ಬ್ರೇಕಿಂಗ್ ನ್ಯೂಸ್
12-11-21 04:29 pm Mangaluru correspondent ಕರಾವಳಿ
ಮಂಗಳೂರು, ನ.12: ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ನಗರದ ಕಂಕನಾಡಿಯಲ್ಲಿ ಕಂಡುಬಂದಿದ್ದು ಕದ್ರಿ ಪೊಲೀಸರು ಶವವನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದಾರೆ.
ವ್ಯಕ್ತಿಯನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ ಕೊಟ್ಟಾರಿ (44) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿಯ ಬೈಪಾಸ್ ರಸ್ತೆಯ ಬದಿ ಕಾರು ನಿಲ್ಲಿಸಿ, ಅದರೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಾರ್ವಜನಿಕರು ಕಾರನ್ನು ನೋಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪ್ರಶಾಂತ್ ಕುಡಿತದ ಚಟ ಹೊಂದಿದ್ದು ದೈಹಿಕ ಅನಾರೋಗ್ಯ ಹೊಂದಿದ್ದರು. ಖಾಸಗಿ ಕಂಪನಿ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಪ್ರಶಾಂತ್ ವೈದ್ಯರ ಬಳಿ ತಪಾಸಣೆಗೆ ಹೋಗಿದ್ದರು. ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸಲಹೆ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಮನೆಯಲ್ಲಿ ಆಸ್ಪತ್ರೆಗೆ ದಾಖಲಾಗುವುದಾಗಿ ಹೇಳಿ 50 ಸಾವಿರ ಹಣದ ಜೊತೆಗೆ ನಿನ್ನೆ ಸಂಜೆ ಕಾರಿನಲ್ಲಿ ತೆರಳಿದ್ದರು. ರಾತ್ರಿ ಮನೆಗೆ ಬಂದಿರಲಿಲ್ಲ.
ಆದರೆ ಇಂದು ತನ್ನ ಇಕೋ ಸ್ಪೋರ್ಟ್ ಕಾರಿನ ಒಳಗೇ ಪ್ರಶಾಂತ್ ಶವವಾಗಿ ಕಂಡುಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಹೃದಯಾಘಾತದಿಂದ ಸಾವು ಕಂಡಿದ್ದಾರೆಯೇ ಎನ್ನುವುದು ಗೊತ್ತಾಗಿಲ್ಲ. ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕವೇ ಸಾವಿನ ಬಗ್ಗೆ ಮಾಹಿತಿ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಎಸಿ ಹಾಕಿ, ಗ್ಲಾಸ್ ಬಂದ್ ಮಾಡಿ ಮಲಗಿದ್ದ ಬಳಿಕ ಕಾರು ರಾತ್ರಿ ವೇಳೆ ಆಫ್ ಆಗಿದ್ದರೂ ಉಸಿರುಗಟ್ಟಿ ಸಾವು ಸಂಭವಿಸಬಹುದು ಎನ್ನುತ್ತಾರೆ, ಪೊಲೀಸರು.
A 44-year-old man was found dead in car here on Friday November 12 near Kankanady circle in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am