ಬ್ರೇಕಿಂಗ್ ನ್ಯೂಸ್
12-09-20 06:31 pm Mangaluru Correspondant ಕರಾವಳಿ
ಮಂಗಳೂರು, ಸೆಪ್ಟಂಬರ್ 12: ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿರುವ ನಟಿಯರು ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಹಬ್ ಆಗಿರುವ ಮಂಗಳೂರಿನಲ್ಲಿಯೂ ಪೊಲೀಸರು ನಿಗಾ ವಹಿಸಬೇಕು. ಇಲ್ಲಿನ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದೊಡ್ಡ ಮಟ್ಟದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದೆ. ಇದನ್ನು ಮಟ್ಟ ಹಾಕಲು ಯಾವುದೇ ರಾಜಕೀಯ ಒತ್ತಡಗಳಿಗೆ ಒಳಗಾಗದೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಎಬಿವಿಪಿ ವತಿಯಿಂದ ಇತ್ತೀಚೆಗೆ ಮಂಗಳೂರಿಗೆ ಆಗಮಿಸಿದ್ದ ಡಿಜಿಪಿ ಪ್ರವೀಣ್ ಸೂದ್ ಗೆ ಮನವಿ ನೀಡಲಾಗಿದೆ.

ಡ್ರಗ್ಸ್ ದಂಧೆ ಮಟ್ಟ ಹಾಕಲು ಮನವಿ ಪತ್ರದಲ್ಲಿ ಕೆಲವೊಂದು ಸಲಹೆಗಳನ್ನೂ ನೀಡಲಾಗಿದೆ. ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕಾಲೇಜು ಕ್ಯಾಂಪಸ್ ಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಬೇಕು. ಅಲ್ಲದೆ ಅಪರಾಧ ಮಾಹಿತಿಯುಳ್ಳ ಕರಪತ್ರಗಳನ್ನು ಕಾಲೇಜುಗಳಲ್ಲಿ ಅಂಟಿಸಬೇಕು. ಕಾಲೇಜು ಕ್ಯಾಂಪಸ್ ಬಳಿ ಇರುವ ಪಾನ್ ಶಾಪ್, ಜೆರಾಕ್ಸ್ ಶಾಪ್, ಹೊಟೇಲ್, ಜ್ಯೂಸ್ ಸೆಂಟರ್ ಗಳ ಮೇಲೆ ನಿಗಾ ಇಡಬೇಕು. ನಗರದಲ್ಲಿರುವ ಸರಕಾರಿ, ಖಾಸಗಿ ಹಾಸ್ಟೆಲ್ ಗಳು, ಪಿ.ಜಿ.ಗಳ ಬಗ್ಗೆ ಮಾಹಿತಿ ಪಡೆದು ಅಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಬೇಕು. ಕಾಲೇಜು ಕ್ಯಾಂಪಸ್ ಸುತ್ತಮುತ್ತ ದಿನದಲ್ಲಿ ಒಂದು ಬಾರಿಯಾದ್ರೂ ಪೊಲೀಸರು ಗಸ್ತು ತಿರುಗಬೇಕು. ಈಗಾಗಲೇ ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಬೇಕು. ಒಂದು ವೇಳೆ ವಿದ್ಯಾರ್ಥಿಗಳು ಸಿಕ್ಕಿಬಿದ್ದರೆ ಅಂಥ ವಿದ್ಯಾರ್ಥಿಗಳಿಗೆ ಆಯಾ ಠಾಣೆಗಳ ವ್ಯಾಪ್ತಿಯಲ್ಲಿ ಕೌನ್ಸೆಲಿಂಗ್ ಮಾಡಬೇಕು. ಎಂಬಿತ್ಯಾದಿ ಸಲಹೆ, ಒತ್ತಾಯಗಳನ್ನು ಮನವಿಯಲ್ಲಿ ಮಾಡಲಾಗಿದೆ.
ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಆಶಿಶ್ ಅಜ್ಜಿಬೆಟ್ಟು ಹಾಗೂ ಮಂಗಳೂರು ನಗರ ಸಹ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ಮನವಿಯನ್ನು ಡಿಜಿಪಿ ಪ್ರವೀಣ್ ಸೂದ್ ಮತ್ತು ಮಂಗಳೂರು ಕಮಿಷನರ್ ವಿಕಾಸ್ ಕುಮಾರ್ ಅವರಿಗೆ ನೀಡಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm