ಬ್ರೇಕಿಂಗ್ ನ್ಯೂಸ್
17-11-21 12:54 pm Mangaluru Correspondent ಕರಾವಳಿ
ಉಡುಪಿ, ನ.17: ಪಡುಬಿದ್ರಿ ಪೇಟೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಾಲಕೃಷ್ಣ ಭಟ್ (74) ಎಂಬವರು ಮೃತಪಟ್ಟಿದ್ದಾರೆ. ಏಕಮುಖ ಸಂಚಾರದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ಧಾವಂತದಿಂದ ಬಂದ ಕಾರು ಡಿಕ್ಕಿಯಾಗಿದ್ದು, ಸ್ಕೂಟರ್ ಮತ್ತು ಅದರಲ್ಲಿದ್ದ ಸವಾರ 25 ಅಡಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.
ಪಡುಬಿದ್ರಿಯ ಕೆಳಗಿನ ಪೇಟೆಯಲ್ಲಿ ಘಟನೆ ನಡೆದಿದೆ. ಹೊರ ರಸ್ತೆಯಿಂದ ಸ್ಕೂಟರಿನಲ್ಲಿ ಬಂದಿದ್ದ ಬಾಲಕೃಷ್ಣ ಭಟ್, ಹೈವೇ ರಸ್ತೆಗೆ ಬಂದು ಡಿವೈಡರ್ ದಾಟಿ ಮತ್ತೊಂದು ರಸ್ತೆ ಸೇರುವಲ್ಲಿ ಹಿಂದಿನಿಂದ ಅತಿ ವೇಗದಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ವೇಗದಿಂದ ಬರುತ್ತಿದ್ದ ಕಾರನ್ನು ನೋಡದೆ ರಸ್ತೆ ದಾಟಲು ಹೋಗಿದ್ದು ಅಪಘಾತಕ್ಕೆ ಕಾರಣವಾಗಿತ್ತು. ಹೆಜಮಾಡಿಯತ್ತ ಹೋಗುತ್ತಿದ್ದ ಕಾರು ನೇರವಾಗಿ ಸ್ಕೂಟರಿಗೆ ಡಿಕ್ಕಿಯಾಗಿದ್ದರಿಂದ ಅದರ ರಭಸಕ್ಕೆ ಸವಾರ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ರಸ್ತೆಗೆ ಬಿದ್ದ ಕಾರಣ ತಲೆಗೆ ತೀವ್ರ ಪೆಟ್ಟಾಗಿದ್ದು, ಕೂಡಲೇ ಬಾಲಕೃಷ್ಣ ಭಟ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಒಯ್ಯಲಾಗಿದೆ.
ಆದರೆ ಅಷ್ಟರಲ್ಲೇ ಬಾಲಕೃಷ್ಣ ಭಟ್ ಸಾವು ಕಂಡಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮಿಳುನಾಡು, ಪಡುಬಿದ್ರಿಯಲ್ಲಿ ಹೊಟಲೇ ಮ್ಯಾನೇಜರ್ ಆಗಿದ್ದ ಬಾಲಕೃಷ್ಣ ಭಟ್, ಆನಂತರ ಪಡುಬಿದ್ರಿಯಲ್ಲೇ ನೆಲೆಸಿದ್ದರು. ಪಾದೆಬೆಟ್ಟು ಬ್ರಾಹ್ಮಣರ ಸಂಘದಲ್ಲಿ ಸಕ್ರಿಯವಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.
Balakrishna Bhat (74), a resident of Padebettu, who was riding scooter towards Mangaluru on the one-way lane was killed after a speeding car following him rammed into his vehicle in the rear. The accident happened at the highway bend at Kelagina Pete, Padubidri on Tuesday November16.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 06:08 pm
HK News Staffer
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am