ಬ್ರೇಕಿಂಗ್ ನ್ಯೂಸ್
19-11-21 07:19 pm Mangaluru correspondent ಕರಾವಳಿ
ಮಂಗಳೂರು, ನ.19: ವಿಧಾನ ಪರಿಷತ್ ಚುನಾವಣೆಗೆ ಸಹಕಾರಿ ಧುರೀಣ ರಾಜೇಂದ್ರ ಕುಮಾರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ರಾಜೇಂದ್ರ ಕುಮಾರ್ ವಿರುದ್ಧ ಮೊದಲ ಬಾರಿಗೆ ದನಿ ಎತ್ತಿದ್ದಾರೆ.
ಮಂಗಳೂರು ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಜನಸ್ವರಾಜ್ ಸಮಾವೇಶದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ವಿರುದ್ಧ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ನೇರ ವಾಗ್ದಾಳಿ ನಡೆಸಿದ್ದಾರೆ.
ಎಸ್ ಸಿ ಡಿ ಸಿ ಸಿ ಬ್ಯಾಂಕ್ ಆಸ್ತಿಯನ್ನು ದುರುಪಯೋಗ ಮಾಡಲಾಗುತ್ತಿದೆ. ಸಹಕಾರಿ ಬ್ಯಾಂಕುಗಳ ಹಣವನ್ನು ದುರುಪಯೋಗ ಪಡಿಸಲಾಗುತ್ತಿದೆ. ಅಕ್ರಮ ಎಸಗಲಾಗುತ್ತಿದೆ ಎಂದು ಆರೋಪಿಸಿದ ಸಚಿವ ಸೋಮಶೇಖರ್, ರಾಜೇಂದ್ರ ಕುಮಾರ್ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.

ನವೋದಯ ಟ್ರಸ್ಟ್ ಸ್ಥಾಪನೆ ಮಾಡಿರುವುದಕ್ಕೆ ಆಕ್ಷೇಪ ಇಲ್ಲ. ಆದರೆ ನವೋದಯ ಟ್ರಸ್ಟ್ ಹೆಸರಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕಿನಿಂದ ಹಣ ರವಾನೆ ಮಾಡುತ್ತಿರುವುದು ಕಾನೂನು ಬಾಹಿರ. ಈ ರೀತಿಯ ಕಾನೂನು ಬಾಹಿರ ಚಟುವಟಿಕೆಗೆ ಡಿಸಿಸಿ ಬ್ಯಾಂಕನ್ನು ಬಳಸುತ್ತಿರುವುದು ಅಕ್ಷಮ್ಯ. ಎಸ್ ಸಿ ಡಿ ಸಿ ಸಿ ಬ್ಯಾಂಕಿನಿಂದ 19 ಲಕ್ಷ ರೂಪಾಯಿ ಹಣವನ್ನು ಪ್ರತಿ ತಿಂಗಳು ನವೋದಯ ಟ್ರಸ್ಟ್ ಗೆ ಕಾನೂನು ಬಾಹಿರವಾಗಿ ನೀಡಲಾಗುತ್ತಿದೆ. ಬ್ಯಾಂಕ್ ಅಧ್ಯಕ್ಷರ ಅಕ್ರಮಕ್ಕೆ ಸಹಕಾರಿ ಇಲಾಖೆಯ ಅಧಿಕಾರಿಗಳು ಸಹಕರಿಸುತ್ತಿದ್ದಾರೆ. ಅಕ್ರಮ ಆಗುತ್ತಿದ್ದರೂ ಅಧಿಕಾರಿಗಳು ಸಹಕರಿಸುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ.
ಈ ರೀತಿ ಅಕ್ರಮಕ್ಕೆ ಸಹಕಾರ ನೀಡುತ್ತಿರುವ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುತ್ತೇನೆ. ಅಕ್ರಮವನ್ನು ಮಟ್ಟ ಹಾಕುತ್ತೇವೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ನಡೆದ ಜನಸ್ವರಾಜ್ ಕಾರ್ಯಕ್ರಮದಲ್ಲಿಯೂ ಇದೇ ಮಾತು ಆಡಿರುವ ಸಚಿವರು, ದಕ್ಷಿಣ ಕನ್ನಡ - ಉಡುಪಿ ಜಿಲ್ಲಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರನ್ನು ತೆಗೆದುಹಾಕುವ ಅಧಿಕಾರ ಸರಕಾರಕ್ಕೆ ಇದೆ ಎಂದು ಗುಡುಗಿದ್ದಾರೆ.

ರಾಜೇಂದ್ರಗೆ ಎಚ್ಚರಿಕೆ ರವಾನಿಸಿದ ಬಿಜೆಪಿ ನಾಯಕರು !
ರಾಜೇಂದ್ರ ಕುಮಾರ್ ಪರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ನಾಯಕರು ಇದ್ದರೂ, ಇದೀಗ ರಾಜೇಂದ್ರ ಕುಮಾರ್ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿ ಬೆನ್ನಲ್ಲೇ ಬಿಜೆಪಿ ಸರಕಾರದ ಸಚಿವರು ತಿರುಗಿ ಬಿದ್ದಿದ್ದಾರೆ. ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದರೆ ಪರಿಣಾಮ ನೆಟ್ಟಗಿರಲ್ಲ ಎನ್ನುವ ಸುಳಿವನ್ನು ಬಿಜೆಪಿ ನಾಯಕರು ನೀಡಿದ್ದಾರೆ. ಬಿಜೆಪಿ ಪ್ರಭಾವಿ ನಾಯಕರ ಸಹಕಾರದಲ್ಲಿ ಪಕ್ಷೇತರ ಸ್ಪರ್ಧೆಗೆ ಮುಂದಾಗಿದ್ದ ರಾಜೇಂದ್ರ ಕುಮಾರ್, ಪಕ್ಷೇತರನಾಗಿ ಸ್ಪರ್ಧಿಸಿದರೆ ಗೆಲುವು ಸುಲಭ ಇಲ್ಲ ಎನ್ನುವುದು ಮನದಟ್ಟಾಗುತ್ತಲೇ ಕಾಂಗ್ರೆಸ್ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದಾರೆ.
Mangalore Minister T Somashekhar Slams SCDCC Bank Chairman Rajendra Kumar over election. In the election meant to elect two representatives of local bodies in Dakshina Kannada constituency being held for the council next month, the Congress and the BJP were expecting to bag one seat each till a couple of days back. But the entry of veteran leader of the cooperative sector, Dr M N Rajendra Kumar, is likely to change the game altogether.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 06:08 pm
HK News Staffer
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am