ಬ್ರೇಕಿಂಗ್ ನ್ಯೂಸ್
14-09-20 01:16 pm Mangalore Correspondent ಕರಾವಳಿ
ಮಂಗಳೂರು, ಸೆ.14: ಡಾ.ಎಮ್.ವಿ.ಶೆಟ್ಟಿ ಟ್ರಸ್ಟ್ ಕಾಲೇಜುಗಳ ಸ್ಥಾಪಕ ಕಾರ್ಯದರ್ಶಿ ಡಾ.ಎಮ್.ಆರ್.ಶೆಟ್ಟಿ ಇಂದು ನಿಧರಾಗಿದ್ದಾರೆ.
ದಿವಂಗತ ಡಾ. ಎಮ್.ವಿ.ಶೆಟ್ಟಿಯವರ ಪುತ್ರರಾಗಿರುವ ಡಾ. ಎಮ್. ರಾಮಗೋಪಾಲ ಶೆಟ್ಟಿ ಅವರು ಪತ್ನಿ ಪ್ರೊ.ಹಿಮಾ ಊರ್ಮಿಳಾ ಶೆಟ್ಟಿ, ಮಕ್ಕಳಾದ ಡಾ. ದಿವ್ಯಾಂಜಲಿ ಶೆಟ್ಟಿ, ಡಾ. ರೋಹಿಲಾ ಶೆಟ್ಟಿ ಅವರನ್ನು ಅಗಲಿದ್ದಾರೆ.
ಡಾ.ಎಮ್.ವಿ. ಶೆಟ್ಟಿ ಟ್ರಸ್ಟ್ ಮೂಲಕ ರಾಮಗೋಪಾಲ ಶೆಟ್ಟಿಯವರು ಮಂಗಳೂರು ಯುನಿವರ್ಸಿಟಿ ಅಡಿಯಲ್ಲಿ ನರ್ಸಿಂಗ್, ಫಿಸಿಯೋಥೆರಪಿ, ವಾಕ್ ಹಾಗೂ ಶ್ರವಣ, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಹಾಗೂ ಸಾಮಾಜಿಕ ಕಾರ್ಯ ಹಾಗೂ ಶಿಕ್ಷಣದಂತಹ ಹಲವು ವೃತ್ತಿಪರ ಕೋರ್ಸ್ಗಳನ್ನು ಆರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇವರ ಮಾರ್ಗದರ್ಶನ ಹಾಗೂ ಆಡಳಿತದ ಅಡಿಯಲ್ಲಿ ಟ್ರಸ್ಟ್ ಬೆಂಗಳೂರಿನ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್, ಮಂಗಳೂರು ಯುನಿವರ್ಸಿಟಿಯ ಸಂಯೋಜಿತ 15 ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳನ್ನು 8 ವಿಭಿನ್ನ ವಿಭಾಗಗಳಲ್ಲಿ ಆರಂಭಿಸಿತ್ತು.
ಡಾ.ಶೆಟ್ಟಿಯವರು ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲ್ನಲ್ಲಿ ಆರಂಭಿಕ ಶಿಕ್ಷಣ ಪಡೆದಿದ್ದು, ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ತನ್ನ ಪದವಿ ಹಾಗೂ ಸ್ನಾತಕೋತ್ತರ ವೃತ್ತಿಪರ ಶಿಕ್ಷಣವನ್ನು ಪೂರೈಸಿದ್ದರು. ಬಳಿಕ ಅವರು ಉನ್ನತ ಶಿಕ್ಷಣಕ್ಕೆ ಇಂಗ್ಲೆಂಡ್ಗೆ ತೆರಳಿದರು. ಇಂಗ್ಲೆಂಡ್ನಿಂದ ವಾಪಾಸಾದ ಬಳಿಕ ಕೆ.ಎಂ.ಸಿ.ಯಲ್ಲಿ ಸರ್ಜರಿಯ ಸಹಾಯಕ ಪ್ರೊಫೆಸರ್ ಆದರು. 1989ರ ತನಕ ಇಲ್ಲಿಯೇ ಸೇವೆ ಸಲ್ಲಿಸಿದ್ದರು.
ಭಾರತೀಯ ಪುನರ್ವಸತಿ ಮಂಡಳಿಯ ಕಾರ್ಯಕಾರಿ ಸದಸ್ಯರಾಗಿಯೂ, ಮಂಗಳೂರು ಯುನಿವರ್ಸಿಟಿ ಹಾಗೂ ಬೆಂಗಳೂರಿನ ಆರ್ಜಿಯುಜಿಎಚ್ಎಸ್ನಲ್ಲಿ ಮೂರು ವರ್ಷಗಳ ಕಾಲ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
Join our WhatsApp group for latest news updates
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm