ಬ್ರೇಕಿಂಗ್ ನ್ಯೂಸ್
26-10-21 04:44 pm Mangalore Reporter ಕರಾವಳಿ
ಮಂಗಳೂರು, ಅ.26: ಭಾರೀ ಗಾತ್ರದ ವೇಲ್ ಶಾರ್ಕ್ ಮೀನೊಂದು ಬಲೆಗೆ ಬಿದ್ದಿದ್ದು, ಅದನ್ನು ಮೀನುಗಾರರು ಮರಳಿ ಸುರಕ್ಷಿತವಾಗಿ ಸಮುದ್ರಕ್ಕೆ ಬಿಟ್ಟಿದ್ದಾರೆ. ಮಂಗಳೂರಿನಿಂದ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಎನ್ನುವ ಬೋಟಿನಲ್ಲಿ 1500 ಕೇಜಿ ತೂಕದ ಮೀನು ಬಲೆಗೆ ಬಿದ್ದಿತ್ತು.
ವೇಲ್ ಶಾರ್ಕ್ ಮೀನುಗಳನ್ನು ಹಿಡಿಯುವುದು ನಿಷೇಧವಿದ್ದು, ಅಕಸ್ಮಾತ್ತಾಗಿ ಬಲೆಗೆ ಭಾರೀ ಗಾತ್ರದ ಮೀನು ಬಿದ್ದಿತ್ತು. ಆನಂತರ, ಮೀನನ್ನು ಬೋಟಿಗೆ ಎಳೆದು ಅದರಲ್ಲಿ ಹಿಡಿದಿದ್ದ ಬಲೆಗಳನ್ನು ಕಟ್ ಮಾಡಿ, ಮತ್ತೆ ಸಮುದ್ರಕ್ಕೆ ಬಿಡಲಾಗಿದೆ. ಎರಡು ಬೋಟ್ ಗಳ ಮೂಲಕ ಮೀನನ್ನು ಮರಳಿ ಸಮುದ್ರಕ್ಕೆ ಬಿಡುವ ಕಾರ್ಯಾಚರಣೆ ನಡೆಸಲಾಯಿತು.
ಮಂಗಳೂರಿನಿಂದ 50 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯೆ ಎರಡು ಬೋಟ್ ಗಳನ್ನು ಅಕ್ಕಪಕ್ಕ ನಿಲ್ಲಿಸಿ, ಯಶಸ್ವಿಯಾಗಿ ಮೀನನ್ನು ಮರಳಿ ಸಮುದ್ರಕ್ಕೆ ಬಿಡಲಾಗಿದೆ. ಒಂದು ಬೋಟಿನಲ್ಲಿ ಕ್ರೇನ್ ನಿಲ್ಲಿಸಿ, ಅದನ್ನು ಹೊರಕ್ಕೆ ಎಳೆದು ಹಾಕುವ ದೃಶ್ಯವನ್ನು ಮೊಬೈಲಿನಲ್ಲಿ ಸೆರೆಹಿಡಿದಿದ್ದು, ಅದೀಗ ವೈರಲ್ ಆಗಿದೆ.
ಶಾರ್ಕ್ ಮತ್ತು ವೇಲ್ ನಲ್ಲಿ ವಿವಿಧ ರೀತಿಯ ಪ್ರಭೇದಗಳಿದ್ದು, ಆ ಪೈಕಿ ವೇಲ್ ಶಾರ್ಕ್ ಅನ್ನುವುದು ಕೂಡ ಒಂದು. ಈ ರೀತಿಯ ಮೀನುಗಳು ಬೃಹತ್ ಗಾತ್ರವನ್ನು ಹೊಂದಿರುತ್ತವೆ. ಈ ಮೀನುಗಳ ಸಂತತಿ ಕಡಿಮೆಯಾಗುತ್ತಿರುವುದರಿಂದ ಇದನ್ನು ಹಿಡಿಯುವುದು, ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮೀನುಗಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.
A huge fish got caught in a fishnet that was spread out by the fishermen in the Arabian Sea. The video of the fish has become viral on social media sites. This fish was caught by the fishermen of a boat titled Sagar. This boat had left for deep sea fishing from the fishing port here.
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
24-04-25 09:00 pm
HK News Desk
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm