ಬ್ರೇಕಿಂಗ್ ನ್ಯೂಸ್
27-10-21 05:23 pm Mangaluru Correspondent ಕರಾವಳಿ
ಉಳ್ಳಾಲ, ಅ.27: ತೊಕ್ಕೊಟ್ಟು ಫ್ಲೈ ಓವರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಸ್ತೆಗೆಸೆಯಲ್ಪಟ್ಟ ಬುಲೆಟ್ ಸವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ.
ಕುಂಪಲ ಸರಳಾಯ ಕಾಲನಿ ನಿವಾಸಿ ಸುಬ್ರಹ್ಮಣ್ಯ ರಾವ್ ಸಿಂಧ್ಯ(45) ಮೃತ ದುರ್ದೈವಿ. ಇಂದು ಸಂಜೆ ಸುಬ್ರಹ್ಮಣ್ಯ ಅವರು ಮಂಗಳೂರಿನಿಂದ ಕುಂಪಲ ಕಡೆಗೆ ತೊಕ್ಕೊಟ್ಟು ಮೇಲ್ಸೇತುವೆ ಮೇಲಿಂದ ಬುಲೆಟಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೇಲ್ಸೇತುವೆಯಿಂದ 20 ಅಡಿ ಆಳದ ಸರ್ವಿಸ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಲೆಗೆ ಗಂಭೀರ ಗಾಯಗೊಂಡ ಸುಬ್ರಹ್ಮಣ್ಯ ಅವರು ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಅಸುನೀಗಿದ್ದಾರೆ. ಫ್ಲೈ ಓವರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿರುವುದಾಗಿ ಶಂಕಿಸಲಾಗಿದೆ.







ಆಸ್ಪತ್ರೆಗೆ ಬಂದ ಸುಬ್ರಹ್ಮಣ್ಯ ಅವರ ತಾಯಿ, ಪತ್ನಿ, ಮಗಳು ಮೃತದೇಹದ ಮುಂದೆ ರೋದಿಸುತ್ತಿರುವ ದೃಶ್ಯ ಎಲ್ಲರ ಮನಕಲಕುವಂತಿತ್ತು.
ಸುಬ್ರಹ್ಮಣ್ಯ ಈ ಮೊದಲು ದುಬೈಯಲ್ಲಿದ್ದು ಊರಿಗೆ ಮರಳಿದ ನಂತರ ಮಂಗಳೂರಲ್ಲಿ ಸಿವಿಲ್ ಕನ್ಸಟ್ರಕ್ಷನ್ ಕೆಲಸ ಮಾಡುತ್ತಿದ್ದರು. ಸುಬ್ರಹ್ಮಣ್ಯ ಅವರು ಯುವ ಮರಾಠ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.
Mangalore Bullet Bike Accident at Thokkottu flyover bridge, Man thrown from bridge dies on Spot. The deceased has been identified as Subramanya Rao (45) resident of Kumpala.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 07:49 pm
HK News Staffer
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm