ಬ್ರೇಕಿಂಗ್ ನ್ಯೂಸ್
30-10-21 09:21 pm Mangaluru Correspondent ಕರಾವಳಿ
ಮಂಗಳೂರು, ಅ.30: ಸುರತ್ಕಲ್ ಜಂಕ್ಷನ್ ಗೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹೆಸರನ್ನಿಡಲು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಮತ್ತು ಆ ಭಾಗದ ಬಿಜೆಪಿ ಕಾರ್ಪೊರೇಟರುಗಳು ಮಹಾನಗರ ಪಾಲಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಪ್ರಸ್ತಾವನೆಯ ಬಗ್ಗೆ ಚರ್ಚಿಸಿ ನಿರ್ಧಾರಕ್ಕೆ ಬರಲು ಮೇಯರ್ ಪ್ರೇಮಾನಂದ ಶೆಟ್ಟಿ ಸ್ಥಾಯಿ ಸಮಿತಿಗೆ ರವಾನಿಸಿದ್ದಾರೆ.
ವೀರ ಸಾವರ್ಕರ್ ಹೆಸರಿನ ಪ್ರಸ್ತಾವಕ್ಕೆ ಕಾಂಗ್ರೆಸ್ ಮತ್ತು ಎಸ್ ಡಿಪಿಐ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದು, ಸ್ಥಾಯಿ ಸಮಿತಿ ಸಭೆಯ ಚರ್ಚೆಯಲ್ಲಿ ಭಾಗವಹಿಸಲು ತಮಗೂ ಅವಕಾಶ ನೀಡಬೇಕೆಂದು ಅಹವಾಲು ಸಲ್ಲಿಸಿದ್ದಾರೆ. ಸುರತ್ಕಲ್ ಭಾಗದ ಎಸ್ ಡಿಪಿಐ ಸದಸ್ಯರಾದ ಮುನೀರ್ ಮತ್ತು ಅಬುಬಕ್ಕರ್ ಈ ಬಗ್ಗೆ ಮೇಯರ್ ಅವರಿಗೆ ಅಹವಾಲು ನೀಡಿದ್ದಾರೆ. ಅಲ್ಲದೆ, ಪಾಲಿಕೆಯ ಪ್ರತಿಪಕ್ಷ ನಾಯಕ ವಿನಯರಾಜ್ ಕೂಡ ಬಿಜೆಪಿ ಪ್ರಸ್ತಾವಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಸ್ಥಾಯಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಅವಕಾಶ ಕೇಳಿದ್ದಾರೆ.

ಇತ್ತೀಚೆಗೆ ವೀರ ಸಾವರ್ಕರ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಸ್ವಾತಂತ್ರ್ಯ ರಥದಲ್ಲಿ ಅಳವಡಿಸಿ, ಕಾರ್ಯಕ್ರಮ ಏರ್ಪಡಿಸಿದ್ದಾಗ ಎಸ್ ಡಿಪಿಐ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಗಲಾಟೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿತ್ತು. ಸ್ವಾತಂತ್ರ್ಯ ದಿನದಂದೇ ಕಬಕದಲ್ಲಿ ನಡೆದ ಕಾರ್ಯಕ್ರಮಕ್ಕೆ ಧಿಕ್ಕಾರ ಕೂಗಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಐದಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.
ಆನಂತರ, ಮಂಗಳೂರಿನ ಬಿಜೆಪಿ ಶಾಸಕ ಭರತ್ ಶೆಟ್ಟಿ ಸಾವರ್ಕರ್ ಪರವಾಗಿ ಬ್ಯಾಟಿಂಗ್ ಮಾಡಿದ್ದರು. ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಪರವಾಗಿ ಘೋಷಣೆ ಕೂಗುತ್ತಾ ಬೆಂಬಲ ಸಾರಿದ್ದರು. ಕಾಂಗ್ರೆಸ್ ಮತ್ತು ಬಿಜೆಪಿಯ ರಾಜ್ಯ ನಾಯಕರು ಸಾವರ್ಕರ್ ವಿಚಾರದಲ್ಲಿ ಪರ- ವಿರೋಧ ಹೇಳಿಕೆ ನೀಡಿ ವಿವಾದಕ್ಕೆ ತುಪ್ಪ ಸುರಿದಿದ್ದರು. ಇದೀಗ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ತಾನು ಪ್ರತಿನಿಧಿಸುವ ಸುರತ್ಕಲ್ ಪೇಟೆಯ ಜಂಕ್ಷನ್ನಿಗೆ ಸಾವರ್ಕರ್ ಜಂಕ್ಷನ್ ಹೆಸರಿಡಲು ಮುಂದಾಗಿದ್ದಾರೆ. ಆಮೂಲಕ ಸಾವರ್ಕರ್ ಪರವಾಗಿ ಹೊಸ ದಾಳವನ್ನು ಉರುಳಿಸಿದ್ದಾರೆ.

ನಿಜಕ್ಕಾದರೆ, ಈ ವಿಚಾರವನ್ನು ಮಹಾನಗರ ಪಾಲಿಕೆಯ ಕೌನ್ಸಿಲ್ ಮೀಟಿಂಗ್ ನಲ್ಲಿ ಮುಂದಿಟ್ಟು ಚರ್ಚೆ ನಡೆಸಬೇಕಾಗಿತ್ತು. ಆದರೆ, ಬಿಜೆಪಿ ನಾಯಕರು ಸ್ಥಾಯಿ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧಾರಕ್ಕೆ ಬರಲು ಮುಂದಾಗಿದ್ದಾರೆ. ಕಳೆದ ಬಾರಿ ನಗರದ ಲೇಡಿಹಿಲ್ ಸರ್ಕಲ್ ಗೆ ನಾರಾಯಣ ಗುರು ಸರ್ಕಲ್ ಎಂದು ನಾಮಕರಣ ಮಾಡುವ ವಿಚಾರದಲ್ಲಿ ಪರ- ವಿರೋಧ ಚರ್ಚೆ ನಡೆದಿತ್ತು. ಆನಂತರ, ಪಾಲಿಕೆಯಲ್ಲಿ ಈ ಬಗ್ಗೆ ನಿರ್ಧರಿಸಿ ರಾಜ್ಯ ಸರಕಾರಕ್ಕೆ ರವಾನೆಯಾಗಿತ್ತು. ಅದಿನ್ನೂ ಜಾರಿಗೆ ಬಂದಿಲ್ಲ. ಈ ನಡುವೆ, ಸುರತ್ಕಲ್ ಪೇಟೆಗೆ ಸಾವರ್ಕರ್ ಹೆಸರಿಡುವ ವಿಚಾರ ಮುನ್ನೆಲೆಗೆ ಬಂದಿದ್ದು ಮತ್ತೊಂದು ವಿವಾದದ ಬಿರುಗಾಳಿ ಎಬ್ಬಿಸಲಿದೆ.
Mangalore MLA Bharath Shetty and local corporators have planned to name Surathkal Junction as Savarkar Circle for which a memorandum has been submitted to the Mayor of Mangalore City Corporation.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm