ಬ್ರೇಕಿಂಗ್ ನ್ಯೂಸ್
26-10-21 04:44 pm Mangalore Reporter ಕರಾವಳಿ
ಮಂಗಳೂರು, ಅ.26: ಭಾರೀ ಗಾತ್ರದ ವೇಲ್ ಶಾರ್ಕ್ ಮೀನೊಂದು ಬಲೆಗೆ ಬಿದ್ದಿದ್ದು, ಅದನ್ನು ಮೀನುಗಾರರು ಮರಳಿ ಸುರಕ್ಷಿತವಾಗಿ ಸಮುದ್ರಕ್ಕೆ ಬಿಟ್ಟಿದ್ದಾರೆ. ಮಂಗಳೂರಿನಿಂದ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಎನ್ನುವ ಬೋಟಿನಲ್ಲಿ 1500 ಕೇಜಿ ತೂಕದ ಮೀನು ಬಲೆಗೆ ಬಿದ್ದಿತ್ತು.

ವೇಲ್ ಶಾರ್ಕ್ ಮೀನುಗಳನ್ನು ಹಿಡಿಯುವುದು ನಿಷೇಧವಿದ್ದು, ಅಕಸ್ಮಾತ್ತಾಗಿ ಬಲೆಗೆ ಭಾರೀ ಗಾತ್ರದ ಮೀನು ಬಿದ್ದಿತ್ತು. ಆನಂತರ, ಮೀನನ್ನು ಬೋಟಿಗೆ ಎಳೆದು ಅದರಲ್ಲಿ ಹಿಡಿದಿದ್ದ ಬಲೆಗಳನ್ನು ಕಟ್ ಮಾಡಿ, ಮತ್ತೆ ಸಮುದ್ರಕ್ಕೆ ಬಿಡಲಾಗಿದೆ. ಎರಡು ಬೋಟ್ ಗಳ ಮೂಲಕ ಮೀನನ್ನು ಮರಳಿ ಸಮುದ್ರಕ್ಕೆ ಬಿಡುವ ಕಾರ್ಯಾಚರಣೆ ನಡೆಸಲಾಯಿತು.

ಮಂಗಳೂರಿನಿಂದ 50 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯೆ ಎರಡು ಬೋಟ್ ಗಳನ್ನು ಅಕ್ಕಪಕ್ಕ ನಿಲ್ಲಿಸಿ, ಯಶಸ್ವಿಯಾಗಿ ಮೀನನ್ನು ಮರಳಿ ಸಮುದ್ರಕ್ಕೆ ಬಿಡಲಾಗಿದೆ. ಒಂದು ಬೋಟಿನಲ್ಲಿ ಕ್ರೇನ್ ನಿಲ್ಲಿಸಿ, ಅದನ್ನು ಹೊರಕ್ಕೆ ಎಳೆದು ಹಾಕುವ ದೃಶ್ಯವನ್ನು ಮೊಬೈಲಿನಲ್ಲಿ ಸೆರೆಹಿಡಿದಿದ್ದು, ಅದೀಗ ವೈರಲ್ ಆಗಿದೆ.

ಶಾರ್ಕ್ ಮತ್ತು ವೇಲ್ ನಲ್ಲಿ ವಿವಿಧ ರೀತಿಯ ಪ್ರಭೇದಗಳಿದ್ದು, ಆ ಪೈಕಿ ವೇಲ್ ಶಾರ್ಕ್ ಅನ್ನುವುದು ಕೂಡ ಒಂದು. ಈ ರೀತಿಯ ಮೀನುಗಳು ಬೃಹತ್ ಗಾತ್ರವನ್ನು ಹೊಂದಿರುತ್ತವೆ. ಈ ಮೀನುಗಳ ಸಂತತಿ ಕಡಿಮೆಯಾಗುತ್ತಿರುವುದರಿಂದ ಇದನ್ನು ಹಿಡಿಯುವುದು, ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮೀನುಗಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.
A huge fish got caught in a fishnet that was spread out by the fishermen in the Arabian Sea. The video of the fish has become viral on social media sites. This fish was caught by the fishermen of a boat titled Sagar. This boat had left for deep sea fishing from the fishing port here.
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm