ಬ್ರೇಕಿಂಗ್ ನ್ಯೂಸ್
19-11-21 01:27 pm Mangaluru Correspondent ಕರಾವಳಿ
ಮಂಗಳೂರು, ನ.19: ಕಣಜದ ಹುಳುವಿನ ಕಡಿತಕ್ಕೊಳಗಾದ ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ತನ್ನ ಆರೋಗ್ಯದ ಬಗ್ಗೆ ನಿರ್ಲಕ್ಷಿಸಿ ಸಾವಿಗೀಡಾಗಿದ್ದಾರೆ.
ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಮೃತ ವ್ಯಕ್ತಿಯಾಗಿದ್ದು ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದರು.
ಸಂತೋಷ್ ಗುರುವಾರ ಸಂಜೆ ಕಿನ್ನಿಗೋಳಿ ಸಮೀಪದ ಶ್ರೀರಾಮ ಮಂದಿರದ ಬಳಿ ಆಟೋದಲ್ಲಿ ಹೋಗುತ್ತಿದ್ದಾಗ ಕಣಜದ ಹುಳುಗಳ ದಾಳಿಯಿಂದಾಗಿ ಶಾಲೆಯ ಮಕ್ಕಳು ಗಂಭೀರ ಸ್ಥಿತಿಯಲ್ಲಿದ್ದರು. ಇದನ್ನು ಕಂಡ ಸಂತೋಷ್ ಮಕ್ಕಳನ್ನು ಕಣಜದ ಹುಳುಗಳಿಂದ ರಕ್ಷಿಸಿ ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಮಕ್ಕಳ ರಕ್ಷಣೆಯ ಸಂದರ್ಭ ಕಣಜದ ಹುಳು ಸಂತೋಷ್ ಅವರಿಗೂ ಕಡಿದಿದ್ದು, ತಲೆ, ಮುಖಕ್ಕೆ ಕಡಿತ ಆಗಿದ್ದರೂ ಯಾವುದೇ ಚಿಕಿತ್ಸೆ ಪಡೆಯದೆ ಮನೆ ಕಡೆ ತೆರಳಿದ್ದರೆನ್ನಲಾಗಿದೆ. ಮನೆಯಲ್ಲಿ ರಾತ್ರಿ ಸುಮಾರು 9 ಗಂಟೆಗೆ ಕುರ್ಚಿಯಲ್ಲಿ ಕುಳಿತ್ತಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಆರು ಮಕ್ಕಳನ್ನು ಸಾವಿನ ದವಡೆಯಿಂದ ರಕ್ಷಣೆ ಮಾಡಿದ ಸಂತೋಷ್ ಸ್ವತಃ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ಇದ್ದುದು ಸಾವಿಗೆ ಕಾರಣ ಎನ್ನಲಾಗುತ್ತಿದೆ. ಮೃತರು ತಾಯಿ, ಪತ್ನಿ, ಮೂವರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಣಜದ ಹುಳುಗಳು ಕಚ್ಚಿದರೆ ಆಕೂಡಲೇ ದೊಡ್ಡ ಪರಿಣಾಮ ಆಗದಿದ್ದರೂ ಕಚ್ಚಿದ ಭಾಗ ಊದಿಕೊಳ್ಳುತ್ತದೆ. ನಿಗದಿತ ಚಿಕಿತ್ಸೆ ದೊರಕದೇ ಇದ್ದರೆ ತಲೆಯ ಭಾಗಕ್ಕೆ ಹೆಚ್ಚು ಕಚ್ಚಿದ್ದರೆ ಅದರ ಪರಿಣಾಮ ವ್ಯತಿರಿಕ್ತ ಆಗುತ್ತದೆ.
After a swarm of wasps attacked and stung him, a home guards personnel lost his life on the night of Wednesday November 17. The incident had happened near Ram Mandir, Kinnigoli. Santhosh (35), resident of Kateel Devaragudde, died in the said incident. When he was going in an auto rickshaw, a swarm of wasps had suddenly attacked the children of a nearby school.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 04:09 pm
HK News Desk
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm