ಬ್ರೇಕಿಂಗ್ ನ್ಯೂಸ್
22-11-21 10:05 pm Mangaluru Correspondent ಕರಾವಳಿ
ಮಂಗಳೂರು, ನ.22: ಬಜ್ಪೆ ಠಾಣೆಯ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ಸಾರ್ವಜನಿಕರ ಜೊತೆ ದುರ್ವರ್ತನೆ ತೋರುತ್ತಿದ್ದು ವರ್ಗಾವಣೆ ಮಾಡಬೇಕೆಂದು ಠಾಣೆ ವ್ಯಾಪ್ತಿಯ ನಾಲ್ಕು ಗ್ರಾಮ ಪಂಚಾಯಿತಿಗಳಲ್ಲಿ ನಿರ್ಣಯ ಅಂಗೀಕಾರವಾಗಿದ್ದು ಹಳೇ ಸುದ್ದಿ. ಈ ಪೈಕಿ ಮೂರು ಗ್ರಾಮ ಪಂಚಾಯಿತಿ ಆಡಳಿತಗಳು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಸಚಿವಾಲಯ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಓ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ದೂರು ನೀಡಿವೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ, ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿ ಪತ್ರ ಬರೆದಿದ್ದಾರೆ. ಗೃಹ ಇಲಾಖೆ ಮತ್ತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವರು ದೂರಿನ ಹಿನ್ನೆಲೆ ಮಂಗಳೂರು ಪೊಲೀಸ್ ಆಯುಕ್ತರಲ್ಲಿ ವರದಿ ಕೇಳಿದ್ದಾರೆಯೇ ಎನ್ನುವುದು ಗೊತ್ತಾಗಿಲ್ಲ. ಆದರೆ ಒಂದು ಪೊಲೀಸ್ ಠಾಣೆಯ ಠಾಣಾಧಿಕಾರಿ ವಿರುದ್ಧ ಆಯಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳು ಗ್ರಾಮ ಸಭೆಯಲ್ಲಿ ನಿರ್ಣಯ ಸ್ವೀಕರಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲು.


ಈ ಬಗ್ಗೆ ಹೆಡ್ ಲೈನ್ ಕರ್ನಾಟಕಕ್ಕೆ (Headline Karnataka) ನಾಲ್ಕು ಗ್ರಾಮ ಪಂಚಾಯತ್ ಗಳು ನಿರ್ಣಯ ಸ್ವೀಕರಿಸಿದ ಪ್ರತಿ ಲಭ್ಯವಾಗಿದೆ. ಪಡುಪೆರಾರಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.23ರಂದು ನಡೆದ ಗ್ರಾಮಸಭೆಯಲ್ಲಿ ಬಜ್ಪೆ ಠಾಣಾಧಿಕಾರಿ ಸಂದೇಶ್ ಪಿ.ಜಿ. ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ವರ್ಗಾವಣೆ ಮಾಡಬೇಕು ಎನ್ನುವ ಬಗ್ಗೆ ಸಾರ್ವಜನಿಕರ ಅಭಿಪ್ರಾಯದಂತೆ ನಿರ್ಣಯ ಸ್ವೀಕರಿಸಲಾಗಿದೆ. ಸಭೆಯ ನಡವಳಿ ಪುಸ್ತಕದಲ್ಲಿ ರೈತ ಸಂಘದ ಮುಖಂಡ ಕಿಟ್ಟಣ್ಣ ರೈಯವರಿಗೆ ಗುರುಪುರದಲ್ಲಿ ಪಾರ್ಕಿಂಗ್ ವಿಷಯಕ್ಕೆ ಅವಮಾನಿಸಿರುವುದು, ಕೈಕಂಬದ ಮೆಗಾ ಪ್ಲಾಜಾ ಹಾಲ್ ನ ಸಾಹುಲ್ ಎಂಬವರಿಗೆ ಪಾರ್ಕಿಂಗ್ ವಿಚಾರದಲ್ಲಿ ಸಾರ್ವಜನಿಕವಾಗಿ ನಿಂದಿಸಿ, ಲಾಠಿಯಲ್ಲಿ ಹೊಡೆದಿರುವುದು, ಕೈಕಂಬದ ಪೊಂಪೈ ಸ್ಟೋರ್ ಮಾಲಕರನ್ನು ಮೈಗೆ ಕೈಹಾಕಿ ಗದರಿಸಿರುವುದು, ಸಾಮಾಜಿಕ ಕಾರ್ಯಕರ್ತ ರೋಶನ್ ಲೋಬೋ ಎಂಬವರಿಗೆ ಠಾಣೆಯಲ್ಲಿ ಅವಮಾನಿಸಿ, ಬೆದರಿಕೆ ಹಾಕಿರುವ ಬಗ್ಗೆ ಉಲ್ಲೇಖಿಸಲಾಗಿದೆ.

ಸೆ.24ರಂದು ಕಂದಾವರ ಗ್ರಾಮ ಪಂಚಾಯತಿಯ ಕಂದಾವರ, ಕೊಳಂಬೆ ಮತ್ತು ಅದ್ಯಪಾಡಿ ಗ್ರಾಮಗಳ ವ್ಯಾಪ್ತಿಯ ಗ್ರಾಮಸಭೆ ಕಿನ್ನಿಕಂಬ್ಳದಲ್ಲಿ ನಡೆದಿತ್ತು. ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜಲಕ್ಷ್ಮಿ ನೋಡಲ್ ಅಧಿಕಾರಿಯಾಗಿದ್ದರು. ಸಭೆಯಲ್ಲಿ ಬಜ್ಪೆ ಠಾಣೆಯ ನಿರೀಕ್ಷಕರು ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುತ್ತಿದ್ದು ಜನಸಾಮಾನ್ಯರ ದೂರುಗಳನ್ನು ತೆಗೆದುಕೊಳ್ಳುವುದಿಲ್ಲ. ಇದು ಜನರಿಗೆ ಆಗುವ ಅನ್ಯಾಯವಾಗಿದ್ದು, ಇಂತಹ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕೆಂದು ಮೇಲಧಿಕಾರಿಗಳಿಗೆ ಬರೆಯಲು ನಿರ್ಣಯಿಸಲಾಗಿತ್ತು.

ಸೆ.30ರಂದು ಕುಪ್ಪೆಪದವು ಚರ್ಚ್ ಹಾಲ್ ನಲ್ಲಿ ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸಭೆ ನಡೆದಿತ್ತು. ಸಭೆಯಲ್ಲಿ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳು ಸೇರಿದಂತೆ 119 ಜನರು ಭಾಗವಹಿಸಿದ್ದರು. ಸಭೆಯಲ್ಲಿ ಬಜ್ಪೆ ಠಾಣಾಧಿಕಾರಿಯ ದುರ್ವರ್ತನೆ ಬಗ್ಗೆ ಚರ್ಚೆ ನಡೆದು ವರ್ಗಾವಣೆ ಮಾಡುವ ಬಗ್ಗೆ ನಿರ್ಣಯ ಸ್ವೀಕರಿಸಲಾಗಿತ್ತು. ಸಾರ್ವಜನಿಕರ ದೂರುಗಳಿಗೆ ಸ್ಪಂದನೆ ನೀಡದೆ, ಕೆಟ್ಟ ರೀತಿಯಲ್ಲಿ ವರ್ತಿಸುತ್ತಾರೆ ಎಂದು ನಡವಳಿ ಪುಸ್ತಕದಲ್ಲಿ ಉಲ್ಲೇಖ ಮಾಡಲಾಗಿದೆ.

ಅ.30ರಂದು ಗುರುಪುರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಯಶವಂತ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಗ್ರಾಮಸಭೆ ನಡೆದಿತ್ತು. ಸಭೆಯಲ್ಲಿ ಬಜ್ಪೆ ಠಾಣಾಧಿಕಾರಿ ಸಂದೇಶ್ ಪಿ.ಜಿ. ಸಾರ್ವಜನಿಕ ದೂರುಗಳಿಗೆ ಸ್ಪಂದಿಸದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜನಸಾಮಾನ್ಯರಿಗೆ ಎದೆಯ ಮೇಲೆ ಕಾಲಿಡುತ್ತೇನೆಂದು ಗದರಿಸುತ್ತಿದ್ದು ರೌಡಿಯಂತೆ ವರ್ತಿಸುತ್ತಿದ್ದಾರೆ. ಸಾಮಾಜಿಕ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ಹಾಕುತ್ತೇನೆಂದು ಬೆದರಿಸುತ್ತಾರೆ. ಗ್ರಾಮಸ್ಥರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಗ್ರಾಮಸಭೆಯ ಕರ್ತವ್ಯ ಆಗಿರುವುದರಿಂದ ಠಾಣಾಧಿಕಾರಿ ವಿರುದ್ಧ ಕಾನೂನು ಕ್ರಮಕ್ಕೆ ಬರೆಯಲು ನಿರ್ಣಯ ಮಾಡಲಾಗಿತ್ತು.
ಈ ಪೈಕಿ ಕಂದಾವರ ಹೊರತುಪಡಿಸಿ ಮೂರು ಗ್ರಾ.ಪಂ.ನಿಂದ ವಿವಿಧ ಇಲಾಖೆಗಳಿಗೆ ಪತ್ರ ಬರೆದು ಗ್ರಾಮಸಭೆಯ ನಿರ್ಣಯದ ಬಗ್ಗೆ ದೂರು ನೀಡಲಾಗಿತ್ತು. ದುರ್ವರ್ತನೆ ತೋರುವ ಠಾಣಾಧಿಕಾರಿಯನ್ನು ಬಜ್ಪೆಯಿಂದ ವರ್ಗಾವಣೆ ಮಾಡಬೇಕೆಂದು ಪತ್ರಗಳಲ್ಲಿ ಒತ್ತಾಯಿಸಲಾಗಿದೆ.
Mangalore Four Gram Panchayats have passed a resolution against Bajpe Inspector Sandesh PG stating to transfer him as he has been troubling and threatening the general public. The attached letter has been sent to the DGP and State Secretary of Karnataka.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm