ಬ್ರೇಕಿಂಗ್ ನ್ಯೂಸ್
12-11-21 09:30 pm Mangaluru Correspondent ಕರಾವಳಿ
ಮಂಗಳೂರು, ನ.12; ಮಂಗಳೂರು ಮತ್ತು ಬಂಟ್ವಾಳ ತಾಲೂಕನ್ನು ಸಂಪರ್ಕಿಸುತ್ತಿದ್ದ ಕುಪ್ಪೆಪದವು ಬಳಿಯ ಮುಚ್ಚೂರಿನ ಮುಲ್ಲರಪಟ್ಣ ಸೇತುವೆ ನೋಡ ನೋಡುತ್ತಲೇ ಎದ್ದು ನಿಂತಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮತ್ತು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಇಂದು ಸ್ಥಳೀಯರ ಜೊತೆ ಸೇರಿ ಹೊಸ ಸೇತುವೆಯನ್ನು ಲೋಕಾರ್ಪಣೆ ಮಾಡಿದ್ದಾರೆ.
ಮುಲ್ಲರಪಟ್ಣದಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿದ್ದ ಸೇತುವೆ ತೀವ್ರ ಮರಳುಗಾರಿಕೆಯ ಪರಿಣಾಮ 2018 ರ ಜೂನ್ 25 ರಂದು ಕುಸಿದು ಬಿದ್ದಿತ್ತು. ಒಂದೂವರೆ ವರ್ಷ ಕಳೆದರೂ, ಸೇತುವೆ ಮರು ನಿರ್ಮಾಣ ಕಾರ್ಯ ನಡೆದಿರಲಿಲ್ಲ. ಹೀಗಾಗಿ ಸ್ಥಳೀಯರು ಅತ್ತಿತ್ತ ಹೋಗಲು ಸುತ್ತಿ ಬಳಸಿ ಸಂಚಾರ ಮಾಡಬೇಕಾಗಿತ್ತು. ಜನರು ಹಿಡಿಶಾಪ ಹಾಕುತ್ತಲೇ ಇದ್ದರು. ಆಗ ಸಚಿವರಾಗಿದ್ದ ಯುಟಿ ಖಾದರ್, 15 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ ಮಾಡುವುದಾಗಿ ಹೇಳುತ್ತಾ ಬಂದಿದ್ದರು.


ಆನಂತರ ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದಿತ್ತು. ಸ್ಥಳೀಯರ ಅಹವಾಲು, ದೂರಿನ ಸರಮಾಲೆ ಉಭಯ ಬಿಜೆಪಿ ಶಾಸಕರ ಮೇಲೆ ತಿರುಗಿತ್ತು. ಸವಾಲಾಗಿ ಸ್ವೀಕರಿಸಿದ ಶಾಸಕರು ಸೇತುವೆ ಕಾಮಗಾರಿ ಗುತ್ತಿಗೆಯನ್ನು ಕಾವೂರಿನ ಮೊಗ್ರೋಡಿ ಕನ್ ಸ್ಟ್ರಕ್ಷನ್ ಸಂಸ್ಥೆಗೆ ವಹಿಸಿದ್ದರು. ಮೊಗ್ರೋಡಿಯವರು ಕೆಲಸ ಹಿಡಿದಿದ್ದೇ ತಡ ಜನರು ನೋಡ ನೋಡುತ್ತಲೇ ಹೊಸ ಸೇತುವೆಯ ಕೆಲಸ ಯಾರೂ ಊಹಿಸದ ರೀತಿ ನಡೆದಿತ್ತು. ಇನ್ನೂರು ಮೀಟರ್ ಉದ್ದದ ಸೇತುವೆ ಕೆಲಸ ಕೇವಲ ಒಂದೂವರೆ ವರ್ಷದಲ್ಲಿ ಪೂರ್ತಿಯಾಗಿದ್ದು ಜನರ ಸಂಚಾರಕ್ಕೆ ತೆರೆದುಕೊಂಡಿದೆ.
ಸ್ಥಳೀಯರ ಸಂಕಷ್ಟ ಅರಿತಿದ್ದ ಶಾಸಕದ್ವಯರು ಸೇತುವೆ ಉದ್ಘಾಟನೆಯನ್ನು ಸದ್ದಿಲ್ಲದೆ ನೆರವೇರಿಸಿದ್ದಾರೆ. ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳನ್ನು ಮುಚ್ಚೂರು ಮತ್ತು ಅರಳದ ಗ್ರಾಮದ ನಡುವೆ ಸಂಪರ್ಕಿಸುವ ಮುಲ್ಲರಪಟ್ಣ ಸೇತುವೆ ರೂ.13.90 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ನೂತನ ಸೇತುವೆಯನ್ನು ಊರಿನ ಹಿರಿಯರು ತೆಂಗಿನಕಾಯಿ ಒಡೆದು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.
ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯಾವುದೇ ಉದ್ಘಾಟನೆ ಕಾರ್ಯಕ್ರಮ ಮಾಡದೇ ಸೇತುವೆಯಲ್ಲಿ ಊರಿನ ಪ್ರಮುಖರ ಜತೆ ನಡೆದು ಸಾಗಿ ಕಾಮಗಾರಿಯನ್ನು ಪರಿಶೀಲಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಸೇತುವೆ ನಿರ್ಮಾಣ ಸಂಸ್ಥೆ ಕಾವೂರು ಮುಗ್ರೋಡಿ ಕನ್ ಸ್ಟ್ರಕ್ಷನ್ಸ್ ಮಾಲಕ ಸುಧಾಕರ ಶೆಟ್ಟಿ ಮುಗ್ರೋಡಿ, ದಾಮೋದರ್, ಅರಳ ಗ್ರಾ.ಪಂ. ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಉಪಾಧ್ಯಕ್ಷೆ ಪ್ರೇಮಾ, ಮುತ್ತೂರು ಗ್ರಾ.ಪಂ. ಅಧ್ಯಕ್ಷ ಸತೀಶ್ ಬೊಳ್ಳಾಜೆ, ಗಂಜಿಮಠ ಗ್ರಾ.ಪಂ. ಅಧ್ಯಕ್ಷ ನೋಣಯ್ಯ ಕೋಟ್ಯಾನ್, ತೆಂಕ ಎಡಪದವು ಗ್ರಾ.ಪಂ. ಅಧ್ಯಕ್ಷ ಸುಕುಮಾರ್ ದೇವಾಡಿಗ, ತಾ.ಪಂ. ಮಾಜಿ ಸದಸ್ಯ ನಾಗೇಶ್ ಶೆಟ್ಟಿ, ಬಡಗಬೆಳ್ಳೂರು ಗ್ರಾ.ಪಂ. ಅಧ್ಯಕ್ಷ ಪ್ರಕಾಶ್ ಆಳ್ವ ಮೊದಲಾದವರಿದ್ದರು.
The Mularpatna bridge which was 50 year old, was acting as a prominent link between Mangaluru and Bantwal taluk Is now all ready for Vechilur moment.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm