ಬ್ರೇಕಿಂಗ್ ನ್ಯೂಸ್
10-11-21 06:05 pm Headline Karnataka News Network ಕರಾವಳಿ
ಮಂಗಳೂರು, ನ.10: ಮೂಲ್ಕಿ ಠಾಣೆ ವ್ಯಾಪ್ತಿಯ ಹಳೆಯಂಗಡಿ ಪೇಟೆಯಲ್ಲಿ ಮೀನು ಮಾರಾಟ ವಿಚಾರದ ಜಟಾಪಟಿ ಈಗ ಹಿಂದು- ಮುಸ್ಲಿಂ ದ್ವೇಷಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿಂದ ಜಟಾಪಟಿ ನಡೆಯುತ್ತಿದ್ದು, ಈಗ ಪೊಲೀಸರೇ ಬಂದು ಮೀನು ಮಾರಾಟಕ್ಕೆ ಸೆಕ್ಯುರಿಟಿ ನಿಲ್ಲುವ ಸ್ಥಿತಿ ಎದುರಾಗಿದೆ.
ಹಳೆಯಂಗಡಿ ಜಂಕ್ಷನ್ನಲ್ಲೇ ಮೀನು ಮಾರುಕಟ್ಟೆ ಸಂಕೀರ್ಣ ಇತ್ತು. ಆದರೆ, ಮಾರುಕಟ್ಟೆ ಕಟ್ಟಡ ಅಜೀರ್ಣಾವಸ್ಥೆಯಲ್ಲಿದ್ದ ಕಾರಣ ತಿಂಗಳ ಹಿಂದೆ ಅದನ್ನು ಪಂಚಾಯತ್ ವತಿಯಿಂದ ನೆಲಸಮ ಮಾಡಲಾಗಿತ್ತು. ಬದಲಿಗೆ, ಹೊಸ ಕಟ್ಟಡವನ್ನು ಶೀಘ್ರದಲ್ಲೇ ಮಾಡಿಕೊಡುವುದಾಗಿ ಹೇಳಿದ್ದರು. ಅಲ್ಲಿ ಮೀನು ಮಾರುತ್ತಿದ್ದವರಿಗೆ ತಾತ್ಕಾಲಿಕ ನೆಲೆಯಲ್ಲಿ ಹಳೆಯಂಗಡಿ ಬಸ್ ನಿಲ್ದಾಣದ ಬಳಿಯಲ್ಲೇ ವ್ಯವಸ್ಥೆ ಮಾಡಲಾಗಿತ್ತು.
ಆದರೆ ಯಾವುದೇ ಶೆಡ್ ನಿರ್ಮಿಸದೆ ಹೊರಭಾಗದಲ್ಲಿಯೇ ಮೊಗವೀರ ಮಹಿಳೆಯರು ಮೀನು ಮಾರಾಟ ಮಾಡುತ್ತಿದ್ದರು. ಇದೇ ವೇಳೆ, ಮುಸ್ಲಿಮ್ ಸಮುದಾಯದ ಯುವಕರು ಕೂಡ ಹಳೆಯಂಗಡಿ ಪೇಟೆಯಲ್ಲಿ ಅಲ್ಲಲ್ಲಿ ಗಾಡಿ ನಿಲ್ಲಿಸಿ, ಮೀನು ಮಾರಾಟಕ್ಕೆ ಇಳಿದಿದ್ದರು. ಇದೇ ವಿಚಾರ ಮೀನುಗಾರ ಮಹಿಳೆಯರು ಮತ್ತು ಮುಸ್ಲಿಮ್ ಯುವಕರ ನಡುವೆ ಜಟಾಪಟಿಗೆ ಕಾರಣವಾಗಿದ್ದು, ಮುಸ್ಲಿಂ ಯುವಕರು ಇಲ್ಲಿ ಬಂದು ಮೀನು ಮಾರಾಟ ಮಾಡಬಾರದು ಎಂದು ಮಹಿಳೆಯರು ತಗಾದೆ ಎತ್ತಿದ್ದಾರೆ. ಆದರೆ, ಯುವಕರು ಮಹಿಳೆಯರ ವಿರೋಧವನ್ನು ಲೆಕ್ಕಿಸಿಲ್ಲ. ನಾನು ಮೀನು ಮಾರಬಾರದು ಎಂದು ನೀವು ಹೇಗೆ ಹೇಳುತ್ತೀರಿ ಎಂದು ಮರು ಪ್ರಶ್ನೆ ಹಾಕಿದ್ದಾರೆ.


ಈ ಬಗ್ಗೆ ಮೂಲ್ಕಿ ಪೊಲೀಸ್ ಠಾಣೆ ಮತ್ತು ಹಳೆಯಂಗಡಿ ಪಂಚಾಯತಿಗೂ ದೂರು ನೀಡಲಾಗಿದೆ. ಅಧಿಕಾರಿಗಳು ಬಂದು ಎರಡೂ ಕಡೆಯ ಮೀನುಗಾರರಿಗೆ ಜೋರು ಮಾಡಿದ್ದಾರೆ. ಆದರೆ, ಮುಸ್ಲಿಂ ಯುವಕರು ತಮ್ಮನ್ನು ಮೀನು ಮಾರಬಾರದೆಂದು ಹೇಳಲು ನಿಮಗೆ ರೈಟ್ ಇಲ್ಲವೆಂದು ಪೊಲೀಸರ ಬಳಿಯೂ ರಂಪ ತೆಗೆದಿದ್ದಾರೆ. ಹೀಗಾಗಿ ಎರಡೂ ಕೋಮಿನ ನಡುವೆ ಮೀನು ಮಾರಾಟದ ವಿಚಾರ ವೈಷಮ್ಯಕ್ಕೆ ಕಾರಣವಾಗಿದೆ.
ಇದಲ್ಲದೆ, ಹಳೆಯಂಗಡಿ ಹಳೆ ಮಾರುಕಟ್ಟೆಯಲ್ಲಿ ಹಿಂದೆ ಇದ್ದ ಕೋಳಿ ಅಂಗಡಿಗಳೂ ಬಂದ್ ಆಗಿವೆ. ಆನಂತರ ಪರಿಸರದ ಇತರೇ ಅಂಗಡಿಗಳು, ಮನೆಗಳಲ್ಲಿಯೇ ಕೋಳಿಯನ್ನು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದಾರೆ. ಪಂಚಾಯತ್ ಲೈಸನ್ಸ್ ಇಲ್ಲದೆ ಮನೆಯಲ್ಲಿಯೇ ಕೋಳಿ ಮಾಂಸ ಮಾಡುವುದು, ಮಾರಾಟ ಮಾಡುವಂತಿಲ್ಲ. ಹಾಗಿದ್ದರೂ, ಈ ಬಗ್ಗೆ ಪಂಚಾಯತ್ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎನ್ನುವ ದೂರನ್ನು ಸ್ಥಳೀಯರು ತಿಳಿಸಿದ್ದಾರೆ.
ಇದಲ್ಲದೆ, ಹಳೆಯಂಗಡಿ ಪೇಟೆಯಲ್ಲಿ ಪಂಚಾಯತ್ ಪರವಾನಗಿ ಇಲ್ಲದೆ ಕೋಳಿ ಅಂಗಡಿಗಳನ್ನು ನಡೆಸಲಾಗುತ್ತಿದೆ ಎಂಬ ಆರೋಪವನ್ನೂ ಸ್ಥಳೀಯರು ಮಾಡಿದ್ದಾರೆ. ಕೋಳಿ ಮಾಂಸದ ಅಂಗಡಿ ನಡೆಸಲು ಸ್ಥಳೀಯ ಪಂಚಾಯತ್ ಪರವಾನಗಿ ಅಗತ್ಯವಿರುತ್ತದೆ. ಇದನ್ನು ಪಡೆಯದೆ ಕೆಲವರು ತಾತ್ಕಾಲಿಕ ವ್ಯವಸ್ಥೆಯಲ್ಲಿ ಕೋಳಿ ವ್ಯಾಪಾರ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
Mangalore Haleangadi dispute erupts between Fishermen over selling Fish between Inter religion faith. People allege illegal shops being opened at Houses.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm