ಬ್ರೇಕಿಂಗ್ ನ್ಯೂಸ್
01-11-21 10:56 am Mangaluru Correspondent ಕರಾವಳಿ
ಮಂಗಳೂರು, ನ.1: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೊಡ್ಡ ಎಡವಟ್ಟು ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಧ್ವಜಾರೋಹಣ ನೆರವೇರಿಸಿದ ವೇಳೆ, ರಾಷ್ಟ್ರ ಧ್ವಜವನ್ನೇ ಉಲ್ಟಾ ಹಾರಿಸಿ ಅಪಮಾನ ಎಸಗಲಾಗಿದೆ.
ಧ್ವಜ ಸ್ತಂಭದಲ್ಲಿ ಮೊದಲೇ ರೆಡಿ ಮಾಡಿದ್ದ ಧ್ವಜವನ್ನು ಉಸ್ತುವಾರಿ ಸಚಿವರು ಅದರ ಹಗ್ಗ ಎಳೆದು ಹಾರಿಸಿದ್ದಾರೆ. ಸಚಿವ ಅಂಗಾರ ಧ್ವಜಕ್ಕೆ ಸೆಲ್ಯೂಟ್ ಹೊಡೆಯುತ್ತಿದ್ದಂತೆ ಜೊತೆಗಿದ್ದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಮತ್ತು ಪೊಲೀಸ್ ಕಮಿಷನರ್ ಶಶಿಕುಮಾರ್ ಕೂಡ ಸೆಲ್ಯೂಟ್ ಹೊಡೆದಿದ್ದಾರೆ. ನೆರೆದಿದ್ದವರೆಲ್ಲ ಎದ್ದು ನಿಂತು ಧ್ವಜಕ್ಕೆ ವಂದನೆ ಸಲ್ಲಿಸಿದ್ದಾರೆ. ಆಬಳಿಕ ಸಹಜ ಎಂಬಂತೆ ರಾಷ್ಟ್ರ ಗೀತೆಯನ್ನು ಹಾಡಲಾಗಿದೆ.

ಆದರೆ ತ್ರಿವರ್ಣ ಧ್ವಜ ತಲೆಕೆಳಗಾಗಿ ಹಾರಿದ್ದು ಅಲ್ಲಿದ್ದವರಿಗೆ ಅಲ್ಲಿವರೆಗೂ ಗೊತ್ತಿರಲಿಲ್ಲ. ಆನಂತರ ಅಧಿಕಾರಿಗಳು ಧ್ವಜ ತಲೆಕೆಳಗಾಗಿದ್ದನ್ನು ಗಮನಿಸಿ ಮತ್ತೆ ಕೆಳಗಿಳಿಸಿ ಸರಿ ಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಉಸ್ತುವಾರಿ ಸಚಿವ ಅಂಗಾರ, ಸಂಸದ ನಳಿನ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ.ಖಾದರ್ ಸೇರಿದಂತೆ ಅಧಿಕಾರಿ ವರ್ಗ ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ.
ಈ ಹಿಂದೆ ತಾಲೂಕು ಮಟ್ಟದಲ್ಲಿ ಕೆಲವು ಕಡೆ ರಾಷ್ಟ್ರ ಧ್ವಜ ತಲೆಕೆಳಗಾಗಿ ಎಡವಟ್ಟು ಆಗಿದ್ದಿದೆ. ಆದರೆ, ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಮಂಗಳೂರಿನ ಮಟ್ಟಿಗೆ ಇದೇ ಮೊದಲಿಗೆ ಈ ರೀತಿಯ ತಪ್ಪು ನಡೆದಿದೆ. ಅಧಿಕಾರಿ ವರ್ಗದ ಗಂಭೀರ ಪ್ರಮಾದ ಅಲ್ಲಿ ಸೇರಿದ್ದ ಎಲ್ಲರನ್ನೂ ತೀವ್ರ ಮುಜುಗರಕ್ಕೀಡು ಮಾಡಿದೆ.

ಸಾಮಾನ್ಯವಾಗಿ ಸಿಎಆರ್ ಸಿಬಂದಿ ಬೆಳಗ್ಗೆ ಬೇಗ ಬಂದು ಧ್ವಜ ಸ್ತಂಭಕ್ಕೆ ಧ್ವಜ ಏರಿಸುವ ಕೆಲಸ ಮಾಡುತ್ತಾರೆ. ಈ ಸಂದರ್ಭದಲ್ಲಿ ನಿರ್ಲಕ್ಷ್ಯದ ಕಾರಣ ತಪ್ಪು ನಡೆದಿರುವ ಸಾಧ್ಯತೆ ಇದೆ. ಇವರ ಮೇಲೆ ಗಂಭೀರ ಕ್ರಮ ಜರುಗುವ ಸಾಧ್ಯತೆ ಇದೆ. ಕನ್ನಡ ಭುವನೇಶ್ವರಿಗೆ ವಂದಿಸಿ, ಕರ್ನಾಟಕ ಜನ್ಮತಾಳಿದ ವರ್ಷವನ್ನು ನವೆಂಬರ್ ಒಂದರಂದು ಆಚರಿಸಲಾಗುತ್ತದೆ. ಅದರ ಪ್ರಕಾರ ಪ್ರತೀ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕ್ರಮ ನಡೆಯುತ್ತದೆ. ಈ ಬಾರಿಯಂತೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಿತ್ತು.
Karnataka Rajyotsava 2021 Flag hoisted in opposite direction in Mangalore, embarrassment for leaders and guests on stage
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm