ಬ್ರೇಕಿಂಗ್ ನ್ಯೂಸ್
24-11-21 10:14 am HK news Desk ಕರಾವಳಿ
ಮಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿರುವ ಕೆ.ಎಸ್.ಲಿಂಗೇಗೌಡ ಎಂಬ ಅಧಿಕಾರಿಯ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಳೆದ 30 ವರ್ಷಗಳಿಂದ ಝಂಡಾ ಹೂಡಿದ್ದ ಭ್ರಷ್ಟ ಅಧಿಕಾರಿ ಲಿಂಗೇಗೌಡ, ಮಂಗಳೂರು ಸೇರಿ ವಿವಿಧ ಕಡೆ ಅಪಾರ ಆಸ್ತಿ ಗಳಿಸಿದ್ದಾನೆಂಬ ಆರೋಪ ಕೇಳಿಬಂದಿತ್ತು. ಜೂನಿಯರ್ ಇಂಜಿನಿಯರ್ ಆಗಿ ಮಂಗಳೂರು ಪಾಲಿಕೆಯಲ್ಲಿ ಕರ್ತವ್ಯಕ್ಕೆ ಸೇರಿದ್ದ ಲಿಂಗೇಗೌಡ, ಬಳಿಕ ಎಇಇ ಆಗಿ ಶಿವಮೊಗ್ಗಕ್ಕೆ ವರ್ಗಾವಣೆ ಆಗಿದ್ದ. ಆದರೆ ಎರಡು ವರ್ಷದಲ್ಲಿ ಮತ್ತೆ ಮಂಗಳೂರು ಮಹಾನಗರ ಪಾಲಿಕೆಗೇ ಬಂದು ಸೇರಿದ್ದ ಲಿಂಗೇಗೌಡ, ಆನಂತರ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ಭಡ್ತಿ ಪಡೆದಿದ್ದ.


ಕಳೆದ ಎರಡು ವರ್ಷಗಳ ಹಿಂದೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ದೊಡ್ಡ ಹುದ್ದೆ ಪಡೆದಿದ್ದ ಲಿಂಗೇಗೌಡ ನೇತೃತ್ವದಲ್ಲಿ ಸಾವಿರಾರು ಕೋಟಿ ರೂಪಾಯಿ ಯೋಜನೆಯ ಸ್ಮಾರ್ಟ್ ಸಿಟಿಯಲ್ಲಿ ಎಷ್ಟು ಅವ್ಯವಹಾರ ಆಗಿದೆಯೋ ಲೆಕ್ಕ ಇಲ್ಲ.
ಮಂಗಳೂರಿನ ಉರ್ವಾ ಮಾರ್ಕೆಟ್ ಬಳಿ ಸ್ವಂತ ಜಾಗ ಖರೀದಿಸಿ, ಹತ್ತು ವರ್ಷಗಳ ಹಿಂದೆಯೇ ಬಂಗಲೆ ಮಾದರಿ ಮನೆ ಕಟ್ಟಿಸಿದ್ದ ಲಿಂಗೇಗೌಡ ಮಂಗಳೂರು ಸೇರಿ ವಿವಿಧ ಕಡೆಗಳಲ್ಲಿ ಆಸ್ತಿ ಹೊಂದಿದ್ದಾನೆ. ಮೂಲತಃ ಹಾವೇರಿ ಜಿಲ್ಲೆಯ ಮೂಲದ ವ್ಯಕ್ತಿಯಾಗಿದ್ದು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಝಂಡಾ ಹೂಡಿ ಅಪಾರ ಆಸ್ತಿ ಮಾಡಿಕೊಂಡ ಕೆಲವು ಭ್ರಷ್ಟ ಅಧಿಕಾರಿಗಳಲ್ಲಿ ಈತನೂ ಒಬ್ಬ.
ಕೆ.ಎಸ್.ಲಿಂಗೇಗೌಡ ವಿರುದ್ಧ 15 ವರ್ಷಗಳ ಹಿಂದೆಯೇ ಮಂಗಳೂರು ಲೋಕಾಯುಕ್ತದಲ್ಲಿ ಕೇಸು ದಾಖಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಈತನ ಮನೆಗೆ ದಾಳಿ ನಡೆಸಿ, ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದರು.
ಚಾಮರಾಜನಗರ, ಮೈಸೂರು, ಹಾಸನ ವಿಭಾಗದ ಎಸಿಬಿ ಅಧಿಕಾರಿಗಳು, ಇಬ್ಬರು ಡಿವೈಎಸ್ಪಿ ಸೇರಿ 25 ಕ್ಕೂ ಹೆಚ್ಚು ಮಂದಿ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾನಗರ ಪಾಲಿಕೆಯ ಕಚೇರಿ ಮತ್ತು ಉರ್ವಾ ಬಳಿಯ ಮನೆಯಲ್ಲಿ ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ.
Acb officers raid on Mangalore Smart City engineer Lingegowda residence, seize crores wealth. ACB officers have raided several places of Karnataka raiding Govt servant houses where crores of assets have been seized.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm