ಬ್ರೇಕಿಂಗ್ ನ್ಯೂಸ್
24-11-21 09:33 am HK news Desk ಕರಾವಳಿ
ಉಡುಪಿ, ನ. 24: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಒಂದಕ್ಕೆ ಬಂಪರ್ ಲಾಟರಿ ಸಿಕ್ಕಂತಾಗಿದೆ. ಅದರಲ್ಲಿದ್ದ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದ್ದು ಆ ಒಂದು ಮೀನು ಬರೋಬ್ಬರಿ ಒಂದು ಲಕ್ಷದ ಎಂಬತ್ತು ಸಾವಿರ ರೂಪಾಯಿಗೆ ಮಾರಾಟವಾಗಿ ಮೀನುಗಾರರನ್ನೇ ಹುಬ್ಬೇರಿಸಿದೆ.
ಮಲ್ಪೆ ಕಡಲ ಕಿನಾರೆಯಿಂದ ಸೋಮವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಶಾನ್ ರಾಜ್ ತೊಟ್ಟಂ ಎಂಬವರ ಬಲರಾಮ್ ಎಂಬ ಹೆಸರಿನ ಬೋಟ್ಗೆ ಅದೃಷ್ಟ ಖುಲಾಯಿಸಿತ್ತು. ಮೀನುಗಾರರು ಬೀಸಿದ ಬಲೆಗೆ 18 ಕೆಜಿ ತೂಕದ ಅಪರೂಪದ ಗೋಳಿ ಅನ್ನುವ ಹೆಸರಿನ ಮೀನು ಲಭ್ಯವಾಗಿದ್ದು, ಈ ಮೀನು ಬರೋಬ್ಬರಿ 1,80,200 ರೂಪಾಯಿಗೆ ಮಾರಟವಾಗಿದೆ. ಮಲ್ಪೆ ಬಂದರಿನಲ್ಲಿ ಮೀನಿನ ಹರಾಜು ಪ್ರಕ್ರಿಯೆ ನಡೆದಿದ್ದು, ನೂರಾರು ಮಂದಿಯ ಕುತೂಹಲಕ್ಕೆ ಸಾಕ್ಷಿಯಾಗಿದೆ.
ಪ್ರತಿ ಕೆಜಿಗೆ 9060 ರೂ.ನಂತೆ ಗೋಳಿ ಮೀನು ಮಾರಾಟವಾಗಿದೆ. ಇದು ಅಪರೂಪದ ಮೀನಾಗಿದ್ದು, ಅತೀ ಹೆಚ್ಚಾಗಿ ಔಷಧಿ ತಯಾರಿಕೆಗೆ ಬಳಸಲಾಗುತ್ತದೆ. ಮಧುಮೇಹ, ಅಸ್ತಮಾದಂತಹ ಖಾಯಿಲೆಗಳ ಔಷಧಿಗೆ ಈ ಮೀನನ್ನು ಬಳಸಲಾಗುತ್ತದೆ. ಈ ಮೀನು ಕಲ್ಲು ಬಂಡೆಗಳ ಅಡಿಯಲ್ಲಿ ವಾಸವಾಗಿದ್ದು ಮೀನುಗಾರರ ಬಲೆಗೆ ಬೀಳೋದು ಅಪರೂಪ ಎನ್ನಲಾಗಿದೆ.
ಮಲ್ಪೆ ಬಂದರಿನಿಂದ ಹರಾಜಿನಲ್ಲಿ ತೆಗೆದುಕೊಂಡ ಈ ಮೀನನ್ನು ಮುಂಬೈ ಮೀನುಗಾರಿಕಾ ಬಂದರಿನಲ್ಲಿ ಮಾರಾಟ ಮಾಡಲಾಗುತ್ತದೆ. ಮುಂಬೈಯಲ್ಲಿ ಈ ಮೀನಿನ ದರ ಪ್ರತೀ ಕೆಜಿಗೆ ಹದಿನೈದು ಸಾವಿರದಿಂದ ಹದಿನೆಂಟು ಸಾವಿರದ ವರೆಗೂ ಹೋಗಲಿದೆ ಎಂದು ಮೀನುಗಾರರು ಹೇಳುತ್ತಾರೆ. ಮುಂಬೈನಿಂದ ನೇರ ಔಷಧ ಕಂಪೆನಿಗಳೇ ಈ ಮೀನನ್ನು ಖರೀದಿ ಮಾಡಲಿದ್ದು ಭಾರೀ ಬೆಲೆ ಸಿಗಲಿದೆಯಂತೆ.
ಉಡುಪಿಯ ಮಲ್ಪೆಯಲ್ಲಿ ಈ ರೀತಿಯ ಮೀನು ದೊರಕಿರೋದು ಇದೇ ಮೊದಲು. ಈ ಹಿಂದೆ ಗೋಳಿ ಜಾತಿಯ ಸಣ್ಣ ಮೀನುಗಳು ಬಲೆಗೆ ಬಿದ್ದಿದ್ದು ಪ್ರಥಮ ಬಾರಿಗೆ ಭಾರೀ ತೂಕದ ಮೀನು ಲಭ್ಯವಾಗಿದೆ. ಮಲ್ಪೆ ಬಂದರಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ದರಕ್ಕೆ ಮೀನು ಮಾರಾಟವಾಗಿದೆ.
Udupi Maple Fishermen sells fish 18 kilo fish for 1.18 lakhs. The fish was auctioned by Mumbai fishermen for 15 thousand per kilo ane later it was sold for 1.18 lakhs.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm