ಬ್ರೇಕಿಂಗ್ ನ್ಯೂಸ್
30-10-21 12:56 pm Mangaluru Correspondent ಕರಾವಳಿ
ಮಂಗಳೂರು, ಅ.30: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ವಕೀಲ ಕೆ.ಎಸ್.ಎನ್ ರಾಜೇಶ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಕಳೆದ ನಾಲ್ಕು ದಿನಗಳಿಂದ ವಾದ - ಪ್ರತಿವಾದ ನಡೆದಿತ್ತು. ಆರೋಪಿ ಪರವಾಗಿ ನಗರದ ಖ್ಯಾತ ಕ್ರಿಮಿನಲ್ ವಕೀಲರಲ್ಲಿ ಒಬ್ಬರಾದ ಅರುಣ್ ಬಂಗೇರ ವಾದ ಮಂಡಿಸಿದ್ದರು. ಮೂರು ದಿನಗಳ ವಾದ ಆಲಿಸಿದ ನ್ಯಾಯಾಲಯ, ಶುಕ್ರವಾರ ತೀರ್ಪು ನೀಡಿದೆ. ವಿದ್ಯಾರ್ಥಿನಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಕಾನೂನು ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಪೊಲೀಸರ ಶಿಸ್ತು ಕ್ರಮಕ್ಕೆ ಅಡ್ಡಿ ಬರುವುದು ಸರಿಯಲ್ಲ ಎಂದು ಹೇಳಿ ಬಂಧನವನ್ನು ನಿರಾಕರಿಸುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.
ಪ್ರಕರಣದಲ್ಲಿ ಆರೋಪಿಗಳಾಗಿ ಗುರುತಿಸಲ್ಪಟ್ಟು ಪೊಲೀಸರಿಂದ ಬಂಧಿತರಾಗಿದ್ದ ಧ್ರುವ ಮತ್ತು ಮಹಾಲಕ್ಷ್ಮಿ ಹೆಗ್ಡೆ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದೇ ವೇಳೆ, ವಕೀಲ ರಾಜೇಶ್ ತಲೆಮರೆಸಿಕೊಳ್ಳಲು ಸಹಕರಿಸಿ ಬಂಧಿತನಾಗಿದ್ದ ಅನಂತ್ ಭಟ್ ಕೂಡ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು. ಆದರೆ, ಪ್ರಮುಖ ಆರೋಪಿ ಕೆಎಸ್ಎನ್ ರಾಜೇಶ್, ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ್ದಾರೆಂಬ ಪ್ರತಿವಾದವನ್ನು ಪುರಸ್ಕರಿಸಿದ್ದ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ.
ಕಾನೂನು ವಿದ್ಯಾರ್ಥಿನಿ ಯುವತಿ, ಆರೋಪಿ ವಕೀಲನ ಕರಂಗಲ್ಪಾಡಿ ಕಚೇರಿಯಲ್ಲಿ ಇಂಟರ್ನ್ಶಿಪ್ಗೆ ಸೇರಿದ್ದರು. ಕಚೇರಿಯಲ್ಲಿದ್ದಾಗ ಸೆ.25 ರಂದು ಸಂಜೆ ಯುವತಿಗೆ ವಕೀಲ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ದೂರು ನೀಡಲಾಗಿತ್ತು. ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಾಜೇಶ್ ವಿರುದ್ಧ ಅ.18ರಂದು ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ವಕೀಲನ ಅಜ್ಞಾತ ಸ್ಥಳಕ್ಕೆ ಬಿಟ್ಟು ಬಂದಿದ್ದ ವ್ಯಕ್ತಿಯ ಬಂಧನ
Sexual Harassment Advocate KSN Rajesh Bail plea rejected. The police have booked advocate and a Special Public Prosecutor for the Lokayukta K.S.N. Rajesh on the charge of sexually harassing a law student in the city.A complaint from the victim has been registered under Sections 376, 376 (2)(f), 376(2)(k), 376(c), 354 (A), 354 (B), 354 (C), 354 (D), 506, 384, 388 and 389 of Indian Penal Code.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm