯಕ್ತಿ ಪೊಲೀಸರನ್ನು ಉದ್ದೇಶಿಸಿ, ನಿಮಗೆಷ್ಟು ಧೈರ್ಯ. ನಮ್ಮ ಲಾರಿಯನ್ನು ನಿಲ್ಲಿಸುತ್ತೀರಾ.. ಲೋಫರ್ಸ್ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾರು ನಿಲ್ಲಿಸದೇ ಪರಂಗಿಪೇಟೆ ಕಡೆಗೆ ಪರಾರಿಯಾಗಿದ್ದರು. ಕಾರಿನ ನಂಬರ್ ಕೆಎ 19 ಎಂಸಿ 2269 ಆಗಿರುತ್ತದೆ. ಈ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಟಿಪ್ಪರ್ ಲಾರಿ ಚಾಲಕ ಅಬ್ದುಲ್ ಇಸಾಕ್ ಮತ್ತು ಕಾರು ಚಾಲಕ ಮೊಯಿದ್ದೀನ್ ಅಪ್ಸರ್ ನನ್ನು ಸಂಜೆ ವೇಳೆಗೆ ಮಂಗಳೂರು ಪೊಲೀಸರು ಬಂಧಿಸಿದ್ದು ಪರಾರಿಯಾಗಿದ್ದ ಟಿಪ್ಪರ್ ಮತ್ತು ಕಾರನ್ನೂ ವಶಕ್ಕೆ ಪಡೆದಿದ್ದಾರೆ. ಇನ್ನಿತರ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಅಡ್ಯಾರ್ ನಲ್ಲಿ ಅಕ್ರಮ ಮರಳು ವಹಿವಾಟು ಎಗ್ಗಿಲ್ಲದೆ ನಡೆಯುತ್ತಿದ್ದು, ಹೆದ್ದಾರಿಯಲ್ಲಿ ತಪಾಸಣೆಗೆ ಮುಂದಾದ ಪೊಲೀಸರ ಮೇಲೆಯೇ ಹಾಯಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.
Mangalore Illegal sand mining Truck driver tries to run over cops who tried to stop, and two arrested for using foul language against the cops who tried to stop the truck.
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
24-04-25 09:00 pm
HK News Desk
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm