ಬ್ರೇಕಿಂಗ್ ನ್ಯೂಸ್
21-10-21 09:54 pm Mangaluru Correspondent ಕರಾವಳಿ
ಮಂಗಳೂರು, ಅ.21: ರಾಜ್ಯದಲ್ಲಿ ಕಠಿಣ ಮತಾಂತರ ನಿಷೇಧ ಮಸೂದೆಯನ್ನು ಶೀಘ್ರದಲ್ಲೇ ಜಾರಿಗೆ ಹಿಂದು ಸಂಘಟನೆಗಳ ಮುಖಂಡರು ಮತ್ತು ಕರಾವಳಿಯ ಪ್ರಮುಖ ಸ್ವಾಮೀಜಿಗಳು ಸೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ, ಮನವಿ ಕೊಟ್ಟಿದ್ದಾರೆ. ಮನವಿಯನ್ನು ರಾಜ್ಯ ಸರಕಾರಕ್ಕೆ ತಲುಪಿಸಬೇಕು ಮತ್ತು ಶೀಘ್ರದಲ್ಲೇ ಅಧ್ಯಾದೇಶ ಹೊರಡಿಸಿ ಕಾನೂನು ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿಯನ್ನು ಭೇಟಿಯಾದ ನಿಯೋಗದಲ್ಲಿ ಒಡಿಯೂರು ಮಠದ ಗುರುದೇವಾನಂದ ಸ್ವಾಮೀಜಿ, ಗುರುಪುರ ಮಠದ ರಾಜಶೇಖರಾನಂದ ಸ್ವಾಮೀಜಿ, ಮಾಣಿಲ ಮೋಹನದಾಸ ಸ್ವಾಮೀಜಿ, ವಿಶ್ವ ಹಿಂದು ಪರಿಷತ್ ಮುಖಂಡರಾಜ ಎಂ.ಬಿ. ಪುರಾಣಿಕ್, ಶರಣ್ ಪಂಪ್ವೆಲ್, ಗೋಪಾಲ ಕುತ್ತಾರ್ ಸೇರಿದಂತೆ ಹಲವರು ಇದ್ದರು. ಜಿಲ್ಲಾಧಿಕಾರಿ ಭೇಟಿಯ ಬಳಿಕ ಕದ್ರಿಯಲ್ಲಿರುವ ವಿಶ್ವ ಹಿಂದು ಪರಿಷತ್ ಕಚೇರಿಯಲ್ಲಿ ಸ್ವಾಮೀಜಿಗಳು ಸುದ್ದಿಗೋಷ್ಠಿ ಕರೆದು ಮತಾಂತರ ನಿಷೇಧ ಅಗತ್ಯವನ್ನು ಹೇಳಿದರು.
ಒಡಿಯೂರು ಮಠದ ಸ್ವಾಮೀಜಿ ಮಾತನಾಡಿ, ಮತಾಂತರ ಅನ್ನೋದು ಕಾಯಿಲೆ, ಮಹಾಮಾರಿ ಇದ್ದಂತೆ. ದೇಶದ ಎಲ್ಲೆಂದರಲ್ಲಿ ಬಡವ, ಬಲ್ಲಿದ ಅನ್ನುವ ಭೇದ ಇಲ್ಲದೆ ಹರಡುತ್ತಿದೆ. ಬಡವರನ್ನು ಆಮಿಷಕ್ಕೊಡ್ಡಿ ಮತಾಂತರಿಸಿದೆ, ಐಟಿ ಬಿಟಿ ಕಂಪನಿಗಳಲ್ಲಿ ಉನ್ನತ ಸ್ಥಾನದ ಆಮಿಷ ನೀಡಿ ಮತಾಂತರ ಮಾಡಲಾಗುತ್ತಿದೆ. ವಿದ್ಯಾವಂತರನ್ನು ಈ ರೀತಿ ಮತಾಂತರಿಸಿ, ಆನಂತರ ಮನೆಯವರನ್ನೂ ಮತಾಂತರಕ್ಕೆ ಬಲಿ ಕೊಡಲಾಗುತ್ತಿದೆ ಎಂದು ಹೇಳಿದರು.
ಇದೇ ವಿಚಾರದ ಬಗ್ಗೆ ವಿವರಣೆ ನೀಡಿದ ಗುರುಪುರ ಶ್ರೀ, ಐಟಿ ಬಿಟಿ ಕೇಂದ್ರಗಳಲ್ಲಿ ಮತಾಂತರ ಹೇಗಿದೆ ಅಂದ್ರೆ, ಅಲ್ಲಿನ ಚಟುವಟಿಕೆ ಹೊರ ಜಗತ್ತಿಗೆ ತಿಳಿಯುವುದೇ ಇಲ್ಲ. ಬೆಂಗಳೂರು ಸೇರಿ ನಗರಗಳಲ್ಲಿ ಇಂಥ ಚಟುವಟಿಕೆಗಳಾಗುತ್ತಿವೆ. ಆಮಿಷವೊಡ್ಡಿ ಮತಾಂತರಿಸುವ ಕೆಲಸ ಆಗದಂತೆ ನೋಡಿಕೊಳ್ಳುವುದು ಸರಕಾರದ ಕೆಲಸ. ಅದನ್ನು ನಾವು ಪ್ರತಿಭಟನೆ ಇನ್ನೊಂದು ರೂಪದಲ್ಲಿ ನಿಯಂತ್ರಣಕ್ಕೆ ತರುವುದು ಸಾಧ್ಯವಿಲ್ಲ. ಅದಕ್ಕಾಗಿ ಕಠಿಣ ಕಾಯ್ದೆಯುಳ್ಳ ಕಾನೂನುಗಳೇ ಜಾರಿಗೆ ಬರಬೇಕು. ಈಗಾಗ್ಲೇ ಕಾನೂನು ತರುವ ಬಗ್ಗೆ ಸರಕಾರ ಹೇಳಿದೆ. ಅದನ್ನು ಅಧ್ಯಾದೇಶ ಮೂಲಕ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಯಾವುದೇ ವ್ಯಕ್ತಿ ಯಾವ ಧರ್ಮದಲ್ಲಿ ಹುಟ್ಟಿರುತ್ತಾನೋ, ಅದೇ ಧರ್ಮದಲ್ಲಿ ಸಾಯುವುದು ಆತನ ಹಕ್ಕು. ಯಾಕಾಗಿ ಅವರನ್ನು ಮತಾಂತರ ಮಾಡಬೇಕು. ದೇಶದಲ್ಲಿ ಹಿಂದುಗಳು ಮಾತ್ರ ಇವರ ಟಾರ್ಗೆಟ್ ಆಗಿದ್ದಾರೆ. ಲವ್ ಜಿಹಾದ್ ಒಂದೆಡೆಯಾದರೆ, ಮತ್ತೊಂದು ಕಡೆ ಬಲವಂತದ ಮತಾಂತರ ನಡೆಸಲಾಗುತ್ತಿದೆ. ಇದರ ವಿರುದ್ಧ ಪ್ರಬಲ ಕಾನೂನು ತರಬೇಕಿದೆ ಎಂದು ವಿಹಿಂಪ ಪ್ರಾಂತ ಕಾರ್ಯಾಧ್ಯಕ್ಷ ಎಂ.ಬಿ.ಪುರಾಣಿಕ್ ಹೇಳಿದರು.
ಸೆಕ್ಯುಲರಿಸಂ ಅನ್ನುವುದು ಹಿಂದುತ್ವದ ಗಿಫ್ಟ್. ಎಲ್ಲ ಮತಗಳನ್ನು ಸಮಾನವಾಗಿ ನೋಡು ಎನ್ನುವುದು ಹಿಂದುತ್ವದ ಕಲ್ಪನೆ. ಅದೇ ತತ್ವ ಸೆಕ್ಯುಲರಿಸಂ. ಆದರೆ, ಸೆಕ್ಯುಲರ್ ಆಗಿರುವ ಹಿಂದುಗಳೇ ಈಗ ಟಾರ್ಗೆಟ್ ಆಗಿದ್ದಾರೆ. ಕೇರಳದಲ್ಲಿ ಕೆಲವೊಂದು ರಿಜಿಸ್ಟರ್ ಕೇಂದ್ರಗಳಲ್ಲಿ 80 ಶೇಕಡಾ ಮ್ಯಾರೇಜ್ ರಿಜಿಸ್ಟರ್ ಆಗುವುದು ಹಿಂದು- ಮುಸ್ಲಿಂ ನಡುವೆ. ಈ ಬಗ್ಗೆ ಖಚಿತ ದಾಖಲೆಗಳಿದ್ದು, ಹಿಂದು ಹೆಣ್ಮಕ್ಕಳನ್ನೇ ಟಾರ್ಗೆಟ್ ಮಾಡಿ ಮತಾಂತರ ಮಾಡಲಾಗುತ್ತಿದೆ. ಧಾರ್ಮಿಕ ಕೇಂದ್ರಗಳು ನಡೆಸುವ ಶಿಕ್ಷಣ ಕೇಂದ್ರಗಳಲ್ಲೂ ಮತಾಂತರ ಕಾರ್ಯ ನಡೆಯುತ್ತಿದೆ ಎಂದು ಕಾಸರಗೋಡಿನ ವಿದ್ಯಾನಂದ ಸರಸ್ವತಿ ಹೇಳಿದ್ದಾರೆ.
Vishwa Hindu Parishad (VHP), Bajrang Dal (BD) and Swamijis conducted a joint press meet here at the VHP office on Thursday October 21 and demanded the government to bring in an act banning forced religious conversions.Addressing the media, VHP regional working president Prof M B Puranik said, “Since a couple of years, religious conversion is spreading like wildfire. The government should think over this seriously and bring a strict law banning forced religious conversions on. If the government delays bringing a law, then it will be a dangerous threat.”
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
24-04-25 09:00 pm
HK News Desk
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm