ಬ್ರೇಕಿಂಗ್ ನ್ಯೂಸ್
06-11-21 02:16 pm Mangaluru Correspondent ಕರಾವಳಿ
ಮಂಗಳೂರು, ನ.6: ಮೀನುಗಾರಿಕೆ ನಡೆಸುತ್ತಿದ್ದ ಬೋಟಿನ ಇಂಜಿನ್ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ಅಪಾಯಕ್ಕೀಡಾಗಿದ್ದ ಏಳು ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿದೆ. ಕಾರವಾರ ಲೈಟ್ ಹೌಸ್ನಿಂದ ಹತ್ತು ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ.
ಅಪಾಯದ ಬಗ್ಗೆ ಮಾಹಿತಿ ಪಡೆದ ನವ ಮಂಗಳೂರು ಬಂದರು ಬಳಿಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು ಘಟನಾ ಸ್ಥಳಕ್ಕೆ ತೆರಳಿ ಬೋಟ್ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿ ಅನಾಹುತವನ್ನು ತಪ್ಪಿಸಿದ್ದಾರೆ. ಕಾರವಾರದಿಂದ ಮೀನುಗಾರಿಕೆಗೆ ತೆರಳಿದ್ದ ವರದಾ ವಿನಾಯಕ ಮೀನುಗಾರಿಕಾ ಬೋಟ್ನಲ್ಲಿ ಏಕಾಏಕಿ ಶಾಟ್ ಸರ್ಕ್ಯೂಟ್ ಉಂಟಾಗಿದ್ದು, ಇದರಿಂದ ಇಡೀ ಬೋಟ್ಗೆ ಹತ್ತಿಕೊಂಡಿತ್ತು.


ಬೆಂಕಿ ಅವಘಡದ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಮಂಗಳೂರು ಕಚೇರಿಗೆ ರಾತ್ರಿ ಹತ್ತು ಗಂಟೆ ವೇಳೆಗೆ ಮಾಹಿತಿ ನೀಡಲಾಗಿತ್ತು. ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ ವರದಾ ವಿನಾಯಕ ಬೋಟ್ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದು ಬೆಂಕಿಯನ್ನು ನಂದಿಸಿದ್ದಾರೆ.
ಅಪಾಯಕ್ಕೀಡಾಗಿದ್ದ ಮೀನುಗಾರರು ಸುರಕ್ಷಿತರಾಗಿದ್ದು ಸೇಫ್ ಆಗಿ ಮರಳಿ ಕಾರವಾರ ಸೇರಿದ್ದಾರೆ. ಇದೇ ವೇಳೆ, ದುರಂತಕ್ಕೀಡಾದ ಬೋಟನ್ನೂ ಕೋಸ್ಟ್ ಗಾರ್ಡ್ ಪಡೆ ಸಮುದ್ರದಲ್ಲಿ ಎಳ್ಕೊಂಡು ಬಂದು ಕಾರವಾರ ತಲುಪಿಸಿದೆ.
he timely and swift action by the Indian Coast Guard had saved the lives of 7 fishermen in distress due to fire engulfed on a fishing boat IFB Varda Vinayaka-I (IND KA 02 MM 4495) due to a short circuit in the wheelhouse. The fishing boat was at a distance of 10 NM from Karwar lighthouse.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am