ಬ್ರೇಕಿಂಗ್ ನ್ಯೂಸ್
12-09-20 06:31 pm Mangaluru Correspondant ಕರಾವಳಿ
ಮಂಗಳೂರು, ಸೆಪ್ಟಂಬರ್ 12: ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿರುವ ನಟಿಯರು ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಹಬ್ ಆಗಿರುವ ಮಂಗಳೂರಿನಲ್ಲಿಯೂ ಪೊಲೀಸರು ನಿಗಾ ವಹಿಸಬೇಕು. ಇಲ್ಲಿನ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದೊಡ್ಡ ಮಟ್ಟದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದೆ. ಇದನ್ನು ಮಟ್ಟ ಹಾಕಲು ಯಾವುದೇ ರಾಜಕೀಯ ಒತ್ತಡಗಳಿಗೆ ಒಳಗಾಗದೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಎಬಿವಿಪಿ ವತಿಯಿಂದ ಇತ್ತೀಚೆಗೆ ಮಂಗಳೂರಿಗೆ ಆಗಮಿಸಿದ್ದ ಡಿಜಿಪಿ ಪ್ರವೀಣ್ ಸೂದ್ ಗೆ ಮನವಿ ನೀಡಲಾಗಿದೆ.

ಡ್ರಗ್ಸ್ ದಂಧೆ ಮಟ್ಟ ಹಾಕಲು ಮನವಿ ಪತ್ರದಲ್ಲಿ ಕೆಲವೊಂದು ಸಲಹೆಗಳನ್ನೂ ನೀಡಲಾಗಿದೆ. ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕಾಲೇಜು ಕ್ಯಾಂಪಸ್ ಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಬೇಕು. ಅಲ್ಲದೆ ಅಪರಾಧ ಮಾಹಿತಿಯುಳ್ಳ ಕರಪತ್ರಗಳನ್ನು ಕಾಲೇಜುಗಳಲ್ಲಿ ಅಂಟಿಸಬೇಕು. ಕಾಲೇಜು ಕ್ಯಾಂಪಸ್ ಬಳಿ ಇರುವ ಪಾನ್ ಶಾಪ್, ಜೆರಾಕ್ಸ್ ಶಾಪ್, ಹೊಟೇಲ್, ಜ್ಯೂಸ್ ಸೆಂಟರ್ ಗಳ ಮೇಲೆ ನಿಗಾ ಇಡಬೇಕು. ನಗರದಲ್ಲಿರುವ ಸರಕಾರಿ, ಖಾಸಗಿ ಹಾಸ್ಟೆಲ್ ಗಳು, ಪಿ.ಜಿ.ಗಳ ಬಗ್ಗೆ ಮಾಹಿತಿ ಪಡೆದು ಅಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಬೇಕು. ಕಾಲೇಜು ಕ್ಯಾಂಪಸ್ ಸುತ್ತಮುತ್ತ ದಿನದಲ್ಲಿ ಒಂದು ಬಾರಿಯಾದ್ರೂ ಪೊಲೀಸರು ಗಸ್ತು ತಿರುಗಬೇಕು. ಈಗಾಗಲೇ ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಬೇಕು. ಒಂದು ವೇಳೆ ವಿದ್ಯಾರ್ಥಿಗಳು ಸಿಕ್ಕಿಬಿದ್ದರೆ ಅಂಥ ವಿದ್ಯಾರ್ಥಿಗಳಿಗೆ ಆಯಾ ಠಾಣೆಗಳ ವ್ಯಾಪ್ತಿಯಲ್ಲಿ ಕೌನ್ಸೆಲಿಂಗ್ ಮಾಡಬೇಕು. ಎಂಬಿತ್ಯಾದಿ ಸಲಹೆ, ಒತ್ತಾಯಗಳನ್ನು ಮನವಿಯಲ್ಲಿ ಮಾಡಲಾಗಿದೆ.
ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಆಶಿಶ್ ಅಜ್ಜಿಬೆಟ್ಟು ಹಾಗೂ ಮಂಗಳೂರು ನಗರ ಸಹ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ಮನವಿಯನ್ನು ಡಿಜಿಪಿ ಪ್ರವೀಣ್ ಸೂದ್ ಮತ್ತು ಮಂಗಳೂರು ಕಮಿಷನರ್ ವಿಕಾಸ್ ಕುಮಾರ್ ಅವರಿಗೆ ನೀಡಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm