ಬ್ರೇಕಿಂಗ್ ನ್ಯೂಸ್
22-11-21 12:10 pm Udupi Correspondent ಕರಾವಳಿ
ಉಡುಪಿ, ನ.22: ಕೃಷಿ ಕಾಯ್ದೆ ಒಳ್ಳೆಯದೇ ಇತ್ತು. ವಿಪಕ್ಷಗಳು ವಿರೋಧಕ್ಕಾಗಿ ವಿರೋಧ ಮಾಡಿದ್ದರಿಂದ ಸಮಸ್ಯೆ ಆಯ್ತು. ಹಾಗಂತ, ಮೋದಿ ಇದನ್ನು ಹಾಗೇ ಬಿಡೋದಿಲ್ಲ. ಮುಂದಕ್ಕೆ ಅದನ್ನು ಕಾರ್ಯರೂಪಕ್ಕೆ ತಂದೇ ತರಲಿದ್ದಾರೆ ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷಿ ಕಾಯ್ದೆಯ ಒಳ್ಳೆಯ ಅಂಶಗಳನ್ನು ಜನರಿಗೆ ತಲುಪಿಸಲು ಆಗಲಿಲ್ಲ. ಹಾಗಾಗಿ ಹಿಂದಕ್ಕೆ ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಉತ್ತಮ ನಿರ್ಧಾರ. ಎರಡು ಮಾತಿಲ್ಲ ಎಂದು ಹೇಳಿದರು.
ವಿರೋಧ ಪಕ್ಷಗಳು, ಪ್ರತಿಭಟನೆ ನಡೆಸುತ್ತಿದ್ದವರು ಈ ಬಗ್ಗೆ ಚರ್ಚೆ ನಡೆಸುವುದಕ್ಕೂ ಸಿದ್ಧರಿರಲಿಲ್ಲ. ಕುಳಿತುಕೊಳ್ಳದೆ ಚರ್ಚೆ ಆಗುತ್ತದೆಯೇ.. ಚರ್ಚೆ ಆದಾಗ ಆ ಕಡೆಯಿಂದ ಮತ್ತು ಈ ಕಡೆಯಿಂದ ಉತ್ತಮ ವಿಚಾರಗಳನ್ನು ಪಡೆದುಕೊಳ್ಳಲು ಅವಕಾಶ ಇರುತ್ತದೆ. ಮೋದಿಯವರು ತಿದ್ದುಪಡಿ ಮಾಡುವುದಕ್ಕೆ ಒಪ್ಪಿಕೊಂಡಿದ್ದರು. ಆದರೆ ಇವರು ಯಾವುದಕ್ಕೂ ಒಪ್ಪಲಿಲ್ಲ.
ಹಿಂದೆ ಸಿಎಎ ವಿಚಾರದಲ್ಲಿಯೂ ಇದೇ ಆಗಿತ್ತು. ಚರ್ಚೆಗೆ ಕರೆದರೆ, ಅದನ್ನು ಮಾಡಲು ವಿಪಕ್ಷಗಳು ತಯಾರಿಲ್ಲ. ಭಾರತದಲ್ಲಿ ವ್ಯವಸ್ಥೆ ಹೀಗೆ ಆಗಿರೋದಕ್ಕೆ ಇದೂ ಕಾರಣ. ಮೋದಿ ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ ಅಂದರೆ ಎರಡು ಹೆಜ್ಜೆ ಮುಂದಿಟ್ಟಿದ್ದಾರೆ ಎಂದೇ ಅರ್ಥ. ಮುಂದಕ್ಕೆ ಬೇರೆ ರೂಪದಲ್ಲಿ ಈ ಕಾಯ್ದೆ ಜಾರಿಗೆ ಬರಲಿದೆ. ಈ ರೀತಿಯ ನಡೆಯಿಂದಾಗಿ ನೈಜ ರೈತರಿಗೆ, ಸಣ್ಣ ಹಿಡುವಳಿದಾರರಿಗೆ ನಷ್ಟವಾಗಿದೆ. ಈ ವಿಚಾರ ಜನರಿಗೆ ತಲುಪುತ್ತದೆ. ತಲುಪಬೇಕು. ಅದಕ್ಕಾಗಿಯೇ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಭಾಕರ ಭಟ್ ಹೇಳಿದರು.
RSS leader Kalladka Prabhakar Bhat on Sunday November 21 reacted to the central government's decision to repeal the controversial farm laws and said that the laws will be reintroduced with minor changes.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 04:09 pm
HK News Desk
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm