ಬ್ರೇಕಿಂಗ್ ನ್ಯೂಸ್
06-12-21 12:10 pm HK Desk news ಕರಾವಳಿ
Photo credits : Headline Karnataka
ಉಳ್ಳಾಲ, ಡಿ.6: ಪಜೀರು ಗ್ರಾಮದ ಕಂಬಳಪದವಿನಲ್ಲಿರುವ ಬ್ಲೂ ಲೈನ್ ಫಿಶ್ ಮಿಲ್ ಫ್ಯಾಕ್ಟರಿಯಲ್ಲಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕ ನಿಗೂಢ ಸಾವನ್ನಪ್ಪಿದ್ದು ಮೃತದೇಹವನ್ನ ಕಂಪನಿಯ ಆಡಳಿತ ವಿಮಾನದಲ್ಲಿ ತರಾತುರಿಯಲ್ಲಿ ಸಾಗಿಸಿದೆ.
ಝಾರ್ಖಂಡ್ ರಾಜ್ಯದ ಜಸ್ಪುರ್ ಜಿಲ್ಲೆಯ ನಿವಾಸಿ ಜುಗನ್ ರಾಮ್ (19) ಮೃತ ವಲಸೆ ಕಾರ್ಮಿಕ. ಮೃತ ಜುಗನ್ ರಾಮ್ ಮೂರು ತಿಂಗಳುಗಳಿಂದ ಕಂಬಳಪದವಿನ ಬ್ಲೂ ಲೈನ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದನೆನ್ನಲಾಗಿದೆ. ಕಳೆದ ನವೆಂಬರ್ 30 ರಂದು ಜುಗನ್ ರಾಮ್ ಫ್ಯಾಕ್ಟರಿ ಒಳಗೆ ಸರಕು ಗೋಣಿ ಚೀಲ ಎತ್ತಿ ಸಾಗಿಸುತ್ತಿದ್ದ ವೇಳೆ ಜಾರಿ ಬಿದ್ದು ತಲೆಯ ಹಿಂಭಾಗಕ್ಕೆ ಏಟು ತಗಲಿ ಗಾಯಗೊಂಡಿದ್ದನೆನ್ನಲಾಗಿದೆ. ಗಾಯಾಳುವನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಜುಗನ್ ರಾಮ್ ಡಿಸೆಂಬರ್ 3 ರ ಶುಕ್ರವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಅಸಹಜ ( ಸೆಕ್ಷನ್ 174 ಸಿ) ಸಾವು ಪ್ರಕರಣ ದಾಖಲಾಗಿದ್ದು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಬ್ಲೂ ಲೈನ್ ಕಂಪನಿಯು ಕಾರ್ಮಿಕನ ಮೃತದೇಹವನ್ನ ತರಾತುರಿಯಲ್ಲಿ ವಿಮಾನದ ಮೂಲಕ ಜಾರ್ಖಂಡ್ ಗೆ ಆತನ ಊರಿಗೆ ರವಾನಿಸುವ ಕೆಲಸ ಮಾಡಿದೆ. ವಲಸೆ ಕಾರ್ಮಿಕ ಜುಗನ್ ರಾಮ್ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಕಂಬಳ ಪದವಿನಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಬ್ಲೂ ಲೈನ್ ಕಂಪನಿಯ ಎರಡು ಫಿಶ್ ಮಿಲ್ ಫ್ಯಾಕ್ಟರಿಗಳು ಕಾರ್ಯಾಚರಿಸುತ್ತಿವೆ. ಫ್ಯಾಕ್ಟರಿ ಒಳಗೆ ಬಹುತೇಕ ಹೊರ ರಾಜ್ಯದ ವಲಸೆ ಕಾರ್ಮಿಕರೇ ಕೆಲಸದಲ್ಲಿದ್ದಾರೆ. ಕಾರ್ಮಿಕರಿಗೆ ಈ ಫ್ಯಾಕ್ಟರಿಯಲ್ಲಿ ಸರಿಯಾದ ಸುರಕ್ಷತಾ ವ್ಯವಸ್ಥೆಗಳಿಲ್ಲವೆಂದು ಹೇಳಲಾಗುತ್ತಿದೆ. ಸ್ಥಳೀಯರಿಗಾಗಲಿ, ಮಾಧ್ಯಮ ಮಂದಿಗಳಾಗಲಿ ಈ ಫ್ಯಾಕ್ಟರಿ ಒಳಗಡೆ ಪ್ರವೇಶ ಕಷ್ಟ ಸಾಧ್ಯ. ಹಾಗಾಗಿ ಕಾರ್ಮಿಕ ಜುಗನ್ ರಾಮ್ ಜಾರಿ ಬಿದ್ದು ಸತ್ತನೇ ಅಥವಾ ಇನ್ನಾವುದೋ ಕಾರಣದಿಂದ ಸಾವು ಆಗಿದೆಯೇ ಎಂಬ ಬಗ್ಗೆ ಸಂಶಯವಿದ್ದು ವಲಸೆ ಕಾರ್ಮಿಕನ ಸಾವಿಗೆ ನ್ಯಾಯ ಸಿಗಬೇಕಿದೆ.

ಪರಿಸರದಲ್ಲಿ ದುರ್ನಾತ ಹಬ್ಬಿಸಿರುವ ಫ್ಯಾಕ್ಟರಿ
ಪಜೀರು ಗ್ರಾಮದ ಕಂಬಳ ಪದವಿನಲ್ಲಿ ಮೀನಿನ ಉತ್ನನ್ನಗಳನ್ನ ತಯಾರಿಸುವ ಬ್ಲೂ ಲೈನ್ ಫ್ಯಾಕ್ಟರಿಯಿಂದ ನಿತ್ಯವೂ ದುರ್ನಾತ ಬರುತ್ತಿದ್ದು ಪರಿಸರ ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಂಪನಿ ವಿರುದ್ಧ ಸ್ಥಳೀಯ ಪಜೀರು ಪಂಚಾಯತ್ ಆಡಳಿತ ಕ್ರಮ ಕೈಗೊಂಡಿಲ್ಲವೆಂದು ಕಂಬಳಪದವಿನ ಸ್ಥಳೀಯ ನಿವಾಸಿಯೋರ್ವರು ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ. ಫ್ಯಾಕ್ಟರಿಯಿಂದ ದುರ್ನಾತ ಹೊರ ಬರುತ್ತಿದ್ದು ಈ ಬಗ್ಗೆ ಸ್ಥಳೀಯ ಯಾರೊಬ್ಬರು ಗ್ರಾಮ ಸಭೆಗಳಲ್ಲಿ ಧ್ವನಿ ಎತ್ತುವುದಾಗಲೀ, ಲಿಖಿತ ದೂರುಗಳನ್ನಾಗಲಿ ನೀಡಿಲ್ಲವೆಂದು ಪಜೀರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಫೀಕ್ ಪಜೀರು ಹೇಳಿದ್ದಾರೆ.
Blueline fish mill Jarkand employee dies in suspicious way in Mangalore office, body shifted via flight to home town. A case has been registered at the Konaje Police Station.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm