ಬ್ರೇಕಿಂಗ್ ನ್ಯೂಸ್
23-10-21 01:45 pm Mangalore Reporter ಕರಾವಳಿ
ಮಂಗಳೂರು, ಅ.23 : ನಿಧಿ ಆಸೆಯಿಂದ ಕಳ್ಳರು ಪುರಾತನ ಹುತ್ತವೊಂದನ್ನು ಅಗೆದಿರುವ ಘಟನೆ ಕೋಣಾಜೆ ಬಳಿಯ ಇರಾದಲ್ಲಿ ನಡೆದಿದ್ದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಬಂಟ್ವಾಳ ತಾಲೂಕಿನ ಇರಾ ಶ್ರೀ ಕುಂಡಾವು ಸೋಮನಾಥೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಬಪ್ಪರ ಕಂಬಳದ ನಾಗಬನದ ಪಕ್ಕದ ಹುತ್ತವೊಂದರಲ್ಲಿ ಕಳ್ಳರು ನಿಧಿಯ ಆಸೆಯಿಂದ ಭೂಮಿಯನ್ನು ಸುಮಾರು ಹತ್ತು ಅಡಿ ಆಗೆದಿದ್ದಾರೆ.

ದೇವಸ್ಥಾನಕ್ಕೆ ಸಂಬಂಧಪಟ್ಟ ನಾಗಬನಕ್ಕೆ ನಾಗನಕಟ್ಟೆಯನ್ನು ಕಟ್ಟಲಾಗಿದೆ. ಕಳ್ಳರು ನಾಗನಕಟ್ಟೆಗೆ ಯಾವುದೇ ಹಾನಿಯನ್ನುಂಟು ಮಾಡಿಲ್ಲ. ಪ್ರಚಲಿತದಲ್ಲಿರುವಂತೆ ಈ ಭಾಗದಲ್ಲಿ ನಿಧಿ ಇದೆ ಎಂಬುದನ್ನು ಹಿಂದಿನ ಕಾಲದ ಜನರು ಆಡಿಕೊಳ್ಳುವುದನ್ನು ಕೇಳಿ ಅದು ಜನರ ಬಾಯಿಂದ ಕಿವಿಗೆ ಹರಡಿ ದುರಾಸೆಯಿಂದ ಕಳ್ಳರು ನಿಧಿ ಶೋಧ ನಡೆಸಿದ್ದಾರೆ ಎಂದು ಜನರಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ದೇವಸ್ಥಾನ ಸಮಿತಿ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.

ಇವೆಲ್ಲದರ ಜೊತೆಯಲ್ಲಿ ಇರಾ ಸಾಮರಸ್ಯದ ಗ್ರಾಮವಾಗಿದ್ದು ಈ ಘಟನೆಯನ್ನು ಯಾವುದೇ ಕಾರಣಕ್ಕೂ ಕೋಮು ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಮುಂದುವರಿಸಬೇಕೆಂದು ಕ್ಷೇತ್ರದ ಸಮಿತಿ ಸದಸ್ಯರೊಬ್ಬರು ವಿನಂತಿಸಿಕೊಂಡಿದ್ದಾರೆ.
ನಾಗಬನದ ಆಸುಪಾಸಿನಲ್ಲಿ ಕಂಬಳ ಗದ್ದೆ ಇದ್ದು ಧಾರ್ಮಿಕ ನೆಲೆಗಟ್ಟಿನಲ್ಲಿ ಕಾರಣಿಕ ಬೀರುತ್ತಿರುವುದರಿಂದ ಅಲ್ಲೆಲ್ಲ ನಿಧಿ ಇರುತ್ತದೆ, ನಾಗ ಕಾವಲು ಕಾಯುತ್ತಾನೆ ಎಂಬ ಪ್ರತೀತಿ ಇದ್ದು ನಿಧಿ ಆಶೆಯಿಂದ ಕಳ್ಳರು ಭೂಮಿ ಅಗೆಯುವ ಪ್ರಕರಣ ಆಗಾಗ್ಗೆ ಕೇಳಿಬರುತ್ತಿದೆ. ನಿಧಿ ಸಿಗದೆ ನಿರಾಶರಾದರೂ ಭೂಮಿ ಅಗೆಯುವುದು ನಿಂತಿಲ್ಲ.
Mangalore Treasure hunt at Bantwal Ira Nagabana temple premises found.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm