ಬ್ರೇಕಿಂಗ್ ನ್ಯೂಸ್
13-09-20 02:51 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 13: ಮಾಜಿ ಸಚಿವ ಜಮೀರ್ ಅಹ್ಮದ್ ಬಗ್ಗೆ ಡ್ರಗ್ಸ್ ಪ್ರಕರಣದಲ್ಲಿ ಕೈವಾಡ ಇದೆಯೆಂದು ಬರ್ತಿರೋದು ಮೀಡಿಯಾದಲ್ಲಿ ಮಾತ್ರ. ರಾಜಕೀಯ ಪ್ರೇರಿತ ಕಾರಣದಿಂದ ಇಂಥ ಸುದ್ದಿ ಹರಡಲಾಗುತ್ತಿದೆ. ಅದಕ್ಕೆ ಬಿಜೆಪಿಯವರು ಬೇಜವಾಬ್ದಾರಿ, ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಲೀಂ ಅಹ್ಮದ್, ಡ್ರಗ್ಸ್ ವಿಷಯದಲ್ಲಿ ಯಾರೇ ತಪ್ಪು ಮಾಡಿದ್ರು ಕಾಂಗ್ರೆಸ್ ಪಕ್ಷ ರಕ್ಷಿಸುವ ಪ್ರಶ್ನೆಯೇ ಬರಲ್ಲ. ಎಲ್ಲರಿಗೂ ಕಾನೂನು ಒಂದೇ ಆಗಿದ್ದು ತಪ್ಪು ಮಾಡಿದವರನ್ನು ಶಿಕ್ಷಿಸಲಿ. ಹಾಗೆಂದು ಬಿಜೆಪಿಯವರು ಬೇಜವಾಬ್ದಾರಿ ಹೇಳಿಕೆ ನೀಡೋದು ಸರಿಯಲ್ಲ. ಬಿಜೆಪಿಯ ಎಂಎಲ್ಸಿ ರವಿಕುಮಾರ್ ಒಬ್ಬ ಮುಠ್ಠಾಳ, ಬೇಜವಾಬ್ದಾರಿಯಾಗಿ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಯಲ್ಲಿ ಸರಕಾರ ಎಡವುತ್ತಿದೆ. ತನಿಖೆಯ ದಿಕ್ಕನ್ನು ನೋಡಿದರೆ ರಾಜಕೀಯ ಪ್ರೇರಿತವಾಗಿ ಸಾಗುತ್ತಿರುವಂತೆ ತೋರುತ್ತಿದೆ ಎಂದು ಹೇಳಿದರು.

ಇನ್ನು ಕುಮಾರಸ್ವಾಮಿ ಜೊತೆ ಜಮೀರ್ ಶ್ರೀಲಂಕಾಗೆ ಹೋಗಿದ್ದು ನಾಲ್ಕು ವರ್ಷ ಹಿಂದಿನ ಕತೆ. ಅಲ್ಲಿ ಏನೇನು ಆಗಿದೆ ಅನ್ನೋದ್ರ ಬಗ್ಗೆ ಜಮೀರ್ ಅವರೇ ಉತ್ತರಿಸಬೇಕು. ಆದರೆ, ಕುಮಾರಸ್ವಾಮಿ ತನ್ನ ಸರಕಾರ ಬೀಳಲು ಡ್ರಗ್ಸ್ ಮಾಫಿಯಾ ಕಾರಣ ಎಂದಿದ್ದರು. ಈ ಹೇಳಿಕೆ ಬಗ್ಗೆ ತನಿಖೆ ಆಗಬೇಕು, ಸತ್ಯ ಹೊರಬರಲಿ ಎಂದರು.
ಹಿರಿಯರನ್ನು ಹೊರಗಿಟ್ಟಿದ್ದಲ್ಲ, ಪುನಾರಚನೆ ಅಷ್ಟೇ
ಇನ್ನು ಎಐಸಿಸಿಯಿಂದ ಹಿರಿಯ ನಾಯಕರನ್ನು ಹೊರಗಿಟ್ಟಿರುವ ಪ್ರಶ್ನೆಗೆ ಉತ್ತರಿಸಿದ ಸಲೀಂ ಅಹ್ಮದ್, ಎಐಸಿಸಿ ಪುನಾರಚನೆ ಅನ್ನುವುದು ಸಾಮಾನ್ಯ ಪ್ರಕ್ರಿಯೆ. ಮೂರು ವರ್ಷಗಳಿಂದ ಪುನಾರಚನೆ ಪ್ರಕ್ರಿಯೆ ಆಗಿರಲಿಲ್ಲ. ಈಗ ಪುನಾರಚನೆ ಆಗಿರುವುದನ್ನು ಬೇರೆ ದೃಷ್ಟಿಯಿಂದ ನೋಡುವುದು ಬೇಡ. ಅದರಲ್ಲಿ ಹೊಸಬರಿಗೆ ಅವಕಾಶ ನೀಡಲಾಗಿದೆ, ಜೊತೆಗೆ ಹಿರಿಯರನ್ನು ಉಳಿಸಿಕೊಳ್ಳಲಾಗಿದೆ. ಇನ್ನು ಕೆಲವು ಹಿರಿಯರಿಗೆ ಬೇರೆಯದ್ದೇ ಜವಾಬ್ದಾರಿ ನೀಡಿ ಪಕ್ಷ ಸಂಘಟನೆಗೆ ಬಳಸಿಕೊಳ್ಳಲಿದೆ ಎಂದು ಹೇಳಿದರು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm