ಬ್ರೇಕಿಂಗ್ ನ್ಯೂಸ್
12-11-21 04:29 pm Mangaluru correspondent ಕರಾವಳಿ
ಮಂಗಳೂರು, ನ.12: ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ನಗರದ ಕಂಕನಾಡಿಯಲ್ಲಿ ಕಂಡುಬಂದಿದ್ದು ಕದ್ರಿ ಪೊಲೀಸರು ಶವವನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದಾರೆ.
ವ್ಯಕ್ತಿಯನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ ಕೊಟ್ಟಾರಿ (44) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿಯ ಬೈಪಾಸ್ ರಸ್ತೆಯ ಬದಿ ಕಾರು ನಿಲ್ಲಿಸಿ, ಅದರೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಾರ್ವಜನಿಕರು ಕಾರನ್ನು ನೋಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪ್ರಶಾಂತ್ ಕುಡಿತದ ಚಟ ಹೊಂದಿದ್ದು ದೈಹಿಕ ಅನಾರೋಗ್ಯ ಹೊಂದಿದ್ದರು. ಖಾಸಗಿ ಕಂಪನಿ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಪ್ರಶಾಂತ್ ವೈದ್ಯರ ಬಳಿ ತಪಾಸಣೆಗೆ ಹೋಗಿದ್ದರು. ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸಲಹೆ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಮನೆಯಲ್ಲಿ ಆಸ್ಪತ್ರೆಗೆ ದಾಖಲಾಗುವುದಾಗಿ ಹೇಳಿ 50 ಸಾವಿರ ಹಣದ ಜೊತೆಗೆ ನಿನ್ನೆ ಸಂಜೆ ಕಾರಿನಲ್ಲಿ ತೆರಳಿದ್ದರು. ರಾತ್ರಿ ಮನೆಗೆ ಬಂದಿರಲಿಲ್ಲ.
ಆದರೆ ಇಂದು ತನ್ನ ಇಕೋ ಸ್ಪೋರ್ಟ್ ಕಾರಿನ ಒಳಗೇ ಪ್ರಶಾಂತ್ ಶವವಾಗಿ ಕಂಡುಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಹೃದಯಾಘಾತದಿಂದ ಸಾವು ಕಂಡಿದ್ದಾರೆಯೇ ಎನ್ನುವುದು ಗೊತ್ತಾಗಿಲ್ಲ. ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕವೇ ಸಾವಿನ ಬಗ್ಗೆ ಮಾಹಿತಿ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಎಸಿ ಹಾಕಿ, ಗ್ಲಾಸ್ ಬಂದ್ ಮಾಡಿ ಮಲಗಿದ್ದ ಬಳಿಕ ಕಾರು ರಾತ್ರಿ ವೇಳೆ ಆಫ್ ಆಗಿದ್ದರೂ ಉಸಿರುಗಟ್ಟಿ ಸಾವು ಸಂಭವಿಸಬಹುದು ಎನ್ನುತ್ತಾರೆ, ಪೊಲೀಸರು.
A 44-year-old man was found dead in car here on Friday November 12 near Kankanady circle in Mangalore.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
07-02-26 11:47 am
Mangaluru Staffer
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am