ಬ್ರೇಕಿಂಗ್ ನ್ಯೂಸ್
12-09-20 12:30 pm Mangalore Reporter ಕರಾವಳಿ
ವಿಟ್ಲ , ಸೆಪ್ಟೆಂಬರ್ 11: ಸಾರ್ವಜನಿಕರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ವಿಟ್ಲ ಸಬ್ ರಿಜಿಸ್ಟ್ರಾರ್ ಕಚೇರಿಗೆ ತೆರಳಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಸಕರು ಸಾರ್ವಜನಿಕರ ಎದುರಲ್ಲೇ ತರಾಟೆಗೆತ್ತಿಕೊಂಡಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಸಾರ್ವಜನಿಕರ ನಿರಂತರ ದೂರಿನ ಹಿನ್ನೆಲೆಯಲ್ಲಿ ವಿಟ್ಲ ಉಪನೋಂದಣಿ ಕಚೇರಿಗೆ ದಿಢೀರ್ ಆಗಿ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು, ಉಪ ನೋಂದಣಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಚೇರಿ ಹೊರಗೆ ಸ್ವಲ್ಪ ಹೊತ್ತು ನಿಂತು ಏಕಾಏಕಿ ಕಚೇರಿ ಒಳಗೆ ಪ್ರವೇಶಿಸಿದ ಶಾಸಕರು, ನಿಮ್ಮ ಬಗ್ಗೆ ಕಳೆದ ಒಂದು ತಿಂಗಳುಗಳಿಂದ ದೂರುಗಳು ಬರುತ್ತಿವೆ. ನೀವು ಬೆಳಗ್ಗೆ 11 ಗಂಟೆಗೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದೀರಿ, ಪ್ರತಿನಿತ್ಯ ಜನರು ತಮ್ಮ ಕೆಲಸಕ್ಕೆ ಕಾಯಬೇಕು. ಕೆಲವರು ಕೆಲಸ ಪೂರ್ಣಗೊಳ್ಳದೇ ಹಿಂತಿರುಗುತ್ತಿದ್ದಾರೆ. ಜನರೊಂದಿಗೆ ದರ್ಪದಿಂದ ವರ್ತಿಸುತ್ತಿದ್ದೀರಿ ಎಂಬ ದೂರು ಬರುತ್ತಿದೆ. ನಾನು ಬಂದು ಕೆಲವು ಹೊತ್ತು ಕಳೆದರೂ ಹೊರಗಡೆ ನಿಂತುಕೊಂಡಿದ್ದೆ. ಶಾಸಕರ ಜತೆ ಹೇಗೆ ನಡೆದುಕೊಳ್ಳಬೇಕೆಂದು ನಿಮಗೆ ಗೊತ್ತಿಲ್ಲ. ಇನ್ನೂ ಜನರನ್ನು ಯಾವ ರೀತಿ ನಡೆಸಿಕೊಳ್ಳುತ್ತೀರಿ.. ಸ್ವಲ್ಪವಾದರೂ ಜವಾಬ್ದಾರಿ ಇದೆಯಾ ನಿಮಗೆ ಎಂದು ಪ್ರಶ್ನಿಸಿದ್ದಾರೆ?

ಇದಕ್ಕೆ ಪ್ರತಿಕ್ರಿಯಿಸಿದ ಉಪ ನೋಂದಣಾಧಿಕಾರಿ ಪ್ರೇಮಾ, ನೀವು ಹಾಗೆ ಮಾತನಾಡಬೇಡಿ ಸರ್.. ಇಲ್ಲಿ ಸರ್ವರ್ ಸಮಸ್ಯೆ ಇದೆ. ಇಲ್ಲಿ ಇಬ್ಬರು ಮಾತ್ರ ಸಿಬ್ಬಂದಿ ಮಾತ್ರ ಇರುವುದು. ಕಂಪ್ಯೂಟರ್ ಕೂಡಾ ಕೈ ಕೊಡುತ್ತಿದೆ. ಈ ಸಮಸ್ಯೆಯಿಂದ ಕೆಲಸ ತಡವಾಗುತ್ತದೆ. ನಾನು ಸಮಯಕ್ಕೆ ಸರಿಯಾಗಿ ಕರ್ತವ್ಯ ಹಾಜರಾಗುತ್ತಿದ್ದೇನೆ. ಟೋಕನ್ ನೀಡಿದ ಎಲ್ಲರ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
ಅದಕ್ಕೆ ಪ್ರತಿಕ್ರಿಯಿಸಿದ ಶಾಸಕರು ತಾಂತ್ರಿಕ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ಸರಿಪಡಿಸುವ ಜವಾಬ್ದಾರಿ ನಿಮ್ಮದಾಗಿದೆ. ತಮ್ಮ ಕೆಲಸ ಕಾರ್ಯಗಳಿಗೆ ಬರುವ ಜನರಿಗೆ ಯಾವುದೇ ಸಮಸ್ಯೆ ಆಗಬಾರದು. ಅವರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಹೇಳಿದರು. ಸಮಸ್ಯೆ ಇದ್ದರೆ ಮೇಲಾಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿ.. ಇಲ್ಲಿಯ ಪರಿಸ್ಥಿತಿಯ ಬಗ್ಗೆ ವಿವರಿಸಿ, ತಕ್ಷಣವೇ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸೂಚನೆ ನೀಡಿದರು.
Video:
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm