ಬ್ರೇಕಿಂಗ್ ನ್ಯೂಸ್
23-10-21 07:08 pm Headline Karnataka News Network ಕರಾವಳಿ
ಬೆಂಗಳೂರು, ಅ.22: ಸಿಎಎ ಕಾಯ್ದೆ ವಿರೋಧಿಸಿ 2019ರ ಡಿಸೆಬರ್ 19ರಂದು ಮಂಗಳೂರಿನಲ್ಲಿ ನಡೆದ ಗಲಭೆ ಮತ್ತು ಗೋಲಿಬಾರ್ ಘಟನೆಯಲ್ಲಿ ಪೊಲೀಸರ ಕಡೆಯಿಂದ ಯಾವುದೇ ತಪ್ಪು ಆಗಿಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟಿಗೆ ಹೇಳಿದೆ. ಅಲ್ಲದೆ, ಘಟನೆಯ ಬಗ್ಗೆ ನಡೆಸಿದ ಮ್ಯಾಜಿಸ್ಟೀರಿಯಲ್ ತನಿಖೆಯಲ್ಲಿ ಪೊಲೀಸರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಗೋಲಿಬಾರ್ ಘಟನೆಯ ಬಗ್ಗೆ ವಿಶೇಷ ತನಿಖಾ ತಂಡವನ್ನು ನೇಮಕ ಮಾಡಬೇಕೆಂದು ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಎಚ್.ಎಸ್. ದೊರೆಸ್ವಾಮಿ ಹೈಕೋರ್ಟಿನಲ್ಲಿ ನೀಡಿದ್ದ ಅರ್ಜಿ ವಿಚಾರಣೆಗೆ ಬಂದಿತ್ತು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ದ್ವಿಸದಸ್ಯ ಪೀಠ ರಾಜ್ಯ ಸರಕಾರದ ಬಳಿ ಮಾಹಿತಿ ಕೇಳಿತ್ತು.
ಸರಕಾರದ ಪರವಾಗಿ ಕೋರ್ಟಿಗೆ ಹಾಜರಾಗಿದ್ದ ಹೆಚ್ಚುವರಿ ಅಡ್ವಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಗೋಲಿಬಾರ್ ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆ ಪೂರ್ಣಗೊಂಡಿದ್ದು, ಅದನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಲಾಗಿದೆ. ಅಲ್ಲದೆ, ಈ ಘಟನೆಯಲ್ಲಿ ಪೊಲೀಸರಿಂದ ಯಾವುದೇ ಲೋಪವಾಗಿಲ್ಲ. ವರದಿಯನ್ನು ಸರಕಾರ ಸ್ವೀಕಾರ ಮಾಡಿದೆ. ಘಟನೆ ಬಗ್ಗೆ ಆರೋಪಿತರು ಮತ್ತು ಆಸ್ತಿಪಾಸ್ತಿ ಹಾನಿ ಮಾಡಿದವರ ಬಗ್ಗೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದು, ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.
ಮ್ಯಾಜಿಸ್ಟೀರಿಯಲ್ ತನಿಖಾ ವರದಿಯನ್ನು ಸ್ವೀಕರಿಸಿದ ನ್ಯಾಯಪೀಠ, ಸಿಐಡಿ ತನಿಖೆಯ ವರದಿಯನ್ನೂ ಅಫಿಡವಿಟ್ ಮೂಲಕ ಕೋರ್ಟಿಗೆ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ. ಅದಲ್ಲದೆ, ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವ ವರದಿಯನ್ನು ಪರಿಶೀಲನೆ ಮಾಡಲಾಗುವುದು. ಇದರ ಪ್ರತಿಯನ್ನು ಅಗತ್ಯವಿದ್ದರೆ ಈ ಪ್ರಕರಣದ ಅರ್ಜಿದಾರರ ಪರ ವಕೀಲರು ಪಡೆದುಕೊಳ್ಳಬಹುದು ಎಂದು ಹೇಳಿ, ಮುಂದಿನ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಿದೆ.
ಆದರೆ, ಅರ್ಜಿದಾರರ ಪರವಾಗಿ ಕೋರ್ಟಿಗೆ ಹಾಜರಾಗಿದ್ದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ಮ್ಯಾಜಿಸ್ಟೀರಿಯಲ್ ತನಿಖೆಯನ್ನೇ ಆಕ್ಷೇಪಿಸಿದ್ದಾರೆ. ಪೊಲೀಸರ ವಿರುದ್ಧದ ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಪೊಲೀಸ್ ಅಧಿಕಾರಿಯೊಬ್ಬರು ಅದೇ ಇಲಾಖೆಯ ಸುಪರ್ದಿಯಲ್ಲಿದ್ದುಕೊಂಡು ನಡೆಸಿದ್ದಾರೆ ಎನ್ನುವುದೇ ಹಾಸ್ಯಾಸ್ಪದ ಎಂದಿದ್ದಾರೆ. ಹಾಗಿದ್ದರೂ ಪೊಲೀಸರ ವಿರುದ್ಧ ಹತ್ತು ದೂರುಗಳು ಸಲ್ಲಿಕೆಯಾಗಿದ್ದವು. ಆದರೆ, ಅದ್ಯಾವುದೇ ದೂರಿನ ಬಗ್ಗೆ ಎಫ್ಐಆರ್ ದಾಖಲಾಗಿಲ್ಲ. ಅದರ ಬಗ್ಗೆ ತನಿಖೆಯೂ ನಡೆದಿಲ್ಲ ಎಂದು ರವಿವರ್ಮ ಕುಮಾರ್ ತಿಳಿಸಿದ್ದಾರೆ.

ಇದಲ್ಲದೆ, ಪೊಲೀಸರ ವಿರುದ್ಧ ಸಲ್ಲಿಕೆಯಾಗಿದ್ದ ದೂರುಗಳ ಬಗ್ಗೆ ಮಾಹಿತಿ ನೀಡುವಂತೆ ಸರಕಾರಕ್ಕೆ ಕಳೆದ ಜುಲೈನಲ್ಲಿ ಕೋರ್ಟ್ ನಿರ್ದೇಶನ ನೀಡಿತ್ತು. ಆ ಬಗ್ಗೆ ಈವರೆಗೂ ಸರಕಾರದ ಕಡೆಯಿಂದ ಯಾವುದೇ ಮಾಹಿತಿಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಲಾಗಿಲ್ಲ ಎಂದು ಅರ್ಜಿದಾರ ಪರ ವಕೀಲರು ಹೇಳಿದ್ದಾರೆ. ಮಂಗಳೂರಿನಲ್ಲಿ ಸಿಎಎ ಕಾಯ್ದೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿ, ಆನಂತರ ನಡೆದಿದ್ದ ಗೋಲಿಬಾರ್ ಘಟನೆಯಲ್ಲಿ ಇಬ್ಬರು ಸಾವು ಕಂಡಿದ್ದರು.
The state government has told the high court that the police were not at fault relating to the firing resorted to by the policemen to quell the anti-citizenship amendment act protest in Mangaluru.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm