ಬ್ರೇಕಿಂಗ್ ನ್ಯೂಸ್
13-09-20 06:52 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 13: ಮುಸ್ಲಿಂ ಸಮುದಾಯದ ನ್ಯಾಯೋಚಿತ ಬೇಡಿಕೆ ಮತ್ತು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲಿದ್ದೇನೆ. ಸಮುದಾಯದ ಅಭಿವೃದ್ಧಿಗೆ ನಮ್ಮ ಪಕ್ಷವೂ ಬದ್ಧವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.
ಮಂಗಳೂರಿನ ಉಳ್ಳಾಲ ದರ್ಗಾದಲ್ಲಿ ಅವರು ಝಿಯಾರತ್ ನಡೆಸಿದ ಬಳಿಕ ದರ್ಗಾ ಆಡಳಿತ ಸಮಿತಿಯ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಉಳ್ಳಾಲ ದರ್ಗಾ ಭೇಟಿ ನೀಡಿದ ಸಲೀಂ ಅಹ್ಮದ್ ಅವರನ್ನು ದರ್ಗಾ ಸಮಿತಿಯ ವತಿಯಿಂದ ಉಳ್ಳಾಲ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಸನ್ಮಾನಿಸಿ, ಸಮುದಾಯದ ಹಿತಕ್ಕಾಗಿ ಶ್ರಮಿಸುವಂತೆ ವಿನಂತಿಸಿದರು.
ಸಲೀಂ ಅಹ್ಮದ್ ಜೊತೆಯಲ್ಲಿ ಆಗಮಿಸಿದ್ದ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ನಾರಾಯಣ ಸ್ವಾಮಿಯವರನ್ನೂ ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಈ ಸಂದರ್ಭದಲ್ಲಿ ಸನ್ಮಾನಿಸಿದರು. ಮಾಜಿ ಸಚಿವ, ಶಾಸಕ ಯು.ಟಿ.ಖಾದರ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ.ಸಹೀದ್, ಕಾಂಗ್ರೆಸ್ ನಾಯಕ ಬಲರಾಜ್ ಜೊತೆಗಿದ್ದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ದರ್ಗಾ ಸಮಿತಿಯ ಫಾರೂಕ್ ಉಳ್ಳಾಲ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ಸಲೀಂ ಅಹ್ಮದ್ ಅವರು ಕಾಂಗ್ರೆಸ್ ಪಕ್ಷದ ಉನ್ನತ ಹುದ್ದೆ ಕಾರ್ಯಾಧ್ಯಕ್ಷರಾಗಿ ನೇಮಕವಾಗುವ ಮೂಲಕ ಮುಸ್ಲಿಂ ಸಮುದಾಯದ ಬಹುದಿನದ ಬೇಡಿಕೆ ಈಡೇರಿಕೆದಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಉಳ್ಳಾಲ ದರ್ಗಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತ್ವಾಹ ಹಾಜಿ, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷರಾದ ಮುಸ್ತಫ ಅಬ್ದುಲ್ಲಾ, ಹಾಜಿ, ಇಬ್ರಾಹಿಂ ಕಕ್ಕೆತೋಟ, ಕಾರ್ಯದರ್ಶಿ ಹಾಜಿ ಎ.ಕೆ.ಮೊಹಿಯ್ಯುದ್ದೀನ್, ಅರಬಿಕ್ ಟ್ರಸ್ಟ್ ಕಾರ್ಯದರ್ಶಿ ಆಸಿಫ್ ಅಬ್ದುಲ್ಲಾ, ಕಾಂಗ್ರೆಸ್ ಮುಖಂಡರುಗಳಾದ ಎನ್.ಎಸ್.ಕರೀಂ, ಫಾರೂಕ್ ಫರಂಗಿಪೇಟೆ, ದರ್ಗಾ ಸಮಿತಿ ಸದಸ್ಯರಾದ ಹಸನಬ್ಬ ಕಡಪರ, ಹಮ್ಮಬ್ಬ ಕೋಟೇಪುರ, ಕಾಸಿಂ ಕೋಡಿ, ನಝೀರ್ ಸುಂದರ ಬಾಗ್, ಇಬ್ರಾಹಿಂ ಹಾಜಿ ಉಳ್ಳಾಲ ಬೈಲ್, ಅರೇಬಿಕ್ ಟ್ರಸ್ಟ್ ಸದಸ್ಯ ಯೂಸುಫ್ ಉಳ್ಳಾಲ್, ಹನೀಫ್ ಕೋಡಿ ಉಪಸ್ಥಿತರಿದ್ದರು.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am