ಬ್ರೇಕಿಂಗ್ ನ್ಯೂಸ್
24-11-21 09:33 am HK news Desk ಕರಾವಳಿ
ಉಡುಪಿ, ನ. 24: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಒಂದಕ್ಕೆ ಬಂಪರ್ ಲಾಟರಿ ಸಿಕ್ಕಂತಾಗಿದೆ. ಅದರಲ್ಲಿದ್ದ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದ್ದು ಆ ಒಂದು ಮೀನು ಬರೋಬ್ಬರಿ ಒಂದು ಲಕ್ಷದ ಎಂಬತ್ತು ಸಾವಿರ ರೂಪಾಯಿಗೆ ಮಾರಾಟವಾಗಿ ಮೀನುಗಾರರನ್ನೇ ಹುಬ್ಬೇರಿಸಿದೆ.
ಮಲ್ಪೆ ಕಡಲ ಕಿನಾರೆಯಿಂದ ಸೋಮವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಶಾನ್ ರಾಜ್ ತೊಟ್ಟಂ ಎಂಬವರ ಬಲರಾಮ್ ಎಂಬ ಹೆಸರಿನ ಬೋಟ್ಗೆ ಅದೃಷ್ಟ ಖುಲಾಯಿಸಿತ್ತು. ಮೀನುಗಾರರು ಬೀಸಿದ ಬಲೆಗೆ 18 ಕೆಜಿ ತೂಕದ ಅಪರೂಪದ ಗೋಳಿ ಅನ್ನುವ ಹೆಸರಿನ ಮೀನು ಲಭ್ಯವಾಗಿದ್ದು, ಈ ಮೀನು ಬರೋಬ್ಬರಿ 1,80,200 ರೂಪಾಯಿಗೆ ಮಾರಟವಾಗಿದೆ. ಮಲ್ಪೆ ಬಂದರಿನಲ್ಲಿ ಮೀನಿನ ಹರಾಜು ಪ್ರಕ್ರಿಯೆ ನಡೆದಿದ್ದು, ನೂರಾರು ಮಂದಿಯ ಕುತೂಹಲಕ್ಕೆ ಸಾಕ್ಷಿಯಾಗಿದೆ.
ಪ್ರತಿ ಕೆಜಿಗೆ 9060 ರೂ.ನಂತೆ ಗೋಳಿ ಮೀನು ಮಾರಾಟವಾಗಿದೆ. ಇದು ಅಪರೂಪದ ಮೀನಾಗಿದ್ದು, ಅತೀ ಹೆಚ್ಚಾಗಿ ಔಷಧಿ ತಯಾರಿಕೆಗೆ ಬಳಸಲಾಗುತ್ತದೆ. ಮಧುಮೇಹ, ಅಸ್ತಮಾದಂತಹ ಖಾಯಿಲೆಗಳ ಔಷಧಿಗೆ ಈ ಮೀನನ್ನು ಬಳಸಲಾಗುತ್ತದೆ. ಈ ಮೀನು ಕಲ್ಲು ಬಂಡೆಗಳ ಅಡಿಯಲ್ಲಿ ವಾಸವಾಗಿದ್ದು ಮೀನುಗಾರರ ಬಲೆಗೆ ಬೀಳೋದು ಅಪರೂಪ ಎನ್ನಲಾಗಿದೆ.
ಮಲ್ಪೆ ಬಂದರಿನಿಂದ ಹರಾಜಿನಲ್ಲಿ ತೆಗೆದುಕೊಂಡ ಈ ಮೀನನ್ನು ಮುಂಬೈ ಮೀನುಗಾರಿಕಾ ಬಂದರಿನಲ್ಲಿ ಮಾರಾಟ ಮಾಡಲಾಗುತ್ತದೆ. ಮುಂಬೈಯಲ್ಲಿ ಈ ಮೀನಿನ ದರ ಪ್ರತೀ ಕೆಜಿಗೆ ಹದಿನೈದು ಸಾವಿರದಿಂದ ಹದಿನೆಂಟು ಸಾವಿರದ ವರೆಗೂ ಹೋಗಲಿದೆ ಎಂದು ಮೀನುಗಾರರು ಹೇಳುತ್ತಾರೆ. ಮುಂಬೈನಿಂದ ನೇರ ಔಷಧ ಕಂಪೆನಿಗಳೇ ಈ ಮೀನನ್ನು ಖರೀದಿ ಮಾಡಲಿದ್ದು ಭಾರೀ ಬೆಲೆ ಸಿಗಲಿದೆಯಂತೆ.
ಉಡುಪಿಯ ಮಲ್ಪೆಯಲ್ಲಿ ಈ ರೀತಿಯ ಮೀನು ದೊರಕಿರೋದು ಇದೇ ಮೊದಲು. ಈ ಹಿಂದೆ ಗೋಳಿ ಜಾತಿಯ ಸಣ್ಣ ಮೀನುಗಳು ಬಲೆಗೆ ಬಿದ್ದಿದ್ದು ಪ್ರಥಮ ಬಾರಿಗೆ ಭಾರೀ ತೂಕದ ಮೀನು ಲಭ್ಯವಾಗಿದೆ. ಮಲ್ಪೆ ಬಂದರಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ದರಕ್ಕೆ ಮೀನು ಮಾರಾಟವಾಗಿದೆ.
Udupi Maple Fishermen sells fish 18 kilo fish for 1.18 lakhs. The fish was auctioned by Mumbai fishermen for 15 thousand per kilo ane later it was sold for 1.18 lakhs.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm