ಬ್ರೇಕಿಂಗ್ ನ್ಯೂಸ್
07-11-21 02:01 pm Mangaluru Correspondent ಕರಾವಳಿ
ಉಳ್ಳಾಲ, ನ.7: ತೊಕ್ಕೊಟ್ಟಿನಿಂದ ಕುತ್ತಾರು ತನಕದ ಮಂಗಳೂರು ವಿ.ವಿ ರಸ್ತೆಯು ಅಗಲೀಕರಣಗೊಳ್ಳುತ್ತಿದ್ದು , ಬಬ್ಬುಕಟ್ಟೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಸಮರ್ಪಕ ತಡೆಗೋಡೆ ಕಾಮಗಾರಿಯಿಂದಾಗಿ ಮಳೆ ನೀರು ಆಸುಪಾಸಿನ ಅಂಗಡಿ, ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.
ತೊಕ್ಕೊಟ್ಟು- ಕುತ್ತಾರು ವಿವಿ ರಸ್ತೆ ಅಗಲೀಕರಣ ಆಗುತ್ತಿರುವುದರಿಂದ ಬಬ್ಬುಕಟ್ಟೆಯಲ್ಲಿ ರಸ್ತೆ ಅಂಚಿಗೆ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಆದರೆ ಮುನ್ನೆಚ್ಚರಿಕೆ ವಹಿಸದೆ ತಡೆಗೋಡೆ ನಿರ್ಮಾಣ ಕೆಲಸ ನಡೆಸುತ್ತಿರುವ ಪರಿಣಾಮ ನಿನ್ನೆ ರಾತ್ರಿ ಸುರಿದ ಮಳೆ ನೀರು ಪರಿಸರದ ಅನೇಕ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬಬ್ಬುಕಟ್ಟೆ ರಸ್ತೆಯ ಪಕ್ಕದ ಪಿಲಾರು ಹೊಸಗದ್ದೆ ಪರಿಸರದ ಇಪ್ಪತ್ತಕ್ಕೂ ಹೆಚ್ಚು ಮನೆಗಳು, ಅಂಗಡಿಗಳಿಗೆ ಮಳೆ ನೀರು ನುಗ್ಗಿದೆ.





ಪಿಲಾರು ಹೊಸಗದ್ದೆ ನಿವಾಸಿ ಎವರೆಸ್ಟ್ ಡಿ ಸೋಜಾ ಅವರ ವಾಣಿಜ್ಯ ಸಂಕೀರ್ಣ, ಮನೆಗಳಿಗೆ ಮಳೆ ನೀರು ನುಗ್ಗಿದ್ದಲ್ಲದೆ , ಮನೆ ಅಂಗಳದ ಬಾವಿಗೂ ಮಳೆಯ ಕೊಳಚೆ ನೀರು ಸೇರಿ ಕಲುಷಿತಗೊಂಡಿದೆ. ಪಿಲಾರು ಹೊಸಗದ್ದೆ ಪರಿಸರದಲ್ಲಿ ಉಳ್ಳಾಲ ನಗರಸಭೆ ನಿರ್ಮಿಸಿರುವ ಚರಂಡಿ ಕಾಮಗಾರಿಯೂ ಅವೈಜ್ಞಾನಿಕವಾಗಿದ್ದು ಕಳೆದ ವರ್ಷವೂ ಇದೇ ರೀತಿ ಮಳೆ ನೀರು ರಸ್ತೆಯಲ್ಲೇ ಉಕ್ಕಿ ಹರಿದು ಮನೆಗಳಿಗೆ ನುಗ್ಗಿದೆಯೆಂದು ಸ್ಥಳೀಯರು ಆರೋಪಿಸಿದ್ದಾರೆ.


ಸ್ಥಳಕ್ಕೆ ರಸ್ತೆ ಅಗಲೀಕರಣ ಕಾಮಗಾರಿಯ ಗುತ್ತಿಗೆ ಕಂಪನಿಯ ಮುಖ್ಯಸ್ಥ ಭೇಟಿ ನೀಡಿದ್ದು ಸ್ಥಳೀಯರು ಆತನನ್ನ ತರಾಟೆಗೆ ತೆಗೆದಿದ್ದಾರೆ. ತಡೆಗೋಡೆ ಕಾಮಗಾರಿ ನಡೆಸುವಾಗ ಮುನ್ನೆಚ್ಚರಿಕೆ ವಹಿಸದೆ ನಿರ್ಲಕ್ಷ್ಯ ವಹಿಸಿದ ಫಲವಾಗಿ ಮಳೆನೀರು ರಾಜಕಾಲುವೆ ಬಿಟ್ಟು ಮನೆಗಳಿಗೆ ನುಗ್ಗಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಸಂಜೆಯೊಳಗೆ ಸಮಸ್ಯೆಯನ್ನ ಬಗೆಹರಿಸಿ ಕೊಡುವುದಾಗಿ ಗುತ್ತಿಗೆ ಕಂಪನಿ ಮುಖ್ಯಸ್ಥರು ಸ್ಥಳೀಯರಿಗೆ ಭರವಸೆ ಕೊಟ್ಟಿದ್ದಾರೆ.
Road Widening creates havoc after heavy rains, Houses lashed with rainwater in Thokottu.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm