ಬ್ರೇಕಿಂಗ್ ನ್ಯೂಸ್
01-11-21 10:56 am Mangaluru Correspondent ಕರಾವಳಿ
ಮಂಗಳೂರು, ನ.1: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೊಡ್ಡ ಎಡವಟ್ಟು ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಧ್ವಜಾರೋಹಣ ನೆರವೇರಿಸಿದ ವೇಳೆ, ರಾಷ್ಟ್ರ ಧ್ವಜವನ್ನೇ ಉಲ್ಟಾ ಹಾರಿಸಿ ಅಪಮಾನ ಎಸಗಲಾಗಿದೆ.
ಧ್ವಜ ಸ್ತಂಭದಲ್ಲಿ ಮೊದಲೇ ರೆಡಿ ಮಾಡಿದ್ದ ಧ್ವಜವನ್ನು ಉಸ್ತುವಾರಿ ಸಚಿವರು ಅದರ ಹಗ್ಗ ಎಳೆದು ಹಾರಿಸಿದ್ದಾರೆ. ಸಚಿವ ಅಂಗಾರ ಧ್ವಜಕ್ಕೆ ಸೆಲ್ಯೂಟ್ ಹೊಡೆಯುತ್ತಿದ್ದಂತೆ ಜೊತೆಗಿದ್ದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಮತ್ತು ಪೊಲೀಸ್ ಕಮಿಷನರ್ ಶಶಿಕುಮಾರ್ ಕೂಡ ಸೆಲ್ಯೂಟ್ ಹೊಡೆದಿದ್ದಾರೆ. ನೆರೆದಿದ್ದವರೆಲ್ಲ ಎದ್ದು ನಿಂತು ಧ್ವಜಕ್ಕೆ ವಂದನೆ ಸಲ್ಲಿಸಿದ್ದಾರೆ. ಆಬಳಿಕ ಸಹಜ ಎಂಬಂತೆ ರಾಷ್ಟ್ರ ಗೀತೆಯನ್ನು ಹಾಡಲಾಗಿದೆ.
ಆದರೆ ತ್ರಿವರ್ಣ ಧ್ವಜ ತಲೆಕೆಳಗಾಗಿ ಹಾರಿದ್ದು ಅಲ್ಲಿದ್ದವರಿಗೆ ಅಲ್ಲಿವರೆಗೂ ಗೊತ್ತಿರಲಿಲ್ಲ. ಆನಂತರ ಅಧಿಕಾರಿಗಳು ಧ್ವಜ ತಲೆಕೆಳಗಾಗಿದ್ದನ್ನು ಗಮನಿಸಿ ಮತ್ತೆ ಕೆಳಗಿಳಿಸಿ ಸರಿ ಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಉಸ್ತುವಾರಿ ಸಚಿವ ಅಂಗಾರ, ಸಂಸದ ನಳಿನ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ.ಖಾದರ್ ಸೇರಿದಂತೆ ಅಧಿಕಾರಿ ವರ್ಗ ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ.
ಈ ಹಿಂದೆ ತಾಲೂಕು ಮಟ್ಟದಲ್ಲಿ ಕೆಲವು ಕಡೆ ರಾಷ್ಟ್ರ ಧ್ವಜ ತಲೆಕೆಳಗಾಗಿ ಎಡವಟ್ಟು ಆಗಿದ್ದಿದೆ. ಆದರೆ, ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಮಂಗಳೂರಿನ ಮಟ್ಟಿಗೆ ಇದೇ ಮೊದಲಿಗೆ ಈ ರೀತಿಯ ತಪ್ಪು ನಡೆದಿದೆ. ಅಧಿಕಾರಿ ವರ್ಗದ ಗಂಭೀರ ಪ್ರಮಾದ ಅಲ್ಲಿ ಸೇರಿದ್ದ ಎಲ್ಲರನ್ನೂ ತೀವ್ರ ಮುಜುಗರಕ್ಕೀಡು ಮಾಡಿದೆ.
ಸಾಮಾನ್ಯವಾಗಿ ಸಿಎಆರ್ ಸಿಬಂದಿ ಬೆಳಗ್ಗೆ ಬೇಗ ಬಂದು ಧ್ವಜ ಸ್ತಂಭಕ್ಕೆ ಧ್ವಜ ಏರಿಸುವ ಕೆಲಸ ಮಾಡುತ್ತಾರೆ. ಈ ಸಂದರ್ಭದಲ್ಲಿ ನಿರ್ಲಕ್ಷ್ಯದ ಕಾರಣ ತಪ್ಪು ನಡೆದಿರುವ ಸಾಧ್ಯತೆ ಇದೆ. ಇವರ ಮೇಲೆ ಗಂಭೀರ ಕ್ರಮ ಜರುಗುವ ಸಾಧ್ಯತೆ ಇದೆ. ಕನ್ನಡ ಭುವನೇಶ್ವರಿಗೆ ವಂದಿಸಿ, ಕರ್ನಾಟಕ ಜನ್ಮತಾಳಿದ ವರ್ಷವನ್ನು ನವೆಂಬರ್ ಒಂದರಂದು ಆಚರಿಸಲಾಗುತ್ತದೆ. ಅದರ ಪ್ರಕಾರ ಪ್ರತೀ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕ್ರಮ ನಡೆಯುತ್ತದೆ. ಈ ಬಾರಿಯಂತೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಿತ್ತು.
Karnataka Rajyotsava 2021 Flag hoisted in opposite direction in Mangalore, embarrassment for leaders and guests on stage
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
24-04-25 09:00 pm
HK News Desk
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm