ಬ್ರೇಕಿಂಗ್ ನ್ಯೂಸ್
16-11-21 10:03 pm Mangaluru Correspondent ಕರಾವಳಿ
ಉಳ್ಳಾಲ, ನ.16: ಕುಂಪಲ, ಪಿಲಾರು ಪ್ರದೇಶದಲ್ಲಿ ಮರಿ ಚಿರತೆಯನ್ನು ಮೂವರು ಪ್ರತ್ಯಕ್ಷವಾಗಿ ಕಂಡಿದ್ದ ಹಿನ್ನೆಲೆಯಲ್ಲಿ ಕಾರ್ಯಪೃವೃತ್ತರಾದ ಅರಣ್ಯ ಇಲಾಖಾಧಿಕಾರಿಗಳು ಇಂದು ಸರಳಾಯ ಕಾಲನಿಯಲ್ಲಿ ಬೋನು ಇಟ್ಟು ಆಪರೇಷನ್ ಚೀತಾ ಕಾರ್ಯಾಚರಣೆಗೆ ಇಳಿದಿದ್ದಾರೆ.
ಕಳೆದ ಶನಿವಾರ ಸಂಜೆ ಗುತ್ತಿಗೆದಾರ ಜಯಂತ್ ಕೊಂಡಾಣ ಎಂಬವರು ಸ್ಕೂಟರಲ್ಲಿ ಸರಳಾಯ ಕಾಲನಿ ರಸ್ತೆಯಲ್ಲಿ ತೆರಳುತ್ತಿದ್ದಾಗ ಮರಿ ಚಿರತೆಯೊಂದು ಪೊದೆಯಿಂದ ನೆಗೆದು ರಸ್ತೆ ದಾಟಿತ್ತೆನ್ನಲಾಗಿದೆ. ಇದಕ್ಕೂ ಹತ್ತು ದಿವಸಗಳ ಹಿಂದೆ ಪಿಲಾರು ಪಳ್ಳ ನಿವಾಸಿ ಶಿವರಾಜ್ ಪೊಣ್ಣು ಸ್ವಾಮಿ ಮತ್ತು ಸರಳಾಯ ಕಾಲನಿ ನಿವಾಸಿ ಮೌರಿಷ್ ಡಿಸೋಜ ಅವರು ಮರಿ ಚಿರತೆಯನ್ನ ಕಣ್ಣಾರೆ ಕಂಡಿದ್ದಾಗಿ ಹೇಳಿದ್ದರು. ಮೌರಿಷ್ ಡಿಸೋಜ ಅವರು ಬೆಳಗ್ಗೆ ತೋಟದ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಚಿರತೆ ಮರಿಯು ಡಿಸೋಜರನ್ನ ದಿಟ್ಟಿಸಿ ಬುಸುಗುಟ್ಟಿ ಓಡಿತ್ತೆನ್ನಲಾಗಿದೆ. ಪ್ರತ್ಯಕ್ಷದರ್ಶಿ ಹೇಳಿಕೆಗಳನ್ನ ಗಂಭೀರವಾಗಿ ಪರಿಗಣಿಸಿದ್ದ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ನೇತೃತ್ವದ ತಂಡ ಚಿರತೆ ಕಾಣಿಸಿಕೊಂಡ ಪ್ರದೇಶಗಳಿಗೆ ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಇಂದು ಅರಣ್ಯಾಧಿಕಾರಿಗಳು ಮರಿ ಚಿರತೆಯನ್ನು ಸೆರೆ ಹಿಡಿಯಲು ಸರಳಾಯ ಕಾಲನಿಯ ಪೊದೆಗಳ ಪ್ರದೇಶದಲ್ಲಿ ಬೋನನ್ನು ಇಟ್ಟಿದ್ದಾರೆ.



ಪ್ರದೇಶದಲ್ಲಿ ಚಿರತೆ ಇರುವಿಕೆಯ ಬಗ್ಗೆ ಪ್ರತ್ಯಕ್ಷ ದರ್ಶಿಗಳು ಹೇಳಿರುವುದರ ಹಿನ್ನೆಲೆಯಲ್ಲಿ ಬೋನನ್ನು ಇಟ್ಟು ಕಾರ್ಯಾಚರಣೆ ಶುರು ಮಾಡಿದ್ದೇವೆ. ಸ್ಥಳೀಯರು ಆದಷ್ಟು ಜಾಗರೂಕರಾಗಿರುವಂತೆ ಅರಣ್ಯಾಧಿಕಾರಿ ಮಹಾಬಲ ಅವರು ಜನರಿಗೆ ಸೂಚನೆ ನೀಡಿದ್ದಾರೆ.
ಸ್ಥಳೀಯ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ, ಕಾಂಗ್ರೆಸ್ ಮುಖಂಡ ದಿನೇಶ್ ಕುಂಪಲ ಅವರು ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಿದ್ದಾರೆ. ಬೋನನ್ನ ತರುವಲ್ಲಿ ಸ್ಥಳೀಯರಾದ ಕಿಶೋರ್ ಕುಂಪಲ, ನಾಗೇಶ್ ಕುಂಪಲ, ಅಭಿಜಿನ್, ತರುಣ್ ಅವರು ಇಲಾಖಾಧಿಕಾರಿಗಳಿಗೆ ಸಹಕರಿಸಿದ್ದಾರೆ. ಅರಣ್ಯ ರಕ್ಷಕಿ ಸೌಮ್ಯ ಕೆ. ಜೊತೆಗಿದ್ದರು.
ಕುಂಪಲ, ಪಿಲಾರು ಪ್ರದೇಶದಲ್ಲಿ ಚಿರತೆ ಗುಮ್ಮ ; ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಚಿರತೆ ಬಗ್ಗೆ ಸಿಗದ ಸುಳಿವು
ಕುಂಪಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ! ಅರಣ್ಯ ಅಧಿಕಾರಿಗಳ ದೌಡು, ಆಪರೇಷನ್ ಚೀತಾ ಕಾರ್ಯಾಚರಣೆಗೆ ಸಿದ್ಧತೆ
Mangalore Cheetah in Kumpala near Pillar Forest officials wait for catch with bone.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm