ಬ್ರೇಕಿಂಗ್ ನ್ಯೂಸ್
01-11-21 10:56 am Mangaluru Correspondent ಕರಾವಳಿ
ಮಂಗಳೂರು, ನ.1: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೊಡ್ಡ ಎಡವಟ್ಟು ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಧ್ವಜಾರೋಹಣ ನೆರವೇರಿಸಿದ ವೇಳೆ, ರಾಷ್ಟ್ರ ಧ್ವಜವನ್ನೇ ಉಲ್ಟಾ ಹಾರಿಸಿ ಅಪಮಾನ ಎಸಗಲಾಗಿದೆ.
ಧ್ವಜ ಸ್ತಂಭದಲ್ಲಿ ಮೊದಲೇ ರೆಡಿ ಮಾಡಿದ್ದ ಧ್ವಜವನ್ನು ಉಸ್ತುವಾರಿ ಸಚಿವರು ಅದರ ಹಗ್ಗ ಎಳೆದು ಹಾರಿಸಿದ್ದಾರೆ. ಸಚಿವ ಅಂಗಾರ ಧ್ವಜಕ್ಕೆ ಸೆಲ್ಯೂಟ್ ಹೊಡೆಯುತ್ತಿದ್ದಂತೆ ಜೊತೆಗಿದ್ದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಮತ್ತು ಪೊಲೀಸ್ ಕಮಿಷನರ್ ಶಶಿಕುಮಾರ್ ಕೂಡ ಸೆಲ್ಯೂಟ್ ಹೊಡೆದಿದ್ದಾರೆ. ನೆರೆದಿದ್ದವರೆಲ್ಲ ಎದ್ದು ನಿಂತು ಧ್ವಜಕ್ಕೆ ವಂದನೆ ಸಲ್ಲಿಸಿದ್ದಾರೆ. ಆಬಳಿಕ ಸಹಜ ಎಂಬಂತೆ ರಾಷ್ಟ್ರ ಗೀತೆಯನ್ನು ಹಾಡಲಾಗಿದೆ.

ಆದರೆ ತ್ರಿವರ್ಣ ಧ್ವಜ ತಲೆಕೆಳಗಾಗಿ ಹಾರಿದ್ದು ಅಲ್ಲಿದ್ದವರಿಗೆ ಅಲ್ಲಿವರೆಗೂ ಗೊತ್ತಿರಲಿಲ್ಲ. ಆನಂತರ ಅಧಿಕಾರಿಗಳು ಧ್ವಜ ತಲೆಕೆಳಗಾಗಿದ್ದನ್ನು ಗಮನಿಸಿ ಮತ್ತೆ ಕೆಳಗಿಳಿಸಿ ಸರಿ ಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಉಸ್ತುವಾರಿ ಸಚಿವ ಅಂಗಾರ, ಸಂಸದ ನಳಿನ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ.ಖಾದರ್ ಸೇರಿದಂತೆ ಅಧಿಕಾರಿ ವರ್ಗ ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ.
ಈ ಹಿಂದೆ ತಾಲೂಕು ಮಟ್ಟದಲ್ಲಿ ಕೆಲವು ಕಡೆ ರಾಷ್ಟ್ರ ಧ್ವಜ ತಲೆಕೆಳಗಾಗಿ ಎಡವಟ್ಟು ಆಗಿದ್ದಿದೆ. ಆದರೆ, ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಮಂಗಳೂರಿನ ಮಟ್ಟಿಗೆ ಇದೇ ಮೊದಲಿಗೆ ಈ ರೀತಿಯ ತಪ್ಪು ನಡೆದಿದೆ. ಅಧಿಕಾರಿ ವರ್ಗದ ಗಂಭೀರ ಪ್ರಮಾದ ಅಲ್ಲಿ ಸೇರಿದ್ದ ಎಲ್ಲರನ್ನೂ ತೀವ್ರ ಮುಜುಗರಕ್ಕೀಡು ಮಾಡಿದೆ.

ಸಾಮಾನ್ಯವಾಗಿ ಸಿಎಆರ್ ಸಿಬಂದಿ ಬೆಳಗ್ಗೆ ಬೇಗ ಬಂದು ಧ್ವಜ ಸ್ತಂಭಕ್ಕೆ ಧ್ವಜ ಏರಿಸುವ ಕೆಲಸ ಮಾಡುತ್ತಾರೆ. ಈ ಸಂದರ್ಭದಲ್ಲಿ ನಿರ್ಲಕ್ಷ್ಯದ ಕಾರಣ ತಪ್ಪು ನಡೆದಿರುವ ಸಾಧ್ಯತೆ ಇದೆ. ಇವರ ಮೇಲೆ ಗಂಭೀರ ಕ್ರಮ ಜರುಗುವ ಸಾಧ್ಯತೆ ಇದೆ. ಕನ್ನಡ ಭುವನೇಶ್ವರಿಗೆ ವಂದಿಸಿ, ಕರ್ನಾಟಕ ಜನ್ಮತಾಳಿದ ವರ್ಷವನ್ನು ನವೆಂಬರ್ ಒಂದರಂದು ಆಚರಿಸಲಾಗುತ್ತದೆ. ಅದರ ಪ್ರಕಾರ ಪ್ರತೀ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕ್ರಮ ನಡೆಯುತ್ತದೆ. ಈ ಬಾರಿಯಂತೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಿತ್ತು.
Karnataka Rajyotsava 2021 Flag hoisted in opposite direction in Mangalore, embarrassment for leaders and guests on stage
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm