ಬ್ರೇಕಿಂಗ್ ನ್ಯೂಸ್
22-11-21 03:05 pm Mangaluru correspondent ಕರಾವಳಿ
ಮಂಗಳೂರು, ನ.22: ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಉಜಿರೆ ಎಸ್ ಡಿಎಂ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಎಂ.ಪಿ. ಶ್ರೀನಾಥ್ ಆಯ್ಕೆಯಾಗಿದ್ದಾರೆ.
ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಪರಿಷತ್ ಘಟಕಕ್ಕೆ ಭಾನುವಾರ ಚುನಾವಣೆ ನಡೆದಿದ್ದು, ಆಯಾ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರ ಆಯ್ಕೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 44.8 ಶೇಕಡಾ ಮತದಾನ ಆಗಿತ್ತು. ಶ್ರೀನಾಥ್ ಪರವಾಗಿ 1488 ಮತಗಳು ಬಿದ್ದರೆ, ಪ್ರತಿಸ್ಪರ್ಧಿ ಮಂಗಳೂರು ಏರ್ಪೋರ್ಟ್ ಮಾಜಿ ನಿರ್ದೇಶಕ ಎಂ.ಆರ್. ವಾಸುದೇವ ಪರವಾಗಿ 534 ಮತಗಳು ಬಿದ್ದವು. ಶ್ರೀನಾಥ್ ನಿರಾಯಾಸವಾಗಿ ಗೆಲುವು ಸಾಧಿಸಿದ್ದಾರೆ.
ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ 26 ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿರುವ ಎಂ.ಪಿ.ಶ್ರೀನಾಥ್ ಈಗ ಸಹಾಯಕ ಪ್ರಾಧ್ಯಾಪಕ ಹುದ್ದೆಯಲ್ಲಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಪರ ಚಟುವಟಿಕೆ, ಕನ್ನಡ ಸಾಹಿತ್ಯ ಪರಿಷತ್ ಕೆಲಸದಲ್ಲಿ ನಿರತರಾಗಿದ್ದಾರೆ.
ಉಡುಪಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ನೀಲಾವರ ಸುರೇಂದ್ರ ಅಡಿಗ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ತೀವ್ರ ಸ್ಪರ್ಧೆ ಇದ್ದ ಚುನಾವಣೆಯಲ್ಲಿ ಸುರೇಂದ್ರ ಅಡಿಗ 432 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಸುಬ್ರಹ್ಮಣ್ಯ ಬಸ್ರಿ 400 ಮತಗಳನ್ನು ಪಡೆದಿದ್ದರು.
ಮೂರು ವರ್ಷಗಳಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹುದ್ದೆಯ ಅವಧಿಯನ್ನು 5 ವರ್ಷಗಳಿಗೆ ಮಾಡಲಾಗಿದೆ. 5 ವರ್ಷ ಅವಧಿ ಆದಬಳಿಕ ಮೊದಲ ಬಾರಿಗೆ ಸಾಹಿತ್ಯ ಪರಿಷತ್ ಹುದ್ದೆಗಳಿಗೆ ಚುನಾವಣೆ ನಡೆಸಲಾಗಿದ್ದು, ರಾಜ್ಯಾದ್ಯಂತ ತೀವ್ರ ತುರುಸಿನ ಸ್ಪರ್ಧೆ ನಡೆದಿತ್ತು.
Assistant professor and noted writer, Dr M P Srinath, was elected as the president of Dakshina Kannada (DK) district Kannada Sahitya Parishad. Voting was held in ten centres across Dakshina Kannada district between 8 am and 4 pm on Sunday in which 44.8 percent members voted.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm